ಬಾವಿಗೆ ಬೀಳುತ್ತಿದ್ದ ಸಾರಿಗೆ ಬಸ್ ರಕ್ಷಿಸಿದ ಬೇವಿನ ಮರ: 70 ಜನ ಪಾರು

ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿದ ಬಸ್ ಇನ್ನೇನು ಆಳ ಬಾವಿಗೆ ಬೀಳಬೇಕು ಅನ್ನುಷ್ಟರಲ್ಲಿ ಅಡ್ಡ ಬಂದ ಬೇವಿನ ಮರ, 70 ಜನರ ಪ್ರಾಣ ಉಳಿಸಿದೆ.

ಇಂಡಿಯಿಂದ ವಿಜಯಪುರಕ್ಕೆ ಗುರುವಾರ ಇಂಡಿ ಡಿಪೋದ ಸಾರಿಗೆ ಬಸ್ ಪ್ರಯಾಣಿಕರನ್ನು ಕರೆದೊಯ್ಯುತ್ತಿತ್ತು. ನಾಗಠಾಣ ಮತ್ತು ಅಲಿಯಾಬಾದ್ ನಡುವಿನ ಮಾರ್ಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಬದಿಯ ತಗ್ಗು ಪದೇಶಕ್ಕೆ ನುಗ್ಗಿ ಬೇವಿನ ಮರಕ್ಕೆ ಡಿಕ್ಕಿ ಹೊಡೆದಿದೆ. ಮರದ ಮುಂದೆಯೇ ಆಳ ಬಾವಿ ಇದೆ. ಬೇವಿನ ಮರ ಅಡ್ಡ ಇರದೇ ಹೋಗಿದ್ದರೆ ಬಸ್ ನೇರವಾಗಿ ಬಾವಿಗೆ ಬೀಳುತ್ತಿತ್ತು.

ಬಸ್​ನಲ್ಲಿದ್ದ ಮೂರ್ನಾಲ್ಕು ಮಂದಿ ಗಾಯಗೊಂಡಿದ್ದು,ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದವರು​ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೇವಿನ ಮರ ಇರದೇ ಹೋಗಿದ್ದರೆ ನಮ್ಮ ಕಥೆ ಏನಾಗುತ್ತಿತ್ತೋ ಎಂದು ಜನರ ಎದೆ ಡವಡವ ಅಂದಿದ್ದಂತು ನಿಜ.

Donate Janashakthi Media

Leave a Reply

Your email address will not be published. Required fields are marked *