ಮಹಿಳೆ ಮತ್ತು ಆಕೆಯ ಮಗನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಬಿಜೆಪಿ ಕಾರ್ಯದರ್ಶಿ

ಖನೌ: ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿರುವ ಅತಿಕ್ ಅಹ್ಮದ್ ಎಂಬಾತ, ಹಾಡಹಗಲೇ ಒಬ್ಬ ಮಹಿಳೆ ಮತ್ತು ಆಕೆಯ ಮಗನ ಮೇಲೆ ಚಪ್ಪಲಿಯಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಉತ್ತರ ಪ್ರದೇಶದ ಬಿಲಾಸ್ಪುರದಲ್ಲಿ ನಡೆದಿದೆ.

ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ. ವಿಡಿಯೊದಲ್ಲಿ ಅತಿಕ್ ಅಹ್ಮದ್, ಆ ಮಹಿಳೆ ಮತ್ತು ಆಕೆಯ ಮಗನನ್ನು ನಿಂದಿಸುತ್ತಾ, ಚಪ್ಪಲಿಯಿಂದ ಪದೇ ಪದೇ ಥಳಿಸುತ್ತಿರುವ ದೃಶ್ಯ ಸೆರೆಯಾಗಿದೆ.

ಒಬ್ಬ ರಾಜಕೀಯ ನಾಯಕನಿಂದ ಇಂತಹ ಕೃತ್ಯ ನಡೆದಿರುವುದು ಸಾರ್ವಜನಿಕರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಯುವ ಸೌರಭ, ಚಿಗುರು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅರ್ಜಿ ಆಹ್ವಾನ

ಸಾಲದ ವಿವಾದದಿಂದ ಉಂಟಾದ ದೌರ್ಜನ್ಯ

ಸಾಲದ ವಿವಾದವೇ ಈ ಘಟನೆಗೆ ಕಾರಣ. ಸಂತ್ರಸ್ತ ಮಹಿಳೆ ಮತ್ತು ಆಕೆಯ ಮಗ ಅಸ್ಸಾಂ ಮೂಲದವರಾಗಿದ್ದು, ಅತಿಕ್‌ನ ಜಮೀನಿನಲ್ಲಿ ತಾತ್ಕಾಲಿಕ ಗುಡಿಸಲು ಹಾಕಿಕೊಂಡು ಜೀವನ ನಡೆಸುತ್ತಿದ್ದರು. ತ್ಯಾಜ್ಯ ಸಂಗ್ರಹಿಸಿ ಅವರು ಜೀವನೋಪಾಯ ಮಾಡಿಕೊಳ್ಳುತ್ತಿದ್ದರು. ಕಷ್ಟದ ಸಂದರ್ಭದಲ್ಲಿ ಅತಿಕ್‌ನಿಂದ ಸಾಲ ಪಡೆದಿದ್ದರು. ಆದರೆ, ಸಾಲದ ಮೊತ್ತವನ್ನು ಮರುಪಾವತಿಸಲು ಆಗದೇ ಇರುವ ಕಾರಣಕ್ಕೆ ಹಲ್ಲೆಗೆ ಒಳಗಾಗಿದ್ದಾರೆ.

ಅತಿಕ್ ಅಹ್ಮದ್, ತಾನು ನಿಗದಿಪಡಿಸಿದ ಸಮಯಕ್ಕೆ ಬಡ್ಡಿಯನ್ನು ಕಟ್ಟದಿದ್ದರೆ ಸುಮ್ಮನಿರುವವನಲ್ಲ ಎಂಬುದು ಈ ಘಟನೆಯಿಂದ ಸ್ಪಷ್ಟವಾಗಿದೆ. ಸಾಲದ ಬಡ್ಡಿಯನ್ನು ಸರಿಯಾಗಿ ಕಟ್ಟದ ಕಾರಣಕ್ಕೆ ಆತ ಈ ತಾಯಿ-ಮಗನ ಮೇಲೆ ದೌರ್ಜನ್ಯ ನಡೆಸಿದ್ದಾನೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವೀಡಿಯೋ

ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತಿದ್ದೂ, ಆದ ಬೆನ್ನಲ್ಲೇ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅತಿಕ್‌ನ ಕ್ರೂರ ನಡವಳಿಕೆಯನ್ನು ಖಂಡಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಯ ಸುರಿಮಳೆಯೇ ಸುರಿದಿದೆ. ಜನರು ಈ ಘಟನೆಯನ್ನು ಖಂಡಿಸುವುದರ ಜೊತೆಗೆ, ರಾಜಕಾರಣಿಗಳಿಂದ ಜನರಿಗೆ ರಕ್ಷಣೆ ಒದಗಿಸುವ ಬದಲು ದೌರ್ಜನ್ಯ ನಡೆಯುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಘಟನೆಯಿಂದ ತಾಯಿ-ಮಗ ಪೊಲೀಸ್ ಠಾಣೆಗೆ ದೂರು ನೀಡಿರಲಿಲ್ಲ. ಆದರೆ, ವಿಡಿಯೊ ವೈರಲ್ ಆದ ಬಳಿಕ, ಸಾರ್ವಜನಿಕ ಒತ್ತಡದಿಂದಾಗಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ವಿಡಿಯೊ ಎಲ್ಲೆಡೆ ಹರಿದಾಡಿದ್ದ ನಂತರ ಪೊಲೀಸರಿಗೆ ಕ್ರಮ ಕೈಗೊಳ್ಳಲು ಒತ್ತಡ ಹೇರಿತ್ತು. ಇದರಿಂದ ಅತಿಕ್ ಅಹ್ಮದ್‌ನನ್ನು ಬಂಧಿಸಲಾಗಿದ್ದು, ಈ ಘಟನೆಯ ಕುರಿತು ತನಿಖೆ ಆರಂಭವಾಗಿದೆ.

ಇದನ್ನೂ ನೋಡಿ: ತುರ್ತು ಪರಿಸ್ಥಿತಿಯ ಕರಾಳ ನೆನಪುಗಳನ್ನು ಬಿಚ್ಚಿಟ್ಟ ಕಾರ್ಮಿಕ ನಾಯಕ ವಿಜೆಕೆ ನಾಯರ್ Janashakthi Media

Donate Janashakthi Media

Leave a Reply

Your email address will not be published. Required fields are marked *