ಬಿಎಂಟಿಸಿ ಚಕ್ರದ ಅಡಿ ಸಿಲುಕಿ ಬೈಕ್ ಸವಾರ ಸಾವು

ಬೆಂಗಳೂರು: ನಗರದಲ್ಲಿ ನಿರ್ಲಕ್ಷದ ಚಾಲನೆ ಹಾಗೂ ಅತಿ ವೇಗದ ಚಾಲನೆಯಿಂದ ಬಿಎಂಟಿಸಿ ಬಸ್ ಗೆ ಅನೇಕರು ಬಲಿಯಾಗುತ್ತಿರುತ್ತಾರೆ. ಇಂದು ಬಿಎಂಟಿಸಿ ಚಕ್ರದ ಅಡಿ ಸಿಲುಕಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಯಶವಂತಪುರದ ಮಾರಮ್ಮ ದೇವಸ್ಥಾನದ ಬಳಿ ನಡೆದಿದೆ.

ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದೆ. ಎಂಎಸ್ ಪಾಳ್ಯದಿಂದ ಯಶವಂತಪುರ ಕಡೆಗೆ ಬಿಎಂಟಿಸಿ ಬಸ್ ಬರುತ್ತಿತ್ತು, ಈ ವೇಳೆ ಬೈಕ್ ಸವಾರನೊಬ್ಬ ಕಾರಿಗೆ ತನ್ನ ಬೈಕ್ ಟಚ್ ಮಾಡಿದ್ದರಿಂದ ಬಸ್ ಚಕ್ರದ ಕೆಳಗೆ ಬೈಕ್ ಸವಾರ ಬಿದ್ದಿದ್ದಾನೆ.

ಇದನ್ನೂ ಓದಿ: ಗ್ರಾಮ ಲೆಕ್ಕಾಧಿಕಾರಿ ಹುದ್ದೆ ನೇಮಕಾತಿಯ ಕಡ್ಡಾಯ ಕನ್ನಡ ಪ್ರಶ್ನೆ ಪತ್ರಿಕೆ ಸೋರಿಕೆ

ಈ ವೇಳೆ ಬಿಎಂಟಿಸಿ ಬಸ್ ಬೈಕ್ ಸವಾರನ ಮೇಲೆ ಹರಿದು ಸ್ಥಳದಲ್ಲೇ ಸವಾರ ಮೃತಾಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಯಶವಂತಪುರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಯಶವಂತಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕಾಂಗ್ರೆಸ್‌ ಸರ್ಕಾರ ಉರುಳಿಸಲು 1200 ಕೋಟಿ ರೂ. ವೆಚ್ಚ – ಬಿಜೆಪಿ ವಿರುದ್ದ ತನಿಖೆ ಗ್ಯಾರೆಂಟಿ ಎಂದ ಡಿಕೆಶಿ!

Donate Janashakthi Media

Leave a Reply

Your email address will not be published. Required fields are marked *