ಬೈಕ್ ಅಪಘಾತ; ನಾಲ್ವರು ಯುವಕರು ಮೃತ

ವಿಜಯಪುರ: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಕುಂಟೋಜಿ ಗ್ರಾಮದ ಹೊರವಲಯದಲ್ಲಿ ಜಾತ್ರೆಗೆಂದು ಬಂದ ಯುವಕರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆ  ನಡೆದಿದೆ.

ಮೂತ್ರ ವಿಸರ್ಜನೆಗೆಂದು ರಸ್ತೆ ದಾಟುತ್ತಿದ್ದ ಯುವಕರ ಮೇಲೆ ಬೈಕ್ ಹರಿದು ಅಪಘಾತ ಸಂಭವಿಸಿದೆ.

ಇದನ್ನು ಓದಿ : ಚಿಕ್ಕಬಳ್ಳಾಪುರ| ರಸ್ತೆ ಬದಿಯಿಂದ ಹೋಟೆಲ್‌ಗೆ ನುಗ್ಗಿದ ಟಿಪ್ಪರ್‌ ಲಾರಿ; ಇಬ್ಬರು ಮೃತ

ನಾಲ್ವರಿಗೆ ಗಾಯವಾಗಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ಅಪಘಾತದಲ್ಲಿ ಇಬ್ಬರು ಪಾದಚಾರಿಗಳು ಹಾಗೂ ಬೈಕ್ ಸವಾರರಿಬ್ಬರು ಸೇರಿ ಒಟ್ಟು ನಾಲ್ವರು ಯುವಕರ ಮೃತಪಟ್ಟಿದ್ದಾರೆ.

ತಾಳಿಕೋಟೆ ತಾಲೂಕಿನ ಗೋಟಖಂಡಕಿ ಗ್ರಾಮದ ಅನಿಲ ಖೈನೂರ (23), ಚೌಡಕಿ (22), ಕುಮಾರ ಪ್ಯಾಟಿ (18), ರಾಯಪ್ಪ ಬಾಗೇವಾಡಿ (24) ಮೃತ ದುರ್ದೈವಿಗಳಾಗಿದ್ದಾರೆ. ಗಾಯಾಳುಗಳನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನು ನೋಡಿ : ಆಂಬ್ಯುಲೆನ್ಸ್‌ ನಿರಾಕರಣೆ : ಮಕ್ಕಳಿಬ್ಬರ ಶವ ಹೊತ್ತುಕೊಂಡೇ 15 ಕಿಮೀ ಸಾಗಿದ ಕುಟುಂಬ!Janashakthi Media

Donate Janashakthi Media

Leave a Reply

Your email address will not be published. Required fields are marked *