ತುಮಕೂರು: ಕಾರ್ಯಕರ್ತನ ಕೆನ್ನೆಗೆ ಬಾರಿಸಿದ ಮಾಜಿ ಸಚಿವ ಸೊಗಡು ಶಿವಣ್ಣ

ತುಮಕೂರು: ಬಿಜೆಪಿ ಹಿರಿಯ ಮುಖಂಡರೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದಂದೇ ಬಿಜೆಪಿ ಕಾರ್ಯಕರ್ತನಿಗೆ ಕಪಾಳಮೋಕ್ಷ  ಮಾಡಿದ ಘಟನೆ ತುಮಕೂರಿನಲ್ಲಿ  ನಡೆದಿದೆ.

ಕೇಂದ್ರ ಜಲಶಕ್ತಿ ಹಾಗೂ ರೈಲ್ವೇ ರಾಜ್ಯ ಖಾತೆ ಸಚಿವ ವಿ.ಸೋಮಣ್ಣರ ಅವರ ಮುಂದೆಯೇ ಬಿಜೆಪಿ ಪಕ್ಷದೊಳಗೆ ಕಿತ್ತಾಟ ನಡೆದಿದ್ದು, ಮಾಜಿ ಸಚಿವ ಸೊಗಡು ಶಿವಣ್ಣರನ್ನು ತಳ್ಳಿದ್ದಕ್ಕೆ ಗಲಾಟೆ ಆರಂಭವಾಗಿದೆ. ನಂತರ ಮಾತಿಗೆ ಮಾತು ಬೆಳೆದು ಸೊಗಡು ಶಿವಣ್ಣ, ರಕ್ಷಿತ್ ಎಂಬ ಬಿಜೆಪಿ ಕಾರ್ಯಕರ್ತನಿಗೆ ಕೆನ್ನೆಗೆ ಬಾರಿಸಿದ್ದಾರೆ ಎಂದು ತಿಳಿದು ಬಂದಿದೆ.

ಕೇಂದ್ರ ಸಚಿವರ ಮುಂದೆಯೇ ಭಾರೀ ಜಗಳ ನಡೆಯುವ ಮೂಲಕ ತುಮಕೂರು ಜಿಲ್ಲಾ ಬಿಜೆಪಿ ಘಟಕದಲ್ಲಿ ಎಲ್ಲವೂ ಸರಿಯಿಲ್ಲ ಅನ್ನೋದು ಮತ್ತೊಮ್ಮೆ ಜಗಜ್ಜಾಹೀರಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ವಿವಿಧ ಕಾರ್ಯಕ್ರಮಗಳಿಗೆ ಆಗಮಿಸಿದ್ದ ಕೇಂದ್ರ ಸಚಿವ ಸೊಮಣ್ಣ ಅವರ ಮುಂದೆಯೇ ಭಿನ್ನಮತ ಸ್ಫೋಟಗೊಂಡಿದೆ.

ಇದನ್ನು ಓದಿ : ಪ್ರಧಾನಿಗೆ ಪತ್ರ ಬರೆದ ಬಿಜೆಪಿ ನಾಯಕ ಜವಾಹರ್ ಚಾವ್ಡಾ

ಮೋದಿ ಹುಟ್ಟುಹಬ್ಬದ ಕಾರ್ಯಕ್ರಮವನ್ನು ತುಮಕೂರಿನ ಪ್ರವಾಸಿ ಮಂದಿರದ ಕೇಂದ್ರ ಸಚಿವರ ಕಚೇರಿಯಲ್ಲಿ ಆಯೋಜಿಸಲಾಗಿತ್ತು. ಈ ವೇಳೆ ಕೇಂದ್ರ ಸಚಿವರ ಕಚೇರಿ ಮುಂಭಾಗದಲ್ಲಿ ಗಲಾಟೆ ನಡೆದಿದೆ. ಕೇಂದ್ರ ಸಚಿವ ವಿ.ಸೋಮಣ್ಣ ಕಚೇರಿ ಮುಂದೆ ಕಿತ್ತಾಟ ನಡೆದರೂ ಸಹ ಬಿಜೆಪಿ ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್, ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ ಮುಖ ಪ್ರೇಕ್ಷಕರಾಗಿ ನಿಂತರು.

ನಂತರ ಬುಡಣ್ಣ ಹೋಗ್ಲಿ, ಬೇಜಾರ್ ಮಾಡ್ಕೋಬೇಡ ಬುಡಣ್ಣ, ಅಣ್ಣಾ ದೇವರು ಅಣ್ಣಾ ನೀನು ಎಂದು ಸಚಿವ ವಿ.ಸೋಮಣ್ಣ ಅವರು ಕೈಮುಗಿದು ಗಲಾಟೆ ಬಿಡಿಸಿದರು. ಮೂಲಗಳ ಪ್ರಕಾರ ಸೊಗಡು ಶಿವಣ್ಣ, ಕೇಂದ್ರ ಸಚಿವ ವಿ ಸೋಮಣ್ಣ ವಿರುದ್ಧವೂ ಅಸಮಾಧಾನಗೊಂಡಿದ್ದು, ಸೋಮಣ್ಣ ಅವರು ಗಲಾಟೆ ಬಿಡಿಸಿ ಸಮಾಧಾನ ಮಾಡಿದರೂ ಸಹ ಅದನ್ನು ಲೆಕ್ಕಿಸದೆ ಅಲ್ಲಿಂದ ತೆರಳಿದ್ದಾರೆ ಎನ್ನಲಾಗಿದೆ.

ಆದರೆ ಸಿಟ್ಟಿನಿಂದ ಮಾಜಿ ಸಚಿವ ಸೊಗಡು ಶಿವಣ್ಣ ಅವರು ಬಿಜೆಪಿ ಕಾರ್ಯಕರ್ತನ ಕೆನ್ನೆಗೆ ಚಟಾರ್ ಎಂದು ಬಾರಿಸಿದ್ದಾರೆ. ಕೇಂದ್ರ ಸಚಿವರು ಕಾರ್ಯಕ್ರಮಕ್ಕೆ ತೆರಳಿದ ಬಳಿಕವೂ ಗಲಾಟೆ ತಣ್ಣಗಾಗಿಲ್ಲ. ಈ ಗಲಾಟೆಯ ಮೂಲಕ ತುಮಕೂರು ಜಿಲ್ಲಾ ಬಿಜೆಪಿ ಘಟಕದಲ್ಲಿನ ಭಿನ್ನಮತ ಮತ್ತೊಮ್ಮೆ ಸ್ಪೋಟಗೊಂಡಿದೆ.

ಇದನ್ನು ನೋಡಿ : ವಿಚ್ಛಿದ್ರಕಾರಕ ಶಕ್ತಿಗಳನ್ನು ನಾಶ ಮಾಡಲು ಪ್ರಜಾಪ್ರಭುತ್ವವಾದಿಗಳು ಎದ್ದು ನಿಲ್ಲಬೇಕು – ಸಿದ್ದರಾಮಯ್ಯ

Donate Janashakthi Media

Leave a Reply

Your email address will not be published. Required fields are marked *