ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ; ಚುನಾವಣಾ ಕಾರ್ಯತಂತ್ರ ರೂಪಿಸಲು ಸಮನ್ವಯ ಸಮಿತಿ ಸಭೆ

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ನಿಟ್ಟಿನಲ್ಲಿ ಮೈತ್ರಿ ಮಾಡಿಕೊಂಡಿವೆ. ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸಮನ್ವಯ ಸಮಿತಿ, ಮೈತ್ರಿಯಲ್ಲಿ ಯಾವುದೇ ಗೊಂದಲ ಸೃಷ್ಟಿಯಾಗದಂತೆ ಹಾಗೂ ಮುಂದಿನ ಚುನಾವಣಾ ಕಾರ್ಯತಂತ್ರ ರೂಪಿಸುವ ನಿಟ್ಟಿನಲ್ಲಿ ಶುಕ್ರವಾರ ಸಭೆ ನಡೆಸಿತು. ಸಭೆಯಲ್ಲಿ ಹಲವು ಮಹತ್ವದ ವಿಚಾರಗಳ ಕುರಿತಾಗಿ ಚರ್ಚೆ ನಡೆಸಲಾಯಿತು.

ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾದರೂ ಕೆಲವೊಂದು ಗೊಂದಲಗಳು ಕಾಣಿಸಿಕೊಳ್ಳುತ್ತಿವೆ. ಟಿಕೆಟ್ ಗೊಂದಲ ಸೃಷ್ಟಿಯಾಗಿದ್ದ ಸಂದರ್ಭದಲ್ಲಿ ಜೆಡಿಎಸ್ ನಾಯಕರು ಮೈತ್ರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಜೆಡಿಎಸ್‌ ಸಭೆಯಲ್ಲೂ ಮೈತ್ರಿಯ ಬಗ್ಗೆ ಭಿನ್ನಾಭಿಪ್ರಾಯ ಸೃಷ್ಟಿಯಾಗಿತ್ತು. ಅಷ್ಟೇ ಅಲ್ಲದೆ, ತಳಮಟ್ಟದಲ್ಲೂ ಕಾರ್ಯಕರ್ತರ ನಡುವಿನ ಹೊಂದಾಣಿಕೆ ಕೊರತೆ ರಾಜ್ಯ ನಾಯಕರಿಗೆ ಸಮಸ್ಯೆಯಾಗಿ ಕಾಡಿತ್ತು.

ಈ ನಿಟ್ಟಿನಲ್ಲಿ ಶುಕ್ರವಾರ ನಗರದ ಖಾಸಗಿ ಹೋಟೆಲ್‌ ನಲ್ಲಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ, ಬಿಎಸ್ ಯಡಿಯೂರಪ್ಪ, ಎಚ್‌ಡಿ ಕುಮಾರಸ್ವಾಮಿ, ಬಿವೈ ವಿಜಯೇಂದ್ರ, ಆರ್‌. ಆಶೋಕ್ ಸೇರಿದಂತೆ ಎರಡು ಪಕ್ಷದ ಪ್ರಮುಖ ನಾಯಕರು ಸಭೆ ನಡೆಸಿ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು.

ಇದನ್ನು ಓದಿ : ಕೋಮುವಾದಿ ಚಕ್ರವ್ಯೂಹ ಭೇದಿಸುವವರ ಕೈಪಿಡಿ – “ಮಹೇಂದ್ರ ಕುಮಾರ್ ನಡು ಬಗ್ಗಿಸದ ಎದೆಯದನಿ”

ತಳಮಟ್ಟದಲ್ಲಿ ಗೊಂದಲ ಬಗೆಹರಿಸಲು ಆದ್ಯತೆ

ಮೈತ್ರಿ ನಿಟ್ಟಿನಲ್ಲಿ ಎರಡು ಪಕ್ಷದ ಕಾರ್ಯಕರ್ತರು ಜೊತೆಗೂಡಿ ಕೆಲಸ ಮಾಡಬೇಕಾಗಿದೆ. ಆದರೆ ಕೆಲವು ಕ್ಷೇತ್ರಗಳಲ್ಲಿ ಕಾರ್ಯಕರ್ತರ ನಡುವೆ ಗೊಂದಲ ಸೃಷ್ಟಿಯಾಗಿದೆ. ಇದು ಮುಂದಿನ ದಿನಗಳಲ್ಲಿ ಮತ್ತಷ್ಟು ಪರಿಣಾಮ ಬೀರುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ತಳಹಂತದಲ್ಲಿ ಮೈತ್ರಿ ಯಶಸ್ವಿಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಕೆಲವೊಂದು ಸಲಹೆ ಸೂಚನೆಗಳನ್ನು ನಾಯಕರು ನೀಡಿದ್ದಾರೆ.


ಜಂಟಿ ಪ್ರಚಾರದ ಬಗ್ಗೆಯೂ ಚರ್ಚೆ

ಇನ್ನು 28 ಲೋಕಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಜಂಟಿ ಪ್ರಚಾರ ನಡೆಸುವ ನಿಟ್ಟಿನಲ್ಲಿ ಏನೆಲ್ಲಾ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆಯೂ ಆರಂಭಿಕ ಹಂತದಲ್ಲಿ ಚರ್ಚೆಗಳು ನಡೆದಿವೆ. ಮಾಜಿ ಪ್ರಧಾನಿ ಎಚ್‌ಡಿ ಕುಮಾರಸ್ವಾಮಿ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಜಂಟಿಯಾಗಿ ಕೆಲವು ಕ್ಷೇತ್ರಗಳಲ್ಲಿ ಪ್ರಚಾರ ನಡೆಸುವ ಸಾಧ್ಯತೆ ಇದೆ.

ದೇವೇಗೌಡರ ಆರೋಗ್ಯದ ದೃಷ್ಟಿಯಿಂದ ಹೆಲಿಕಾಪ್ಟರ್‌ನಲ್ಲಿ ಇಬ್ಬರು ನಾಯಕರು ರಾಜ್ಯದ ಪ್ರಮುಖ ಕ್ಷೇತ್ರಗಳಲ್ಲಿ ಜಂಟಿ ಪ್ರಚಾರ ನಡೆಸುವ ಮೂಲಕ ಮೈತ್ರಿಗೆ ಬಲ ತುಂಬಲಿದ್ದಾರೆ. ಈ ಎಲ್ಲಾ ವಿಚಾರಗಳ ಕುರಿತಾಗಿ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ ನಡೆದಿದೆ. ಎರಡೂ ಪಕ್ಷಗಳ ನಾಯಕರು ಯಾವುದೇ ಭಿನ್ನಾಭಿಪ್ರಾಯಕ್ಕೆ ಆಸ್ಪದ ನೀಡದೆ ಒಗ್ಗಟ್ಟಾಗಿ ಚುನಾವಣೆಯನ್ನು ಎದುರಿಸುವ ನಿಟ್ಟಿನಲ್ಲಿ ನಾಯಕರುಗಳು ಕರೆ ನೀಡಿದ್ದಾರೆ.

ಇದನ್ನು ನೋಡಿ : ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಹಿನ್ನೆಲೆ ಮತ್ತು ಮತಲೆಕ್ಕಾಚಾರ Janashakthi Media

Donate Janashakthi Media

Leave a Reply

Your email address will not be published. Required fields are marked *