ತುಳುನಾಡಿನ ದುಸ್ಥಿತಿಗೆ 3 ದಶಕಗಳ ಬಿಜೆಪಿಯ ದುರಾಡಳಿತವೇ ಕಾರಣ: ಜಿಲ್ಲಾಧಿಕಾರಿ ಕಚೇರಿ ಚಲೋದಲ್ಲಿ ಸಿಪಿಐ(ಎಂ) ಆರೋಪ

ಮಂಗಳೂರು: ಮೂರು ದಶಕಗಳ ಬಿಜೆಪಿ ದುರಾಡಳಿತವೇ ತುಳುನಾಡಿನ ಇಂದಿನ ದುಸ್ಥಿತಿಗೆ ಕಾರಣ ಎಂದು ಸಿಪಿಐ(ಎಂ) ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಕೆ. ಯಾದವ ಶೆಟ್ಟಿ ಆರೋಪಿಸಿದ್ದು, “ಜಿಲ್ಲೆಯನ್ನು ಪೂರ್ತಿಯಾಗಿ ಆರೋಗ್ಯ , ಶಿಕ್ಷಣ, ರಿಯಲ್ ಎಸ್ಟೇಟ್ ಸೇರಿದಂತೆ ಬಲಾಢ್ಯ ಲಾಭಿಗಳ ಪದತಲಕ್ಕೆ ಒಪ್ಪಿಸಿದ್ದರಲ್ಲಿ ಬಿಜೆಪಿ ಸಂಸದ, ಶಾಸಕರ ಪಾತ್ರವೆ ದೊಡ್ಡದಿದೆ” ಎಂದು ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ನಗರದಲ್ಲಿ ಹಮ್ಮಿಕೊಂಡ “ಜಿಲ್ಲಾಧಿಕಾರಿ ಕಚೇರಿ ಚಲೋ” ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ಕಾರ್ಯಕ್ರದಲ್ಲಿ ಪ್ರಾಸ್ಥಾವಿಕವಾಗಿ ಮಾತನಾಡಿದ ಯಾದವ ಶೆಟ್ಟಿ ಅವರು, “ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ ಸತತ ಒಂಬತ್ತು ಭಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೆದ್ದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಆಡಳಿತ ಮೂರುವರೆ ದಶಕಗಳಿಂದ ಬಿಜೆಪಿ ಹಿಡಿತದಲ್ಲಿದೆ. ಈ ಅವಧಿಯಲ್ಲಿ ಜನಸಾಮಾನ್ಯರ ಪ್ರಶ್ನೆಗಳು ಪೂರ್ತಿಯಾಗಿ ಕಡೆಗಣಿಸಲ್ಪಟ್ಟು ಇಲ್ಲಿನ ಜನಸಾಮಾನ್ಯರ ಬದುಕು ನಲುಗಿ ಹೋಗಿದೆ” ಎಂದು ಹೇಳಿದರು. ಸಿಪಿಐಎಂ)

ಇದನ್ನೂ ಓದಿ: ರಾಮ ಮಂದಿರ ಶಂಕುಸ್ಥಾಪನೆಯಲ್ಲಿ ಪಾಲ್ಗೊಳ್ಳದಂತೆ ಅಡ್ವಾಣಿ, ಜೋಶಿಗೆ ಮನವಿ!

