ನವದೆಹಲಿ: ಚುನಾವಣಾ ಕಾರ್ಯತಂತ್ರಗಳನ್ನು ಮುಂಬರುವ ಅಸ್ಸಾಂ ವಿಧಾನಸಭಾ ಚುನಾವಣೆ ಹಿನ್ನೆಲೆ ರೂಪಿಸುವ ನಿಟ್ಟಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅಸ್ಸಾಂನ ಪಕ್ಷದ ನಾಯಕರ ಜತೆ ಚರ್ಚೆ ನಡೆಸಿದರು.
ರಾಜ್ಯದ ಕಾಂಗ್ರೆಸ್ ಪ್ರಧಾನ ಕಚೇರಿ ಇಂದಿರಾ ಭವನದಲ್ಲಿ ಸಭೆ ನಡೆಸಿದರು. ಗೌರವ್ ಗೊಗೊಯಿ ರನ್ನು ಅಸ್ಸಾಂ ಕಾಂಗ್ರೆಸ್ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲುವ ಮೂಲಕ ಬದಲಾವಣೆಗಳಾಗಿದ್ದು, ಮುಂಬರುವ ಅಸ್ಸಾಂನ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ರಾಜಕೀಯ ಕಾರ್ಯತಂತ್ರ ರೂಪಿಸುವ ನಿಟ್ಟಿನಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಐಪಿಎಲ್ 2025: ಫೈನಲ್ಸ್ ತಲುಪಿದ ಆರ್ಸಿಬಿ ತಂಡ
ಈ ಸಂಬಂಧ ರಾಹುಲ್ ಗಾಂಧಿ ಫೇಸ್ಬುಕ್ ಅಧಿಕೃತ ಖಾತೆಯಲ್ಲಿ ಅಸ್ಸಾಂ ನಾಯಕರ ಜತೆಗಿನ ಫೋಟೊಗಳನ್ನು ಹಂಚಿಕೊಂಡು ಮಾಹಿತಿ ನೀಡಿದ್ದಾರೆ.
‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ, ಹೊಸದಾಗಿ ರಚನೆಯಾದ ಅಸ್ಸಾಂನ ಕಾಂಗ್ರೆಸ್ ಸಮಿತಿ ಸದಸ್ಯರರೊಂದಿಗೆ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಸಭೆ ನಡೆಸಲಾಯಿತು ಎಂದು ರಾಹುಲ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ಈ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸೇರಿದಂತೆ ಇತರೆ ಮುಖಂಡರು ಉಪಸ್ಥಿತರಿದ್ದರು.
ಇದನ್ನೂ ನೋಡಿ: ಬಾನು ಮುಷ್ತಾಕ್ಗೆ ಬೂಕರ್ ಪ್ರಶಸ್ತಿ | ಮೂಲಭೂತವಾದಿಗಳಿಗೆ ಕಪಾಳಮೋಕ್ಷ – ಕೆ.ವಿ.ಪ್ರಭಾಕರ್ Janashakthi Media