ಮದ್ಯಪಾನ ಮಾಡಿ ವಾಹನ ಚಲಾಯಿಸಿದ 26 ಸ್ಕೂಲ್ ಬಸ್ ಚಾಲಕರ ಬಂಧನ; ಪ್ರಕರಣ ದಾಖಲು

ಬೆಂಗಳೂರು: ಆಗಸ್ಟ್ 5ರಂದು ನಡೆಸಿದ ಕಾರ್ಯಾಚರಣೆಯಲ್ಲಿ 26 ಸ್ಕೂಲ್ ಬಸ್ ಚಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಮದ್ಯಪಾನ ಮಾಡಿ ಶಾಲಾ ಬಸ್ ಚಲಾಯಿಸುವ ಚಾಲಕರ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಳ್ಳುತ್ತಿದ್ದಾರೆ. ಈ ವರ್ಷ ಜನವರಿಯಿಂದ ಪ್ರತಿ ತಿಂಗಳು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ.

ಇದು ಈ ವರ್ಷ ದಿನವೊಂದರಲ್ಲಿ ದಾಖಲಾದ ಅತಿಹೆಚ್ಚಿನ ಪ್ರಕರಣವಾಗಿದೆ. ಇದೇ ವೇಳೆ ಪಾಸಣೆ ನಡೆಸಿದ 3,676 ಶಾಲಾ ಬಸ್‌ಗಳು ಮತ್ತು ವ್ಯಾನ್‌ಗಳ ಪೈಕಿ 26 ಶಾಲಾ ಬಸ್‌ಗಳ ಚಾಲಕರನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಇದು ಈ ವರ್ಷ ದಿನವೊಂದರಲ್ಲಿ ಶಾಲಾ ಬಸ್‌ಗಳ ಚಾಲಕರ ವಿರುದ್ಧ ದಾಖಲಿಸಲಾದ ಅತಿಹೆಚ್ಚಿನ ಸಂಖ್ಯೆಯ ಪುಕರಣಗಳಾಗಿವೆ.

ಒಂದು ತಿಂಗಳ ಹಿಂದೆ ನಡೆದಿದ್ದ ಕಾರ್ಯಾಚರಣೆಯಲ್ಲಿ 23 ಚಾಲಕರು ಮದ್ಯಪಾಮ ಮಾಡಿ ವಾಹನ ಚಲಾಯಿಸಿ ಸಿಕ್ಕಿಬಿದ್ದಿದ್ದರು. ಈ ವರ್ಷ ಇಲ್ಲಿಯವರೆಗೆ ಒಟ್ಟು 72 ಚಾಲಕರ ಮೇಲೆ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ್ದಕ್ಕೆ ಸಂಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಇದು ಮಕ್ಕಳ ಸುರಕ್ಷತೆಯ ಬಗ್ಗೆ ಪೋಷಕರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಪಿಎಂ ಕುಸುಮ್ ಯೋಜನೆಗೆ ರಾಜ್ಯದಿಂದ 1.79 ಲಕ್ಷ ರೈತರಿಂದ ಅರ್ಜಿ: ಪ್ರಹ್ಲಾದ್ ಜೋಷಿ

ಚಿಕ್ಕ ವ್ಯಾನ್‌ಗಳಲ್ಲಿ ಶಾಲೆಗೆ ತೆರಳುವ ಮಕ್ಕಳು ಚಾಲಕರು ಮದ್ಯದ ವಾಸನೆ ಬರುತ್ತಿದ್ದಾರೆ ಎಂದು ಕೆಲವೊಮ್ಮೆ ದೂರು ನೀಡುತ್ತಾರೆ ಎಂದು 7ನೇ ತರಗತಿ ಓದುತ್ತಿರುವ ವಿದ್ಯಾರ್ಥಿಯೊಬ್ಬನ ಪೋಷಕರಾದ ಆ‌ಆರ್‌ನಗರದ ರೇ ತಿಳಿಸಿರುವುದಾಗಿ ‘ಡಕ್ಕನ್ ಹೆರಾಲ್ಡ್’ ವರದಿ ಮಾಡಿದೆ. ಮಕ್ಕಳಿಗಾಗಿ ಹೆಚ್ಚುವರಿ ಸುರಕ್ಷತಾ ಕ್ರಮಗಳ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

