ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಂಬಂಧಿಕರ ಮನೆಗೆ ಲೋಕಾಯುಕ್ತ ದಾಳಿ

ಬೆಂಗಳೂರು: ಕರ್ನಾಟಕ ಲೋಕಾಯುಕ್ತರು ಮಂಗಳವಾರ ರಾಜ್ಯಾದ್ಯಂತ 13 ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ 63 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸಂಬಂಧಿಕರ ಮೇಲೆ ಕೂಡಾ ದಾಳಿ ಮಾಡಲಾಗಿದೆ ಎಂದು ವರದಿಗಳು ಹೇಳಿವೆ. 200 ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳ ನೇತೃತ್ವದಲ್ಲಿ ಬೆಳಿಗ್ಗೆ ಏಕಕಾಲದಲ್ಲಿ ಈ ದಾಳಿ ನಡೆದಿದ್ದು, ಈ ವೇಳೆ ಬೆಂಗಳೂರಿನಲ್ಲಿ ಮೂರು ಮತ್ತು ಬಳ್ಳಾರಿ, ಕೊಪ್ಪಳ, ಚಿಕ್ಕಬಳ್ಳಾಪುರ, ಮೈಸೂರು, ಕೋಲಾರ ಜಿಲ್ಲೆಗಳು ಮತ್ತು ಧಾರವಾಡ ನಗರದ ತಲಾ ಎರಡು ಸ್ಥಳಗಳಲ್ಲಿ ದಾಳಿಗಳು ನಡೆದಿವೆ ಎಂದು ವರದಿಯಾಗಿದೆ.

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸೋದರ ಮಾವ ಹಾಗೂ ಯಾದಗಿರಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಪ್ರಭುಲಿಂಗ ಮಾನಕರ ಮೇಲೂ ಕಲಬುರ್ಗಿಯಲ್ಲಿ ದಾಳಿ ನಡೆದಿದೆ ಎಂದು ವರದಿಗಳು ಉಲ್ಲೇಖಿಸಿವೆ.

ಇದನ್ನೂ ಓದಿ: ಮನಸೋ ಇಚ್ಛೆ ವಿದ್ಯಾರ್ಥಿಗಳನ್ನು ಥಳಿಸಿದ ವಾರ್ಡ್‌ನ – ಎಸ್ ಎಫ್ ಐ ಪ್ರತಿಭಟನೆ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ)ಗೆ ಸಂಬಂಧಿಸಿದ ಕಾರ್ಯನಿರ್ವಾಹಕ ಎಂಜಿನಿಯರ್ ಎಚ್.ಡಿ.ಚನ್ನಕೇಶವ ಅವರು ತಮ್ಮ ಪತ್ನಿ ಹೆಸರಿನಲ್ಲಿ ಮೂರು ಕೆಜಿ ಚಿನ್ನ, 28 ಕೆಜಿ ಬೆಳ್ಳಿ, 25 ಲಕ್ಷ ಮೌಲ್ಯದ ವಜ್ರದ ಆಭರಣಗಳು, 6 ಲಕ್ಷ ರೂ. ನಗದು, ಮತ್ತು ಪುರಾತನ ಸಂಗ್ರಹಗಳು 1.5 ಕೋಟಿ ರೂ. ಮತ್ತು ಚನ್ನಕೇಶವ ಅವರ ಸೋದರ ಮಾವ ತರುಣ್ ಅವರ ಮನೆಯಲ್ಲಿ 92.95 ಲಕ್ಷ ನಗದು ಮತ್ತು 55 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ ಎಂದು ವರದಿ ಹೇಳಿವೆ.

ಚನ್ನಕೇಶವ ಅವರು ಅಪಾರ್ಟ್‌ಮೆಂಟ್‌ಗಳು ಮತ್ತು ವಾಣಿಜ್ಯ ಕಟ್ಟಡಗಳಿಗೆ ಸಂಪರ್ಕ ನೀಡಲು ಲಂಚ ಸ್ವೀಕರಿಸಿದ ಆರೋಪ ಹೊತ್ತಿದ್ದು, ಪ್ರಸ್ತುತ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದಾರೆ. ಅವರ ವಿವಿಧ ಸ್ಥಳಗಳಲ್ಲಿರುವ ಅವರ ಏಳು ಆಸ್ತಿಗಳ ಮೇಲೆ ದಾಳಿ ನಡೆಯುತ್ತಿದೆ.

ಬೆಸ್ಕಾಂ ಕಾರ್ಯಪಾಲಕ ಎಂಜಿನಿಯರ್ ಜೊತೆಗೆ ಕಲಬುರ್ಗಿಯಲ್ಲಿರುವ ಜಿಲ್ಲಾ ಆರೋಗ್ಯಾಧಿಕಾರಿ (ಡಿಎಚ್‌ಒ), ಹಾಲು ಸಹಕಾರ ಸಂಘದ ಸಿಇಒ, ಮೀಸಲು ಅರಣ್ಯಾಧಿಕಾರಿ, ಭೂವಿಜ್ಞಾನಿ, ನಿವೃತ್ತ ಉಪನಿರ್ದೇಶಕರು, ಕುಲಪತಿಗಳು, ಉಪನ್ಯಾಸಕರು, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು, ಸ್ಟೋರ್ ಕೀಪರ್ ಮತ್ತು ಪುರಸಭೆಯ ಆಯುಕ್ತರು ಸೇರಿದಂತೆ ವಿವಿಧ ಅಧಿಕಾರಿಗಳ ನಿವಾಸಗಳ ಮೇಲೂ ದಾಳಿ ನಡೆಸಲಾಗುತ್ತಿದೆ.

ವಿಡಿಯೊ ನೋಡಿ: ಭಾರತವು ಪ್ಯಾಲೆಸ್ತೀನ್ ಪರ ನಿಲ್ಲಬೇಕು : ಸದಾಗ್ರಹದ ಸಭೆ ಆಗ್ರಹ Janashakthi Media

Donate Janashakthi Media

Leave a Reply

Your email address will not be published. Required fields are marked *