ಅನ್ಯ ಕೋಮಿನ ಯುವಕನ ಜತೆ ಪ್ರೀತಿ; ಮಗಳನ್ನೇ ಸಿನಿಮೀಯ ರೀತಿಯಲ್ಲಿ ಕೊಲೆ ಮಾಡಿದ ತಂದೆ!

ಬಳ್ಳಾರಿ: ಅನ್ಯಕೋಮಿನ ಯುವಕನನ್ನು ಪ್ರೀತಿಸಿದ್ದಕ್ಕೆ ತಂದೆಯೇ ಮಗಳನ್ನು ಕೊಲೆ ಮಾಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಕುಡಿತಿನಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಬುಡ್ಗ ಜಂಗಮ ಕಾಲನಿ ನಿವಾಸಿ ಓಂಕಾರಗೌಡ ತನ್ನ ಮಗಳನ್ನು ಕೊಲೆ ಮಾಡಿರುವ ಆರೋಪಿ.

ಕೊಲೆಯಾದ ಯುವತಿ ಎಂಟನೇ ತರಗತಿ ಓದುತ್ತಿದ್ದಳು. ಅನ್ಯ ಕೋಮಿನ ಯುವಕನೊಂದಿಗೆ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದಳು‌. ಈ ಬಗ್ಗೆ ಮನೆಯವರಿಗೆ ಗೊತ್ತಾಗಿ ಯುವಕನಿಂದ ದೂರವಿರುವಂತೆ ಎಚ್ಚರಿಕೆ ನೀಡಿದ್ದಾರೆ. ಆದರೂ ಆಕೆ ಆ ಯುವಕನೊಡನೆ ಪ್ರೀತಿ-ಒಡನಾಟ ಮುಂದುವರಿಸಿದ್ದಳು.

ಓಂಕಾರಗೌಡನ ಜೊತೆಗೆ ಕೆಲಸ ಮಾಡುತ್ತಿದ್ದ ನಾಗರಾಜ್ ಎನ್ನುವ ಯುವಕನನೊಂದಿಗೆ ಮಗಳು ಪ್ರೀತಿ ಮಾಡುತ್ತಿದ್ದಳು. ಈ ವಿಷಯ ಮನೆಯಲ್ಲಿ ಗೊತ್ತಾಗಿ ದೊಡ್ಡ ಜಗಳವೇ ನಡೆದಿದೆ. ಮಗಳನ್ನು ಹೊಡೆದು ಬಡೆದು ಬುದ್ಧಿ‌ ಹೇಳಲು ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ ಎಂದು ವರದಿಯಾಗಿದೆ.

ಮಗಳು ಓದದಕ್ಕಿಂತ ಪೋನ್ ಮಾತನಾಡೋದೇ ಹೆಚ್ಚಾಗಿತ್ತು. ಈ ವಿಚಾರವಾಗಿ ಸಾಕಷ್ಟು ಬಾರಿ ಮನೆಯಲ್ಲಿ ಗಲಾಟೆಯೂ ಆಗಿದೆ. ಒಂದು ದಿನ ಶಾಲೆಗೆಂದು ತೆರಳಿದ ಮಗಳು ಮಾರನೇ ದಿನ ಮನೆಗೆ ಬಂದಿದ್ದಳೆ. ಇದರಿಂದ ಮತ್ತಷ್ಟು ಕೋಪಗೊಂಡ ಓಂಕಾರಗೌಡ ಒಂದೇರಡು ದಿನ ತಣ್ಣಗಿದ್ದು ಮಗಳ ಕೊಲೆಗೆ ಆಲೋಚನೆ ಮಾಡಿದ್ದಾನೆ.

ಅಕ್ಟೋಬರ್ 31ರಂದು ಮಧ್ಯಾಹ್ನ ಮಗಳನ್ನು ಸಿನಿಮಾ ತೋರಿಸುವುದಾಗಿ ತನ್ನ ಬೈಕ್‌ನಲ್ಲಿ ಕರೆದೊಯ್ದು ಚಿತ್ರಮಂದಿರದ ಬಳಿ ಹೋದಾಗ ಸಿನಿಮಾ ಆರಂಭವಾಗಿತ್ತು, ಅಲ್ಲಿಂದ ಹೊಟೇಲ್‌ಗೆ ಕರೆದೊ‌ಯ್ದು ತಿಂಡಿ ತಿನ್ನಿಸಿದ. ಬಳಿಕ ದೊಡ್ಡ ಬಸವೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನ ಮಾಡಿಸಿ, ಆಭರಣದ ಅಂಗಡಿಯಲ್ಲಿ ಒಂದು ಜತೆ ಓಲೆ, ಉಂಗುರವನ್ನೂ ಮಗಳಿಗೆ ಕೊಡಿಸಿದ್ದಾನೆ.