ಶಾಲಾ ಬಸ್‌ಗಳಲ್ಲಿ ಸಹಾಯಕರನ್ನು ನೇಮಿಸುವುದು ಮತ್ತು ಬಸ್‌ಗಳ ಒಳಗೆ ಕಡ್ಡಾಯವಾಗಿ ಸಿಸಿಟಿವಿಗಳನ್ನು ಅಳವಡಿಸುವುದು ಅತ್ಯಗತ್ಯ, ಚಾಲಕರು ಮದ್ಯಪಾನ ಮಾಡಿದ್ದಾರೆಯೇ ಎಂದು ಪೋಷಕರು ಪರಿಶೀಲಿಸಲು ಸಾಧ್ಯವಿಲ್ಲ. ಆದ್ದರಿಂದ ಪ್ರತಿದಿನ ಬೆಳಿಗ್ಗೆ ಬಸ್‌ಗಳು ಶಾಲಾ ಆವರಣದಿಂದ ಹೊರಡುವ ಮೊದಲು ಶಾಲೆಗಳ ಸಿಬ್ಬಂದಿ ತಪಾಸಣೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಪ್ರಕರಣ ದಾಖಲಿಸಿರುವ ಚಾಲಕರ ವಿರುದ್ಧ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 185 ರ ಅಡಿಯಲ್ಲಿ ಆರೋಪ ಹೊರಿಸಲಾಗಿದ್ದು, ಅವರ ಚಾಲನಾ ಪರವಾನಗಿಗಳನ್ನು ಅಮಾನತುಗೊಳಿಸಲು ಆಯಾ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ ಶಿಫಾರಸು ಮಾಡಲಾಗಿದೆ.

ಶಾಲಾ ವಾಹನ ಚಾಲಕರ ತಪಾಸಣೆ : ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿರುವ ಕೆಲ ಚಾಲಕರಿಂದ ಅಪಘಾತ, ಎಲ್ಲೆಂದರಲ್ಲಿ ಶಾಲಾ ವಾಹನಗಳ ನಿಲುಗಡೆ ಮುಂತಾದ ಆರೋಪಗಳು ಕೇಳಿ ಬಂದಿದ್ದವು ಈ ಹಿನ್ನಲೆಯಲ್ಲಿ ತಪಾಸಣೆಯನ್ನು ಆರಂಭಿಸಲಾಗಿದೆ. ಇಲ್ಲಿಯವರೆಗೆ 12,165 ವಾಹನಗಳ ಚಾಲಕರನ್ನು ತಪಾಸಣೆಗೊಳಪಡಿಸಿದ್ದಾರೆ.

ಜ.23ರಂದು 3,414 ವಾಹನಗಳ ತಪಾಸಣೆ ಮಾಡಿ, ಮದ್ಯ ಸೇವಿಸಿ ವಾಹನ ಚಾಲನೆ ಮಾಡುತ್ತಿದ್ದ  23 ಚಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಫೆಬ್ರವರಿ 22ರಂದು 2,059 ವಾಹನಗಳನ್ನು ತಪಾಸಣೆ ಮಾಡಿ, ಏಳು ಮಂದಿ ವಿರುದ್ಧ ಎಫ್‌ಐಆರ್ ದಾಖಲು ಮಾಡಿಕೊಳ್ಳಲಾಗಿದೆ. ಜುಲೈ 9 ರಂದು ನಡೆಸಿದ ಕಾರ್ಯಾಚರಣೆಯಲ್ಲಿ 3,016 ವಾಹನಗಳನ್ನು ತಪಾಸಣೆಗೆ ಒಳ 23 ಮಂದಿ ವಿರುದ್ಧ ಎಫ್‌ಐಆರ್ ದಾಖಲು ಮಾಡಿಕೊಳ್ಳಲಾಗಿದೆ. ಆಗಸ್ಟ್ 4ರಂದು ವಿಶೇಷ ಕಾರ್ಯಾಚರಣೆ ನಡೆಸಿ, 3,676 ಚಾಲಕರನ್ನು ತಪಾಸಣೆಗೆ ಒಳಪಡಿಸಿ 26 ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ನೋಡಿ: ಕಾರವಾರದಲ್ಲಿ ಕುಸಿದು ಬಿದ್ದ ಕಾಳಿ ನದಿಯ ಸೇತುವೆ: ಲಾರಿ ಚಾಲಕನ ರಕ್ಷಣೆ!Janashakthi Media

Donate Janashakthi Media

Leave a Reply

Your email address will not be published. Required fields are marked *