ದಕ್ಷಿಣ ಕನ್ನಡ ಜಿಲ್ಲೆಯ ಜನಸಾಮಾನ್ಯರು, ದುಡಿಯುವ ಜನರು ಸೇರಿದಂತೆ ಸರ್ವಜನರ ಅಭಿವೃದ್ದಿಗೆ ಆಗ್ರಹಿಸಿ ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಮ್ಮಿಕೊಂಡ “ಜಿಲ್ಲಾಧಿಕಾರಿ ಕಚೇರಿ ಚಲೋ” ಕಾರ್ಯಕ್ರಮ ಮಂಗಳೂರು ನಗರದಲ್ಲಿ ನಡೆಯಿತು. ಮಹಿಳೆಯರೂ ಸೇರಿದಂತೆ ಬೃಹತ್ ಸಂಖ್ಯೆಯ ಜನರು ಅಂಬೆಡ್ಕರ್ ವೃತ್ತದಿಂದ ಮೆರವಣಿಯಲ್ಲಿ ಸಾಗಿ ಮಿನಿ ವಿಧಾನ ಸೌಧದ ಮುಂಭಾಗ ಬಹಿರಂಗ ಸಭೆ ನಡೆಸಿದರು. ಒಂದು ಕಿಲೋ ಮೀಟರ್ ಗೂ ಹೆಚ್ಚು ಉದ್ದ ಇದ್ದ ಮೆರವಣಿಗೆಯಲ್ಲಿ ಸಿಪಿಐ(ಎಂ) ಕಾರ್ಯಕರ್ತರು ಬಿಜೆಪಿ ವೈಫಲ್ಯಗಳನ್ನು ತೆರೆದಿಡುವ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬಹಿರಂಗ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಸಿಪಿಐ(ಎಂ) ರಾಜ್ಯ ಸಮಿತಿ ಸದಸ್ಯ ಮುನೀರ್ ಕಾಟಿಪಳ್ಳ, “ಜಿಲ್ಲೆಯ ಅಭಿವೃದ್ಧಿ ಹೀನತೆ, ಅರಾಜಕತೆಗೆ ಸಂಸದ ನಳಿನ್ ಕುಮಾರ್ ಕಟೀಲ್ ರ ವೈಫಲ್ಯವೇ ಕಾರಣ ಎಂದು ಬಿಜೆಪಿ ಪರಿವಾರದ ಒಂದು ಗುಂಪು ಪ್ರಚಾರ ಮಾಡುವ ಮೂಲಕ ವೈಫಲ್ಯದಲ್ಲಿ ಬಿಜೆಪಿ ಪಕ್ಷದ ಪಾತ್ರವನ್ನು ಮರೆಮಾಚಲು ಯತ್ನಿಸುತ್ತಿದ್ದಾರೆ. ಆದರೆ, ವಿಷಯ ಅಷ್ಟು ಸರಳ ಅಲ್ಲ, ಧನಂಜಯ ಕುಮಾರ್, ಸದಾನಂದ ಗೌಡ ಸೇರಿದಂತೆ ಮೂರು ದಶಕಗಳ ಕಾಲ ಬಿಜೆಪಿ ಜನಪ್ರತಿನಿಧಿಗಳ ದುರಾಡಳಿತವೇ ಇದಕ್ಕೆ ಕಾರಣ” ಎಂದು ಆರೋಪಿಸಿದರು.

“ಮತೀಯ ಅಜೆಂಡಾ ಮುಂದಿಟ್ಟು ಜನಸಾಮಾನ್ಯರನ್ನು ಮರಳು ಮಾಡಿ ಮತಪಡೆದು, ಬಲಾಢ್ಯ ಲಾಬಿಗಳ ಸೇವೆಯನ್ನು ನಿಷ್ಟೆಯಿಂದ ಮಾಡುವುದರಲ್ಲಿ ಬಿಜೆಪಿ ಪಳಗಿದೆ. ಬಿಜೆಪಿ ಸಂಸದ, ಶಾಸಕರ ಸುತ್ತ ಮುತ್ತ, ಬಿಜೆಪಿಯ ಸಭೆಗಳಲ್ಲಿ ಲಕ್ಷ, ಕೋಟಿ ರೂ ಮೌಲ್ಯದ ಕಾರುಗಳಲ್ಲಿ ಓಡಾಡುವರೆ ತುಂಬಿಕೊಂಡಿದ್ದಾರೆ. ಮತ ನೀಡಿದ ಜನಸಾಮಾನ್ಯರು ಬೀದಿಗೆ ಬಂದಿದ್ದಾರೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಕುಲಪತಿಯ ವೇಷದಲ್ಲಿ ಮಾಡಬಾರದ ಕೆಲಸ ಮಾಡಿದ್ದಕ್ಕೆ ವಿದ್ಯಾರ್ಥಿಗಳು ರಾಜ್ಯಪಾಲರನ್ನು ಪ್ರಶ್ನಿಸಿದ್ದಾರೆ: ಸಿಎಂ ಪಿಣರಾಯಿ

