ಉಪಚುನಾವಣೆಯಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಕಲ್ಲು ತೂರಾಟ

ಯಾದಗಿರಿ: ಜಿಲ್ಲೆಯ ಸುರಪುರ ವಿಧಾಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಕಲ್ಲು ತೂರಾಟವಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ.

ಸುರಪುರದ ಬಾದ್ಯಾಪುರ ಗ್ರಾಮದಲ್ಲಿ ಕಲ್ಲು ತೂರಾಟ ನಡೆದಿದ್ದು, ಘಟನೆಯಲ್ಲಿ ಮತದಾನಕ್ಕೆ ಬಂದಿದ್ದ ಭೀಮಣ್ಣ ಬ್ಯಾಳಿ ಎಂಬುವವರ ತಲೆಗೆ ಬಲವಾದ ಪೆಟ್ಟಾಗಿದೆ. ಸದ್ಯ ಗಾಯಾಳುವನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನು ಓದಿ : ಲೋಕಸಭಾ ಚುನಾವಣೆಯ ಬಳಿಕ ರಾಜ್ಯ ಸರ್ಕಾರದಲ್ಲಿ ಬದಲಾವಣೆ: ಕುಮಾರ ಬಂಗಾರಪ್ಪ

ಬಾದ್ಯಾಪುರದ ಮತಗಟ್ಟೆ ಕೇಂದ್ರದಲ್ಲಿ ಮತ ಹಾಕಿ ಬರುವಾಗ ಕಾಂಗ್ರೆಸ್ ಕಾರ್ಯಕರ್ತರಿಂದ ಈ ಹಲ್ಲೆ ನಡೆಸಲಾಗಿದೆಯಂತೆ. ಗಲಾಟೆ ವಿಕೋಪಕ್ಕೆ ತಿರುಗಿದಾಗ ಪರಸ್ಪರ ಕಲ್ಲು ತೂರಾಟವನ್ನು ಕಾರ್ಯಕರ್ತರು ಮಾಡಿಕೊಂಡಿದ್ದಾರೆ.

ಸ್ಥಳದಲ್ಲಿ ಕೆಲ ಕಾರ್ಯಕರ್ತರು ಬಿಜೆಪಿಗೆ ಲೀಡ್ ಬರುತ್ತೆ ಎಂಬ ಮಾತಳನ್ನು ಆಡಿದ್ದರಿಂದ ಈ ಗಲಾಟೆ ಶುರುವಾಗಿದೆ ಎಂದೂ ಹೇಳಲಾಗುತ್ತಿದೆ.

ಇದನ್ನು ನೋಡಿ : ಪೆನ್‌ಡ್ರೈವ್‌ ಪ್ರಕರಣ – ಮಹಿಳೆಯರ ಘನತೆಗೆ ಕುಂದುಂಟು ಮಾಡುತ್ತಿರುವವರ ಮೇಲೆ ಕ್ರಮಕ್ಕೆ ಆಗ್ರಹ Janashakthi Media

Donate Janashakthi Media

Leave a Reply

Your email address will not be published. Required fields are marked *