ಬೆಂಗಳೂರು ನಗರಕ್ಕೆ ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಬಿ ದಯಾನಂದ ನೇಮಕ

ಬೆಂಗಳೂರು: ಬೆಂಗಳೂರು ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಹಿರಿಯ ಪೊಲೀಸ್ ಅಧಿಕಾರಿ ಬಿ ದಯಾನಂದ ಅವರನ್ನು ನೇಮಕ ಮಾಡಲಾಗಿದೆ. ಮಂಗಳವಾರ ರಾಜ್ಯ ಸರ್ಕಾರ ಈ ಆದೇಶವನ್ನು ಹೊರಡಿಸಿದೆ.

ಬೆಂಗಳೂರು ಪೊಲೀಸ್ ಕಮಿಷನರ್ ಸೇರಿದಂತೆ ಕೆಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಈ ಹಿಂದೆ ಬೆಂಗಳೂರು ನಗರದ ಪೊಲೀಸ್ ಕಮಿಷನರ್ ಆಗಿ ಪ್ರತಾಪ ರೆಡ್ಡಿ ಕಾರ್ಯನಿರ್ವಾಹಣೆ ಮಾಡಿದ್ದರು. ಇದೀಗ ಅವರನ್ನು ಡಿಜಿಪಿ ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಎಡಿಜಿಪಿ ಮತ್ತು ಬೆಂಗಳೂರು ನಗರದ ಸಂಚಾರ ವಿಭಾಗದ ವಿಶೇಷ ಆಯುಕ್ತರಾಗಿದ್ದ ಎಂ.ಎ. ಸಲೀಂ ಅವರನ್ನು ಸಿಐಡಿ ಡಿಜಿಯಾಗಿ ನೇಮಿಸಲಾಗಿದೆ.

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಮೂಲದ ಬಿ.ದಯಾನಂದ್ 1994ನೇ ಬ್ಯಾಚ್​ನ ಐಪಿಎಸ್ ಅಧಿಕಾರಿ. ಹಲವು ಉನ್ನತ ಹುದ್ದೆಗಳನ್ನು ನಿರ್ವಹಿಸಿದ ಅನುಭವ ಹೊಂದಿದ್ದು, ಮೈಸೂರು ನಗರ ಪೊಲೀಸ್ ಆಯುಕ್ತರಾಗಿ, ಬೆಂಗಳೂರಿನಲ್ಲಿ ಅಪರಾಧ ವಿಭಾಗದ ಜಂಟಿ ಆಯುಕ್ತರಾಗಿ, ಸಂಚಾರ ವಿಭಾಗದ ಆಯುಕ್ತರಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *