ರಾಯಚೂರು: ನಕಲಿ ದಾಖಲೆಯನ್ನು ನಗರದ ಮಹಾರಾಷ್ಟ್ರ ಬ್ಯಾಂಕ್ ಶಾಖೆಯ ಮ್ಯಾನೇಜರ್ ಓರ್ವ ಗ್ರಾಹಕರಿಗೆ ತಿಳಿಯದಂತೆ ಸೃಷ್ಟಿಸಿ ಗೋಲ್ಡ್ ಲೋನ್ ಮಂಜೂರು ಮಾಡಿ 10 ಕೋಟಿ ವಂಚಿಸಿರುವ ಪ್ರಕರಣ ಬಯಲಾಗಿದೆ.
ಬ್ಯಾಂಕ್ ಆಫ್ ಮಹಾರಾಷ್ಟ್ರ ಮ್ಯಾನೇಜರ್ ಕೆ.ನರೇಂದ್ರ ರೆಡ್ಡಿ ಎಂಬಾತ 10.97 ಕೋಟಿ ವಂಚಿಸಿರುವ ಬಗ್ಗೆ ಬ್ಯಾಂಕ್ ಅಡಿಟ್ ನಲ್ಲಿ ಬಯಲಾಗಿದೆ. ನಕಲಿ ಖಾತೆಗಳಿಂದ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದು29 ನಕಲಿ ಖಾತೆಗಳಿಗೆ ಗೋಲ್ಡ್ ಲೋನ್ ಹೆಸರಿನಲ್ಲಿ ವರ್ಗಾವಣೆಮಾಡಿರುವುದು ಪತ್ತೆಯಾಗಿದೆ.
ಇದನ್ನೂ ಓದಿ: ಉತ್ತರ ಪ್ರದೇಶ| ಉತ್ತರ ಪತ್ರಿಕೆಗಳಲ್ಲಿ 200 – 500 ರೂ. ನೋಟುಗಳು ಪತ್ತೆ
ನಕಲಿ ಗೋಲ್ಡ್ ಲೋನ್ ಖಾತೆಗಳಿಂದ 8 ಮಂದಿ ಸಂಬಂಧಿಕರಿಗೆ, ಹಿಂದೆ ಕೆಲಸ ಮಾಡುತ್ತಿದ್ದ ಬ್ಯಾಂಕ್ ನ ಸಹೋದ್ಯೋಗಿಯ ಹೆಸರಿಗೆ 88 ಲಕ್ಷ ರೂ. ವರ್ಗಾವಣೆ ಮಾಡಿದ್ದ ಎನ್ನಲಾಗಿದೆ.
ವಂಚನೆ ಬಯಲಾಗುತ್ತಿದ್ದಂತೆ ಬ್ಯಾಂಕ್ ನಿಂದ ಮ್ಯಾನೇಜರ್ ಕೆ.ನರೇಂದ್ರ ರೆಡ್ಡಿ ಪರಾರಿಯಾಗಿದ್ದಾನೆ. ಮ್ಯಾನೇಜರ್ ಕೆ. ನರೇಂದ್ರ ರೆಡ್ಡಿ ವಿರುದ್ಧ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ತಿಳಿದು ಬಂದಿದೆ.
ಬ್ಯಾಂಕ್ ಆಫ್ ಮಹಾರಾಷ್ಟ್ರದ ರೀಜಿನಲ್ ಮ್ಯಾನೇಜರ್ ಸುಚೇತ್ ನೀಡಿರುವ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಇದನ್ನೂ ನೋಡಿ: ದುಡಿಮೆಗೆ ತಕ್ಕ ಬೆಲೆ ಕೊಡದೆ ಹೋದರೆ ಸ್ಕೀಂ ನೌಕರರ ಸಂಕಷ್ಟ ಇನ್ನಷ್ಟು ಹೆಚ್ಚಲಿದೆ – ಮೀನಾಕ್ಷಿ ಸುಂದರಂ Janashakthi