ಬೆಂಗಳೂರು: ಜೂನ್ 4 ಬುಧವಾರದಂದು ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ದುರಂತ ಸಂಭವಿಸಿ 11 ಜನರು ಸಾವನ್ನಪ್ಪಿದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.
ಕಾಲ್ತುಳಿತ ದುರಂತದಲ್ಲಿ ಮಕ್ಕಳಿಗೂ ಹಾನಿಯಾಗಿರುವ ಶಂಕೆ ಇದೆ.
ಇದನ್ನೂ ಓದಿ: ಯುಪಿಐ ವಹಿವಾಟುಗಳಿಗೆ ಶುಲ್ಕ: ಕೇಂದ್ರ ಸರ್ಕಾರ ಸ್ಪಷ್ಟನೆ
ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಮಕ್ಕಳ ಹಕ್ಕುಗಳ ಆಯೋಗ, ಈ ನಿಟ್ತಿನಲ್ಲಿ ಸಿಐಡಿಗೆ ಪತ್ರ ಬರೆದಿದೆ. ಘಟನೆಯಲ್ಲಿ ಎಷ್ಟು ಮಕ್ಕಳಿಗೆ ತೊಂದರೆಯಾಗಿದೆ? ಮಾಹಿತಿ ನೀಡುವಂತೆ ಕೇಳಿದೆ.
ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ನಾಗಣ್ಣ ಗೌಡ ಸಿಐಡಿಗೆ ಪತ್ರ ಬರೆದಿದ್ದು, ವಿವರ ಒದಗಿಸುವಂತೆ ಕೋರಿದ್ದಾರೆ.
ಇದನ್ನೂ ನೋಡಿ: ಶಾಂತಿಯ ನಡಿಗೆ ಮಂಗಳೂರಿನ ಕಡೆಗೆ – ಸಮಾನ ಮನಸ್ಕರ ನಿರ್ಧಾರ Janashakthi Media