ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಬೆಂಕಿ ದುರಂತ: ಸಿಐಡಿ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ

ಬೆಂಗಳೂರು: ಆನೇಕಲ್ ಪಟ್ಟಣದ ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 14 ಮಂದಿ ಸಾವಿಗೀಡಾದ ಪ್ರಕರಣದ ತನಿಖೆಯನ್ನು ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ಒಪ್ಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಆದೇಶಿಸಿದ್ದಾರೆ. ಲೆ

ಇದೀಗ ಪೊಲೀಸರ ವಶದಲ್ಲಿರುವ ಅಂಗಡಿ ಮಾಲೀಕನ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಮುಖ್ಯಮಂತ್ರಿ ಹೇಳಿದರು. ‘ನಿಖರವಾಗಿ ಏನಾಯಿತು ಎಂದು ನಮಗೆ ತಿಳಿದಿಲ್ಲ. ಆದರೆ, (ಗೋದಾಮಿನಲ್ಲಿ) ಯಾವುದೇ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂಬುದು ತಿಳಿದುಬಂದಿದೆ. ಇತ್ತೀಚೆಗೆ ಪರವಾನಗಿಯನ್ನು ನವೀಕರಿಸಲಾಗಿದೆ. ಅಂಗಡಿಯಲ್ಲಿ ಯಾವುದೇ ಅಗ್ನಿಶಾಮಕ ಸಾಧನ ಕಂಡುಬಂದಿಲ್ಲ. ಇದು ಅಂಗಡಿ ಮಾಲೀಕನ ಸಂಪೂರ್ಣ ನಿರ್ಲಕ್ಷ್ಯವಾಗಿದೆ. ಹಾಗಾಗಿ ಘಟನೆಯ ತನಿಖೆಯನ್ನು ಸಿಐಡಿಗೆ ನೀಡುತ್ತಿದ್ದೇನೆ’ ಎಂದು ಸಿದ್ದರಾಮಯ್ಯ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರಿಗೆ ತಿಳಿಸಿದರು.

ಮೃತರ ಪೈಕಿ ಇನ್ನೂ ಕೆಲವು ಶವಗಳ ಗುರುತು ಪತ್ತೆಯಾಗಿಲ್ಲ. ‘ಘಟನೆಯಲ್ಲಿ 14 ಮಂದಿ ಸಾವಿಗೀಡಾಗಿದ್ದಾರೆ ಮತ್ತು ಮೃತರೆಲ್ಲರೂ ತಮಿಳುನಾಡಿನವರು. ಅವರಲ್ಲಿ ಹೆಚ್ಚಿನವರು ವಿದ್ಯಾರ್ಥಿಗಳು. ಅವರು ತಮ್ಮ ಶಿಕ್ಷಣಕ್ಕಾಗಿ ಹಣ ಸಂಪಾದಿಸಲು ಇಲ್ಲಿ ಕೆಲಸ ಮಾಡುತ್ತಿದ್ದರು’ ಎಂದು ಹೇಳಿದರು.

ಇದನ್ನೂ ಓದಿ: ಬೆಂಗಳೂರಿನ ಆನೇಕಲ್ ಬಳಿ ಪಟಾಕಿ ಗೋದಾಮಿನಲ್ಲಿ ಅಗ್ನಿ ದುರಂತ| ಮೃತರ ಸಂಖ್ಯೆ 14ಕ್ಕೆ ಏರಿಕೆ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಭಾನುವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಘಟನೆ ಗಂಭೀರವಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.

ಎರಡ್ಮೂರು ದಿನಗಳಲ್ಲಿ ನಾವು ತೆಗೆದುಕೊಳ್ಳಬೇಕಾದ ಕ್ರಮದ ಯೋಜನೆಯನ್ನು ರೂಪಿಸಲಿದ್ದೇವೆ… ನಾವು ಈಗಾಗಲೇ ಸತ್ತವರಿಗೆ 5 ಲಕ್ಷ ರೂಪಾಯಿಗಳನ್ನು ಘೋಷಿಸಿದ್ದೇವೆ ಮತ್ತು ಆಸ್ಪತ್ರೆಯ ವೆಚ್ಚವನ್ನು ನೋಡಿಕೊಳ್ಳಲಾಗುವುದು’ ಎಂದು ಶಿವಕುಮಾರ್ ಹೇಳಿದರು.

ಶನಿವಾರ ಮಧ್ಯಾಹ್ನ 3.30ರ ಸುಮಾರಿಗೆ ಗೋದಾಮಿನಲ್ಲಿದ್ದ ಕಾರ್ಮಿಕರು ಪಟಾಕಿಗಳನ್ನು ವಾಹನದಿಂದ ಇಳಿಸುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಧಿಕಾರಿಗಳು ಮಾಡಿದ ಹಾನಿ ಅಂದಾಜಿನ ಪ್ರಕಾರ, ಏಳು ದ್ವಿಚಕ್ರ ವಾಹನಗಳು, ಒಂದು ಕಂಟೈನರ್ ಲಾರಿ ಮತ್ತು ಇತರ ಮೂರು ವಾಹನಗಳು ಬೆಂಕಿಯಲ್ಲಿ ಸುಟ್ಟುಹೋಗಿವೆ.

ವಿಡಿಯೋ ನೋಡಿ: ಕೃಷಿ ಕ್ಷೇತ್ರದಲ್ಲಿ ಸಂಚಲನ ಮೂಡಿಸಿದಎಂಎಸ್ ಸ್ವಾಮಿನಾಥನ್Janashakthi Media

Donate Janashakthi Media

Leave a Reply

Your email address will not be published. Required fields are marked *