ಬೆಳಗಾವಿ ಲೋಕಸಭೆ: ಸತೀಶ್‌ ಜಾರಕಿಹೊಳಿ ಕಾಂಗ್ರೆಸ್‌ ಅಭ್ಯರ್ಥಿ

ನವದೆಹಲಿ: ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್‌ ಪಕ್ಷವು ತನ್ನ ಅಭ್ಯರ್ಥಿಯನ್ನು ಅಧಿಕೃತವಾಗಿ ಘೋಷಣೆ ಮಾಡಿದೆ. ಯಮಕನಮರಡಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್‌ ಜಾರಕಿಹೊಳಿ ಅಭ್ಯರ್ಥಿಯೆಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮುಕುಲ್‌ ವಾಸ್ನಿಕ್‌ ಪ್ರಕಟಣೆ ನೀಡಿದ್ದಾರೆ.

ಬಿಜೆಪಿಯ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ್‌ ಅಂಗಡಿ ಅವರ ನಿಧನದಿಂದ ಬೆಳಗಾವಿ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ. ಏಪ್ರಿಲ್‌ 17ರಂದು ಈ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ.

ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಘೋಷಣೆ ಸಂಬಂಧಿಸಿದಂತೆ ಸಾಕಷ್ಟು ಕುತೂಹಲಕ್ಕೆ ಇಂದು ತೆರೆಬಿದ್ದಿದೆ. ಸತೀಶ್‌ ಜಾರಕಿಹೊಳಿ ಅವರೇ ಅಭ್ಯರ್ಥಿಯೆಂದು ಹಲವು ದಿನಗಳಿಂದ ಚರ್ಚೆಯಲ್ಲಿದ್ದಿತು. ಇಂದು ಅಧಿಕೃತಗೊಂಡಿದೆ.

ಬಿಜೆಪಿ ಪಕ್ಷವೂ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದು ಸುರೇಶ್‌ ಅಂಗಡಿ ಅವರ ಪತ್ನಿ ಮಂಗಳ ಅವರನ್ನು ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

 

Donate Janashakthi Media

Leave a Reply

Your email address will not be published. Required fields are marked *