ಆಂಧ್ರಪ್ರದೇಶ | ಲಾರಿಗೆ ಡಿಕ್ಕಿ ಹೊಡೆದ ಬಸ್‌; 7 ಮಂದಿ ಸಾವು

ನೆಲ್ಲೂರು: ನಿಂತಿದ್ದ ಲಾರಿಗೆ ಖಾಸಗಿ ಟ್ರಾವೆಲ್ ಬಸ್‌  ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಮೃತಪಟ್ಟು, ಹದಿನೈದು ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಮುಸುನೂರು ಟೋಲ್ ಪ್ಲಾಜಾ ಬಳಿ ಶನಿವಾರ ಮುಂಜಾನೆ ನಡೆದಿದೆ. ಗಾಯಗೊಂಡವರಲ್ಲಿ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ ಎಂದು ವರದಿಗಳು ಉಲ್ಲೇಖಿಸಿವೆ.

ಖಾಸಗಿ ಟ್ರಾವೆಲ್ ಬಸ್ ಚೆನ್ನೈನಿಂದ ಹೈದರಾಬಾದ್‌ಗೆ ತೆರಳುತ್ತಿದ್ದಾಗ ಮುಂಜಾನೆ 3.00 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ ಎಂದು ಕವಾಲಿ ಪೊಲೀಸರು ಹೇಳಿದ್ದಾರೆ. ನಿಂತಿದ್ದ ಲಾರಿಗೆ ಅತಿವೇಗದಿಂದ ಬಂದ ಬಸ್ ಹಿಂಬದಿಯಲ್ಲಿ ಡಿಕ್ಕಿ ಹೊಡೆದಿದೆ, ಇದೇ ವೇಳೆ ಎದುರಿನಿಂದ ಬಂದ ಇನ್ನೊಂದು ಲಾರಿ ನಿಲ್ಲಿಸಲಾಗಿದ್ದ ಲಾರಿಯ ಮುಂಭಾಗಕ್ಕೆ ಡಿಕ್ಕಿ ಹೊಡೆದಿದೆ.ಆಂಧ್ರಪ್ರದೇಶ

ಇದನ್ನೂ ಓದಿ:‘ಮನೆ ಕೆಡವಿ ಪತ್ರಿಕೆಯಲ್ಲಿ ಪ್ರಕಟಿಸುವುದು ಫ್ಯಾಶನ್ ಆಗಿದೆ’ – ಮುನ್ಸಿಪಲ್ ಕಾರ್ಪೊರೇಷನ್‌ ವಿರುದ್ಧ ಹೈಕೋರ್ಟ್‌ ಆಕ್ರೋಶ

ಎರಡೂ ಅಪಘಾತಗಳು ಬಹುತೇಕ ಏಕಕಾಲದಲ್ಲಿ ಸಂಭವಿಸಿದ್ದು, ಪರಿಣಾಮ ಮೂರೂ ವಾಹನಗಳು ಜಖಂಗೊಂಡಿವೆ. ಸ್ಥಳದಲ್ಲೇ ನಾಲ್ವರು ಮೃತಪಟ್ಟರೆ, ಮೂವರು ಗಾಯಗೊಂಡು ಕವಲಿಯ ಏರಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕಾವಲಿ ಉಪವಿಭಾಗದ ವಿವಿಧ ಠಾಣೆಗಳ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಐದು ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸುವ ಮೂಲಕ ಗಾಯಾಳುಗಳನ್ನು ಕವಲಿಯ ಏರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ.

ಮೃತರಲ್ಲಿ ಖಾಸಗಿ ಬಸ್ ಹಾಗೂ ಲಾರಿ ಚಾಲಕರು ಸೇರಿದ್ದಾರೆ. ಮೃತ ಪ್ರಯಾಣಿಕರಲ್ಲಿ ಇಬ್ಬರು ಚೆನ್ನೈ ಮೂಲದ ರೂಪಾ (32) ಮತ್ತು ಸುರೇಶ್ (33) ಎಂದು ಗುರುತಿಸಲಾಗಿದೆ. ಉಳಿದವರ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ. ಒಂದೆರಡು ದೇಹಗಳನ್ನು ಮತ್ತು ಗಾಯಗೊಂಡ ಪ್ರಯಾಣಿಕರನ್ನು ಮ್ಯಾಂಗಲ್ಡ್ ಸ್ಟೀಲ್ನಿಂದ ಹೊರತೆಗೆಯಲು ಗ್ಯಾಸ್ ಕಟ್ಟರ್ಗಳನ್ನು ಬಳಸಬೇಕಾಯಿತು ಎಂದು ಪೊಲೀಸರು ಹೇಳಿದ್ದಾರೆ.

ಖಾಸಗಿ ಕಂಪನಿಗೆ ಸೇರಿದ ಬಸ್‌ನಲ್ಲಿ 42 ಮಂದಿ ಪ್ರಯಾಣಿಕರಿದ್ದರು ಎಂದು ವರದಿಯಾಗಿದೆ. ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ನೆಲ್ಲೂರಿನಿಂದ ವಿಜಯವಾಡ ಕಡೆಗೆ ತೆರಳುತ್ತಿದ್ದ ವಾಹನಗಳು ಎರಡು ಕಿ.ಮೀ ಉದ್ದದ ಜಾಮ್‌ನಲ್ಲಿ ಸಿಲುಕಿಕೊಂಡಿದ್ದವು.

ಘಟನೆ ಬಗ್ಗೆ ಪ್ರಕರಣ ದಾಖಲಾಗಿದ್ದು, ನೆಲ್ಲೂರು ಮತ್ತು ಕಾವಲಿಯ ಹಿರಿಯ ಪೊಲೀಸ್ ಅಧಿಕಾರಿಗಳು ಅಪಘಾತ ಸ್ಥಳವನ್ನು ಪರಿಶೀಲನೆ ನಡೆಸಿದ್ದಾರೆ.  ರಾಜ್ಯಪಾಲ ಎಸ್ ಅಬ್ದುಲ್ ನಜೀರ್ ಅವರು ಅಪಘಾತದ ಬಗ್ಗೆ ತಮ್ಮ ದುಃಖ ಮತ್ತು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಅವರು ಸಾಂತ್ವನ ಹೇಳಿದ್ದಾರೆ.

ವಿಡಿಯೊ ನೋಡಿ:ಯುವಜನತೆಯನ್ನು ಮತಾಂಧತೆಯ ಖೆಡ್ಡಾಗೆ ತಳ್ಳಿದ ಸಂಘ ಪರಿವಾರ… Janashakthi Media

Donate Janashakthi Media

Leave a Reply

Your email address will not be published. Required fields are marked *