ತುಳುನಾಡು, ದುಸ್ಥಿತಿ,ದಶಕ,ಬಿಜೆಪಿ,ದುರಾಡಳಿತ,ಕಾರಣ, ಜಿಲ್ಲಾಧಿಕಾರಿ ಕಚೇರಿ,ಚಲೋ,ಸಿಪಿಐ(ಎಂ), ಸಿಪಿಐಎಂ,ಆರೋಪ ,decades,BJP,misrule,Tulunad, CPI(M),accused,district collector,Chalo

“ಖಾಸಗಿ ಆಸ್ಪತ್ರೆಗಳಲ್ಲಿ ದುಡ್ಡಿನ ಚೀಲ ಇಲ್ಲದವರಿಗೆ, ಶಿಕ್ಷಣ ಸಂಸ್ಥೆಗಳಲ್ಲಿ ಜನಸಾಮಾನ್ಯರ ಮಕ್ಕಳಿಗೆ ಪ್ರವೇಶ ಇಲ್ಲ. ಸರಕಾರಿ ಕಾಲೇಜು, ಆಸ್ಪತ್ರೆಗಳು ಬಾಗಿಲು ಮುಚ್ಚುತ್ತಿವೆ. ಜಿಲ್ಲೆಯ ಕೈಗಾರಿಕೆ, ಉದ್ಯಮಗಳಲ್ಲಿ ಸ್ಥಳೀಯ ಯುವಜನರನ್ನು ಉದ್ಯೋಗ ನೀಡದೆ ಹೊರದಬ್ಬಲಾಗುತ್ತಿದೆ. ಬಿಜೆಪಿ ಅಡಳಿತದ ನಗರ ಪಾಲಿಕೆಯಂತು ಭ್ರಷ್ಟಾಚಾರದ ಕೊಂಪೆಯಾಗಿದೆ. ಒಂದು ಕಾಲಕ್ಕೆ ಪ್ರಗತಿಪಥದಲ್ಲಿದ್ದ ಜಿಲ್ಲೆ ಇಂದು ಹತಾಶ ಸ್ಥಿತಿಗೆ ತಳ್ಳಲ್ಪಟ್ಟಿದೆ” ಎಂದು ಅವರು ಹೇಳಿದರು.

“ಬಿಜೆಪಿಯನ್ನು ಸೋಲಿಸದೆ ಜಿಲ್ಲೆ ಸಮಗ್ರ ಅಭಿವೃದ್ದಿಯ ಕಡೆಗೆ ಚಲಿಸಲು ಸಾಧ್ಯವೇ ಇಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಜನಸಾಮಾನ್ಯರು ಬಿಜೆಪಿಯ ಜನವಿರೋಧಿ ರಾಜಕಾರಣವನ್ನು ಸೋಲಿಸಲು ಒಂದಾಗಿ ಕೆಲಸ ಮಾಡಬೇಕಿದೆ” ಎಂದು ಮುನೀರ್ ಕಾಟಿಪಳ್ಳ ಕರೆ ನೀಡಿದರು.

ಸಿಪಿಐಎಂ ರಾಜ್ಯ ಸಮಿತಿ ಸದಸ್ಯ ವಸಂತ ಆಚಾರಿ, ಜಿಲ್ಲಾ ಸಮಿತಿ ಸದಸ್ಯರಾದ ಡಾ.ಕೃಷ್ಣಪ್ಪ ಕೊಂಚಾಡಿ, ಜಯಂತಿ ಶೆಟ್ಟಿ ಸಭೆಯನ್ನುದ್ದೇಶಿಸಿ ಮಾತನಾಡಿದರು‌. ಜೆ. ಬಾಲಕೃಷ್ಣ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸುನಿಲ್ ಕುಮಾರ್ ಬಜಾಲ್ ಕಾರ್ಯಕ್ರಮ ನಿರೂಪಿಸಿದರು, ಸಂತೋಷ್ ಬಜಾಲ್ ವಂದಿಸಿದರು.

ವಿಡಿಯೊ ನೋಡಿ: ಸಮುದಾಯ ರಾಜ್ಯ ಸಮ್ಮೇಳನ : ರಂಗಗೀತೆಗಳು : ಜರ್ನಿ ಥಿಯೇಟರ್ ತಂಡದಿಂದ Janashakthi Media

Donate Janashakthi Media

Leave a Reply

Your email address will not be published. Required fields are marked *