ಉಡುಪಿ: ಮಹಿಳೆಯರು ಮತ್ತು ಮಕ್ಕಳ ರಕ್ಷಣೆಯ ಗುರಿ ಹೊಂದಿರುವ ಅಕ್ಕ ಪಡೆಯನ್ನು ನವೆಂಬರ್ 19 ರಂದು ಬೆಂಗಳೂರಿನಲ್ಲಿ ಪ್ರಾರಂಭಿಸಲಾಗುವುದು ಎಂದು ನೊವೆಂಬರ್ 1ರಂದು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಆಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಘೋಷಿಸಿದ್ದಾರೆ.
ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಗಟ್ಟುವುದು, ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ದೌರ್ಜನ್ಯಕ್ಕೊಳಗಾದವರಿಗೆ ತಕ್ಷಣದ ನೆರವು ನೀಡುವುದು ಈ ಪಡೆಯ ಉದ್ದೇಶವಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಜಂಟಿ ಸಹಯೋಗದಲ್ಲಿ ಈ ಪಡೆಯನ್ನು ಆರಂಭದಲ್ಲಿ ಬೆಂಗಳೂರು, ಉಡುಪಿ, ಮೈಸೂರು ಮತ್ತು ಮಂಗಳೂರಿನಲ್ಲಿ ರಚಿಸಲಾಗುವುದು ಎಂದು ಹೆಬ್ಬಾಳ್ಕರ್ ಹೇಳಿದರು.
ಇದನ್ನೂ ಓದಿ: ತಮಿಳುನಾಡು| ಹಣೆಗೆ ಗನ್ ಇಟ್ಟು ಪಕ್ಷದಲ್ಲಿ ಉಳಿಸಿಕೊಳ್ಳಲು ಸಾಧ್ಯವಿಲ್ಲ: ಅಣ್ಣಾಮಲೈ
ಮೊದಲು 2023 ರಲ್ಲಿ ಬೀದರ್ನಲ್ಲಿ ಪೈಲಟ್ ಯೋಜನೆಯಾಗಿ ಮೇಲೆ ಅಕ್ಕ ಪಡೆಯನ್ನು ಪ್ರಾರಂಭಿಸಲಾಯಿತು. ರಾಜ್ಯ ಸರ್ಕಾರದ ಐದು ಖಾತರಿ ಯೋಜನೆಗಳನ್ನು ಉಲ್ಲೇಖಿಸಿ, ಅವು ಮಹಿಳಾ ಸಬಲೀಕರಣಕ್ಕೆ ಹೊಸ ಹುರುಪು ನೀಡಿವೆ. ಶೇ. 70–95 ರಷ್ಟು ಬಡ ಮಹಿಳೆಯರ ಜೀವನ ಮಟ್ಟವನ್ನು ಸುಧಾರಿಸಿವೆ ಎಂದು ಅವರು ಹೇಳಿದರು.
ಶಕ್ತಿ, ಗೃಹ ಜ್ಯೋತಿ ಮತ್ತು ಗೃಹ ಲಕ್ಷ್ಮಿ ಯೋಜನೆಗಳ ಮೂಲಕ ಮಾಡಲಾದ ಉಳಿತಾಯವು ಮಹಿಳೆಯರಿಗೆ ಆಹಾರ ಮತ್ತು ಪೌಷ್ಟಿಕಾಂಶದ ಅಗತ್ಯಗಳನ್ನು ಪೂರೈಸಲು ಸಹಾಯ ಮಾಡುತ್ತಿದೆ ಎಂದು ಅವರು ಹೇಳಿದರು.
ಅಂಗನವಾಡಿಗಳು ಸ್ಥಾಪನೆಯಾಗಿ 50 ವರ್ಷಗಳು ಕಳೆದಿರುವ ನವೆಂಬರ್ 19 ರಂದು ಸರ್ಕಾರವು ಸುವರ್ಣ ಮಹೋತ್ಸವವನ್ನು ಆಚರಿಸಲಿದೆ ಎಂದು ಹೆಬ್ಬಾಳ್ಕರ್ ಘೋಷಿಸಿದರು.
ಇದನ್ನೂ ನೋಡಿ: ಧರ್ಮಸ್ಥಳ ಪ್ರಕರಣ | ಎಸ್ಐಟಿ ಪೊಲೀಸರು ದೌರ್ಜನ್ಯ ಮಾಡುವಂತಿಲ್ಲ- ಹೈಕೋರ್ಟ್ ಆದೇಶ Janashakthi Media
