ಕೊಲೆ ಯತ್ನ ಆರೋಪ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಬಂಧನ

ಕಲಬುರಗಿ: ಕೊಲೆ ಯತ್ನ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ರನ್ನು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದಲ್ಲಿ ಜೇವರ್ಗಿ ತಾಲೂಕಿನಲ್ಲಿ  ಪೊಲೀಸರು ಬಂಧಿಸಿದ್ದಾರೆ.

ನೆಲೋಗಿ ಪೊಲೀಸರು ನವೆಂಬರ್‌ 20ರ ತಡರಾತ್ರಿ ಮಣಿಕಂಠ ರಾಠೋಡ್​ ರನ್ನು ಬಂಧಿಸಿದ್ದಾರೆ. ಸದ್ಯ ಮಣಿಕಂಠ ರಾಠೋಡ್​ನನ್ನು ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಇದನ್ನೂ ಓದಿ: ಯುಎಸ್‍ನಲ್ಲಿ ವಶೀಲಿಬಾಜಿಗೆ ಆರೆಸ್ಸೆಸ್‍ 3.3ಲಕ್ಷ ಡಾಲರ್ ವೆಚ್ಚಮಾಡಿರುವ ಆರೋಪದ ಬಗ್ಗೆ ಇ.ಡಿ. & ಸಿಬಿಡಿಟಿ ತನಿಖೆಯಾಗಬೇಕು – ಇ ಎ ಎಸ್‍ ಶರ್ಮ

ಜೇವರ್ಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಾಟಿ ಔಷಧಿ ಕೊಡುತ್ತಿದ್ದ ರಶೀದ್ ಮತ್ಯಾ ಎಂಬಾತನ ಬಂಧನಕ್ಕೆ ಆಗ್ರಹಿಸಿ ಮಣಿಕಂಠ ಜೇವರ್ಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ರಶೀದ್ ಬೆಂಬಲಿಗರೊಂದಿಗೆ ವಾಗ್ವಾದ ನಡೆಸಿ ಹೈಡ್ರಾಮಾ ಕ್ರಿಯೇಟ್ ಮಾಡಿದ್ದ.

ಈ ವೇಳೆ ರಶೀದ್ ಮತ್ಯಾ ಕಾರು ಚಾಲಕನ ತಲೆಗೆ ಕಲ್ಲೇಟು ಬಿದ್ದಿತ್ತು. ಸದ್ಯ ರಶೀದ್ ಮತ್ಯಾ ಚಾಲಕನ ದೂರಿನ ಮೇರೆಗೆ ಕೊಲೆ ಯತ್ನ ಆರೋಪದಲ್ಲಿ ಮಣಿಕಂಠ ರಾಠೋಡ್​​ನನ್ನು ಬಂಧಿಸಲಾಗಿದೆ.

ಇದನ್ನೂ ನೋಡಿ: ದಿನಪೂರ್ತಿ ಕೆಲಸ ಕಮ್ಮಿ ವೇತನ : ಅಂಗನವಾಡಿ, ಬಿಸಿಯೂಟದವರ ಬದುಕಿನ ಕಥೆ Janashakthi Media

Donate Janashakthi Media

Leave a Reply

Your email address will not be published. Required fields are marked *