ಬಾರಾಮುಲ್ಲಾ ಎನ್ಕೌಂಟರ್: ಇಬ್ಬರ ಉಗ್ರರ ಸೆದಬಡಿದ ಸೇನೆ

ಬಾರಾಮುಲ್ಲಾ:ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಶನಿವಾರ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆಗೈಯಲಾಗಿದೆ. ಎನ್ಕೌಂಟರ್

ಈ ಕುರಿತು  ಸಾಮಾಜಿ ಮಾಧ್ಯಮ ಎಕ್ಸ್‌ನಲ್ಲಿ ಕಾಶ್ಮೀರ ವಲಯ ಪೊಲೀಸ್‌ ಮಾಹಿತಿ ನೀಡಿದೆ. ಬಾರಾಮುಲ್ಲಾ ಜಿಲ್ಲೆಯ ಉರಿ ಮತ್ತು ಹತ್ಸಂಗ ಪ್ರದೇಶದಲ್ಲಿ ಸೇನೆ ಹಾಗೂ ಬಾರಾಮುಲ್ಲಾ ಪೊಲೀಸ್‌ ಜಂಟಿ ಕಾರ್ಯಾಚರಣೆ ನಡೆಸಿದೆ. ಈ ಸಂದರ್ಭದಲ್ಲಿ ಉಗ್ರರು ಮತ್ತು ಭದ್ರತಾ ಪಡೆ ನಡುವೆ ಎನ್‌ಕೌಂಟರ್‌ ನಡೆದಿದೆ.

ಈ ವರೆಗೆ ಇಬ್ಬರು ಉಗ್ರರು ಹತರಾಗಿದ್ದು, ಕಾರ್ಯಾಚರಣೆ ಮುಂದುವರಿದಿದೆ ಎಂದು ಕಾಶ್ಮೀರ ವಲಯ ಪೊಲೀಸ್‌ ತಿಳಿಸಿದೆ.

ಇದನ್ನೂ ಓದಿ:ಗೃಹಲಕ್ಷ್ಮಿ ಯೋಜನೆ ನೋಂದಣಿ ಪ್ರಕ್ರಿಯೆ ಸ್ಥಗಿತವಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ

ಅನಂತನಾಗ್‌ನಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಎನ್​ಕೌಂಟರ್​​ನಲ್ಲಿ ಉಗ್ರರ ಗುಂಡಿನ ದಾಳಿಗೆ ಒಟ್ಟು ನಾಲ್ವರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಕರ್ನಲ್ ಮನ್‌ಪ್ರೀತ್ ಸಿಂಗ್, ಮೇಜರ್ ಆಶಿಶ್ ಮತ್ತು ಡಿಎಸ್‌ಪಿ ಹುಮಾಯೂನ್ ಭಟ್ ಸೇರಿದಂತೆ ನಾಲ್ವರು ಅಧಿಕಾರಿಗಳು ಹುತಾತ್ಮರಾಗಿದ್ದಾರೆ.

ವೀಡಿಯೋ ನೋಡಿ:ಸತ್ತವರಿಗೆ ಚಿಕಿತ್ಸೆ, ಶಸ್ತ್ರಚಿಕಿತ್ಸೆಗೆ ಮುನ್ನ ಡಿಸ್ಚಾರ್ಜ್ ಇದು ಆಯುಷ್ಮಾನ್ ಭಾರತ್ ಕಥೆ ವ್ಯಥೆ

Donate Janashakthi Media

Leave a Reply

Your email address will not be published. Required fields are marked *