ಯಲಬುರ್ಗಾ: ನೆರೆ ರಾಜ್ಯ ಮಹಾರಾಷ್ಟ್ರದ ಎರಡು ವಿಶ್ವವಿದ್ಯಾಲಯಗಳ ಕನ್ನಡಭಾಷಾ ವಿಷಯಗಳ ಪಠ್ಯಕ್ಕೆ ತಾಲ್ಲೂಕಿನ ಬೇವೂರ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕಿ ಅನುಸೂಯ ಜಹಗೀರದಾರ ಅವರ ಎರಡು ಗಜಲ್ಗಳು ಆಯ್ಕೆಯಾಗಿವೆ. ಯಲಬುರ್ಗಾ
ಇದನ್ನೂ ಓದಿ : ಪಟಾಕಿ ಸಿಡಿದು ನಾರಾಯಣ ನೇತ್ರಾಲಯದಲ್ಲಿ 20 ಪ್ರಕರಣ ದಾಖಲು
ಒಟ್ಟು 50 ಗಜಲ್ ರಚನೆಕಾರರ 100 ಗಜಲ್ಗಳನ್ನು ಪಠ್ಯಕ್ಕೆ ಪರಿಗಣಿಸಲಾಗಿದೆ ಎಂದು ಗಜಲ್ ಧಾರೆ ಪಠ್ಯಪುಸ್ತಕದ ಪ್ರಧಾನ ಸಂಪಾದಕರಾದ ಸಿದ್ಧರಾಮ ಹೊನ್ಕಲ್ ಹಾಗೂ ಶಿವಾಜಿ ವಿ.ವಿ. ಕನ್ನಡ ಅಭ್ಯಾಸ ಮಂಡಳಿ ಅಧ್ಯಕ್ಷ ಗುರುಸಿದ್ದಯ್ಯ ಸ್ವಾಮಿ ತಿಳಿಸಿದ್ದಾರೆ. ಕೊಲ್ಲಾಪುರದ ಶಿವಾಜಿ ವಿಶ್ವವಿದ್ಯಾಲಯದ ಬಿ.ಎ. ಎರಡನೇ ವರ್ಷ ಹಾಗೂ ಪುಣ್ಯಶ್ಲೋಕ ಅಹಿಲ್ಯಾದೇವಿ ಹೋಳ್ಕರ್ ಸೊಲ್ಲಾಪುರ ವಿಶ್ವವಿದ್ಯಾಲಯದ ಬಿ.ಕಾಂ ಮೂರನೇ ವರ್ಷ ಹಾಗು ಬಿವಿಎ (ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್) ನ ಮೂರನೇ ಸೆಮಿಸ್ಟರ್ ಒಟ್ಟು ಎರಡು ವಿಶ್ವವಿದ್ಯಾಲಯ ಮೂರು ಕೋರ್ಸ್ಗಳ ಅಭ್ಯಾಸಕ್ಕಾಗಿ 2025-26ನೇ ಸಾಲಿನಿಂದ ಪಠ್ಯವಾಗಿ ಆಯ್ಕೆಯಾಗಿವೆ. ಯಲಬುರ್ಗಾ
ಕಥೆ, ಕವನ, ಗಜಲ್ಗಳು ಸೇರಿ ಒಟ್ಟು 6 ಪುಸ್ತಕಗಳನ್ನು ಪ್ರಕಟಿಸಿರುವ ಅನುಸೂಯ ಅವರು, ಹಿಂದೂಸ್ಥಾನಿ ಸಂಗೀತದಲ್ಲಿಯೇ ಒಳ್ಳೆಯ ಸಾಧನೆ ಮಾಡಿದ್ದಾರೆ. ಕರ್ನಾಟಕ ಸರ್ಕಾರವು 2007ರಲ್ಲಿ ರಾಜ್ಯಮಟ್ಟದ ಉತ್ತಮ ವಿಶೇಷ ಶಿಕ್ಷಕಿ ಪ್ರಶಸ್ತಿ ನೀಡಿ ಗೌರವಿಸಿತ್ತು. ಇವರ ಗಜಲ್ಗಳು ನೆರೆ ರಾಜ್ಯದ ಪಠ್ಯವಾಗಿ ಆಯ್ಕೆಯಾಗಿದ್ದು, ಜಿಲ್ಲೆ ಹಾಗೂ ತಾಲ್ಲೂಕಿನ ಸಾಹಿತಿಗಳಿಗೂ ಹಾಗೂ ಸಾಹಿತ್ಯ ಪ್ರಿಯರಿಗೆ ಸಂತಸಕ್ಕೆ ಕಾರಣವಾಗಿದೆ ಎಂದು ಕೊಪ್ಪಳ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ವೀರಣ್ಣ ನಿಂಗೋಜಿ ತಿಳಿಸಿದ್ದಾರೆ.
ಇದನ್ನೂ ನೋಡಿ: ಚಾಂದಿನಿ ಸುಳ್ಯ ಸಾವಿಗೆ ಸರ್ಕಾರ ನೇರ ಹೊಣೆ – ಡಿವೈಎಫ್ಐ ಆರೋಪ Janashakthi Media
