ಕೆರೂರಿನ ಮಾರ್ಕೆಟ್​ನಲ್ಲಿ ಗುಂಪು ಘರ್ಷಣೆ, ಇಬ್ಬರಿಗೆ ಚಾಕು ಇರಿತ

ಬಾಗಲಕೋಟೆ: ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣ ಕೆರೂರಿನ ಮಾರ್ಕೆಟ್​ನಲ್ಲಿ ಗುಂಪು ಘರ್ಷಣೆ ಸಂಭವಿಸಿ ಇಬ್ಬರಿಗೆ ಚಾಕು ಇರಿಯಲಾಗಿದೆ. ದುಷ್ಕರ್ಮಿಗಳು ಅರುಣ ಕಟ್ಟಿಮನಿ, ಲಕ್ಷ್ಮಣ ಕಟ್ಟಿಮನಿ ಎಂಬುವರಿಗೆ ಚಾಕು ಇರಿದಿದ್ದಾರೆ. ಗಾಯಾಳುಗಳನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಗುಂಪು ಘರ್ಷಣೆಯ ವೇಳೆಯಲ್ಲಿ 10 ಅಂಗಡಿಗಳು ಧ್ವಂಸವಾಗಿದ್ದು, 5 ಬೈಕ್ ಗಳು ಜಖಂಗೊಂಡಿವೆ. ಎರಡು ಗುಂಪುಗಳ ನಡುವಿನ ಘರ್ಷಣೆಯಲ್ಲಿ ಮಾರುಕಟ್ಟೆ ಧ್ವಂಸಗೊಂಡಿದೆ. ಗಾಯಾಳುಗಳನ್ನು ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಕೆರೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಸ್ಥಳದಲ್ಲೇ ಮೊಕ್ಕಾಂ ಹೂಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಕೆರೂರು ಪಟ್ಟಣದಲ್ಲಿ 144 ಸೆಕ್ಷನ್ ಜಾರಿಯಲ್ಲಿದ್ದು, ಎಲ್ಲಾ ಅಂಗಡಿ ಮುಂಗಟ್ಟು‌ ಮುಚ್ಚಲಾಗಿದೆ. ಎಸ್.ಪಿ ಜಯಪ್ರಕಾಶ್ ಕೆರೂರು ಪಟ್ಟಣಕ್ಕೆ ಭೇಟಿ‌ ನೀಡಿ ಪರಿಶೀಲನೆ‌ ನಡೆಸಿದ್ದಾರೆ.

ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು ತಣ್ಣನೆಯ ವಾತಾವರಣವಿದ್ದರೂ ಬಾಗಲಕೋಟಯಲ್ಲಿ ದ್ವೇಷದ ದಳ್ಳುರಿಗೆ ಬಡಪಾಯಿಗಳ ತಳ್ಳುಗಾಡಿಗಳು ಹೊತ್ತಿ ಉರಿದು ಬೆಂಕಿಗೆ ಆಹುತಿಯಾಗಿದ್ದು ಭಯದ ವಾತಾವರಣವನ್ನು ಸೃಷ್ಟಿಸಿದೆ.

 

Donate Janashakthi Media

Leave a Reply

Your email address will not be published. Required fields are marked *