ಊರಿಗೆ ಹಿಂತಿರುಗುವ ಹೊತ್ತಿಗೆ ರಾತ್ರಿಯಾಗಿತ್ತು. ಪಟ್ಟಣದ ಸಿದ್ದಮ್ಮನಹಳ್ಳಿ ಬಳಿಯ ಎಚ್‌ಎಲ್‌ಸಿ ಕಾಲುವೆ ಬಳಿಗೆ ಮಗಳನ್ನು ಕರೆತಂದು, “ಸ್ವಲ್ಪ ಹೊತ್ತು ನಿಂತಿರು, ಕೆಲಸವಿದೆ” ಎಂದು ಹೇಳಿ ಕಣ್ಮರೆಯಾದ ಓಂಕಾರಗೌಡ ಆನಂತರ ಹಿಂದಿನಿಂದ ಬಂದು ಕಾಲುವೆಗೆ ಅವಳನ್ನು ತಳ್ಳಿದ್ದಾನೆ. ಬಾಲಕಿ “ಅಪ್ಪ, ಅಪ್ಪ” ಎಂದು ಕೂಗುತ್ತ ನೀರಿನಲ್ಲಿ ಕೊಚ್ಚಿಕೊಂಡು ಹೋದಳು. ಆನಂತರ ಓಂಕಾರಗೌಡ ಬೈಕ್‌ ಅನ್ನು ತನ್ನ ಗೆಳೆಯ ಭೀಮಪ್ಪನ ಮನೆಯಲ್ಲಿ ಬಿಟ್ಟು ತಿರುಪತಿಗೆ ಪರಾರಿಯಾಗಿದ್ದಾನೆ.

ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರಿಗೆ ವಿಷಯ ತಿಳಿದಿದೆ. ಮಗಳನ್ನು ತಾನೇ ಹತ್ಯೆ ಮಾಡಿರುವುದಾಗಿ ಪೊಲೀಸರ ಬಳಿ ತಪ್ಪೊಪ್ಪಿಕೊಂಡಿದ್ದಾನೆ. ಬಾಲಕಿಯ ಶವ ಇನ್ನೂ ಪತ್ತೆಯಾಗದಿರುವುದರಿಂದ ಪೊಲೀಸರು ಕಾಲುವೆಯಲ್ಲಿ ಶೋಧ ಕಾರ್ಯ ನಡೆಸಿಸುತ್ತಿದ್ದಾರೆ.

ಕುಡತಿನಿ ಪೊಲೀಸ್‌ ಠಾಣೆಯಲ್ಲಿ ಮೃತಳ ತಾಯಿ ಪದ್ಮ ದೂರಿನನ್ವಯ ತಿರುಪತಿಯಿಂದ ಬರೋವಾಗಲೇ‌ ಪೊಲೀಸರು ಓಂಕಾರಗೌಡ ನನ್ನು ಕೊಪ್ಪಳದಲ್ಲಿ ಬಂಧಿಸಿದ್ದಾರೆ. ಇನ್ನೂ ಕೊಲೆಗೂ‌ ಮುನ್ನ‌ ಮಗಳ ಹೆಸರಿನಲ್ಲಿ 20 ಲಕ್ಷ ರೂ.ಗಳನ್ನು ಸ್ನೇಹಿತನ ಹೆಸರಿಗೆ ವರ್ಗಾವಣೆ ಮಾಡಿದ್ದಾನೆ.

ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಓಂಕಾರಗೌಡ ಸೇರಿ ಇಬ್ಬರನ್ನು  ಪೊಲೀಸರು ಬಂದಿಸಿದ್ದಾರೆ. ‌ಆರೋಪಿಯು ತೋರಣಗಲ್ ಗ್ರಾಮದ ವೈನ್ ಶಾಪ್ ವೊಂದರಲ್ಲಿ ಮ್ಯಾನೇಜರ್ ಅಗಿದ್ದಾನೆ.

Donate Janashakthi Media

Leave a Reply

Your email address will not be published. Required fields are marked *