ರಾಹುಲ್ ಗಾಂಧಿಗೆ ಬಿಗ್ ರಿಲೀಫ್; ಜಾಮೀನು ಮಂಜೂರು

ಬೆಂಗಳೂರು: ಕಾಂಗ್ರೆಸ್‌ ಅಧಿನಾಯಕ ಸಂಸದ ರಾಹುಲ್‌ ಗಾಂಧಿಗೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ ಪ್ರಕರಣಕ್ಕೆ ಸಂಬಂದ್ಜಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗೆ ಬಿಜೆಪಿ ವಿರುದ್ಧ 40% ಕಮಿಷನ್ ಹಾಗೂ ಭ್ರಷ್ಟಾಚಾರದ ರೇಟ್ ಕಾರ್ಡ್ ಬಿಡುಗಡೆ ಮಾಡುವ ಮೂಲಕ ಕಾಂಗ್ರೆಸ್ ನಾಯಕರು ಅಪಪ್ರಚಾರ ಮಾಡಿದ್ದಾರೆ ಎಂದು ಬಿಜೆಪಿ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಪ್ರಕರಣ ದಾಖಲಿಸಿತ್ತು.

ಇದನ್ನೂ ಓದಿ: ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ

ಈ ಪ್ರಕರಣದ ವಿಚಾರಣೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಇಂದು ಖುದ್ದು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಗೆ ಹಾಜರಾದರು. ಈ ವೇಳೆ ರಾಹುಲ್ ಗಾಂಧಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಜಾಮೀನು ಬಂಡ್ ಗಳಿಗೆ ಸಹಿ ಮಾಡಿದ್ದಾರೆ. ವಿಚಾರಣೆಯನ್ನು ಕೋರ್ಟ್ ಜೂನ್ 30ಕ್ಕೆ ಮುಂದೂಡಿದೆ.

ಇದನ್ನೂ ನೋಡಿ: ಪರಿಸರ ಸಂರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ | ವಿಶ್ಲೇಷಣೆ – ಅಖಿಲೇಶ್Janashakthi Media

Donate Janashakthi Media

Leave a Reply

Your email address will not be published. Required fields are marked *