ಅತಿವೃಷ್ಟಿ ಬರಗಾಲ ಘೋಷಿಸಲು ಪ್ರಾಂತ ರೈತ ಸಂಘ ಆಗ್ರಹ

  • ಸರಕಾರ ಕೂಡಲೆ ಪರಿಹಾರ ನೀಡುವಂತೆ ರೈತರ ಆಗ್ರಹ

ಚಿಂಚೋಳಿ: ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ರೈತರಿಗೆ ರಾಜ್ಯ ಸರಕಾರ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿ ಕರ್ನಾಟಕ ಪ್ರಾಂತರೈತ ಸಂಘ ಪ್ರತಿಭಟನೆ ಮೂಲಕ ಆಗ್ರಹಿಸಿದೆ.

ಬರಗಾಲದಿಂದ ಚಿಂಚೋಳಿ ತಾಲ್ಲೂಕನ್ನು ರಾಜ್ಯ ಮತ್ತು ಕೇಂದ್ರ ಸರಕಾರ ಕಡೆಗಣಿಸಿದ ರಾಜ್ಯ ಮತ್ತು ಕೇಂದ್ರ ಸರಕಾರದ ವಿರುದ್ಧ ರೈತರು ಘೋಷಣೆಗಳನ್ನು ಕೂಗಿದರೆ. ಒಂದೆಡೆ ಕೊರೊನಾ ಹಾಗೂ ಲಾಕ್ಡೌನ್ ನಿಂದ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. ಈಗ ಬಿದ್ದ ಅತಿವೃಷ್ಟಿ ಮಳೆಯಿಂದಾಗಿ ಬೆಳೆದ ಬೆಳೆಗಳು ನಾಶವಾಗಿವೆ. ರೈತರಿಗೆ ಇನ್ನಷ್ಟು ಸಂಕಷ್ಟುಗಳು ಎದುರಾಗುತ್ತಿವೆ ಹಾಗಾಗಿ ಸರಕಾರ ಕೂಡಲೆ ಪರಿಹಾರ ನೀಡಬೇಕು ಮತ್ತು ಚಿಂಚೋಳ್ಳಿಯನ್ನು ಅತಿವೃಷ್ಟಿ ಮಳೆಗೆ ಹಾನಿಯಾದ ತಾಲ್ಲೂಕ ಪಟ್ಟಿಗೆ ಸೇರಿಸಬೇಕು ಎಂದು ಕರ್ನಾಟಕ ಪ್ರಾಂತರೈತ ಸಂಘದ ಕಲಬುರ್ಗಿ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಆಗ್ರಹಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *