ಇನ್ನು ಆರು ತಿಂಗಳಲ್ಲಿ ಬಿಜೆಪಿ ಉಳಿಯಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ

ಕಲಬುರ್ಗಿ:ಇನ್ನು ಆರು ತಿಂಗಳಲ್ಲಿ ಬಿಜೆಪಿ ಉಳಿಯಲ್ಲ. ನಾನು ಅದಕ್ಕೆ ಗ್ಯಾರೆಂಟಿ ಕೊಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

ನಗರದಲ್ಲಿ ಸೋಮವಾರ ಮಾಧ್ಯಮಗಳ ಜತೆಗೆ ಮಾತನಾಡಿದ ಅವರು, ನಮಗೂ ರಾಜಕೀಯ ಮಾಡುವುದಕ್ಕೆ ಬರುತ್ತದೆ. ಅವರೊಬ್ಬರಿಗೆ ಮಾತ್ರ ಬರುತ್ತದೆಯಾ? ನಮಗೆ ಬರುವುದಿಲ್ಲವೇ? ನಾವೂ 140 ವರ್ಷಗಳಿಂದ ಪಕ್ಷವನ್ನು ಕಟ್ಟಿಕೊಂಡು ಬರುತ್ತಿದ್ದೇವೆ ಎಂದರು.

ಇದನ್ನೂ ಓದಿ:ಏಮ್ಸ್ ಸ್ಥಾಪನೆಗೆ ಕಲ್ಯಾಣ ಕರ್ನಾಟಕ ಭಾಗದ ಸಂಸದರು ಕೇಂದ್ರದ ಮೇಲೆ ಒತ್ತಡ ಹೇರಬೇಕು – ಪ್ರಿಯಾಂಕ್‌ ಖರ್ಗೆ

ಕರ್ನಾಟಕದಲ್ಲಿ ಅವರದ್ದು (ಬಿಜೆಪಿ) ಏನೂ ನಡೆದಿಲ್ಲ. ಮುಂದೆಯೂ ನಡೆಯಲ್ಲ. ಇನ್ನು ಆರು ತಿಂಗಳಲ್ಲಿ ಎಷ್ಟು ಜನ ಉಳಿದುಕೊಳ್ಳುತ್ತಾರೆ ನೋಡಿ ಎಂದು ಹೇಳಿದರು.

ಎಷ್ಟು ಜನ ಸಂಪರ್ಕದಲ್ಲಿ ಇದ್ದಾರೆ ಎಂಬ ಪ್ರಶ್ನೆಗೆ, ನನಗೆ ಗೊತ್ತಿಲ್ಲ. ಬಿಜೆಪಿಯವರನ್ನು ಕೇಳಿ. ಎಷ್ಟು ಜನ ಅಸಮಾಧಾನದಲ್ಲಿ ಇದ್ದಾರೆ ಎಂಬುವುದನ್ನು ಅವರನ್ನು ಕೇಳಿ ಎಂದು ಸಚಿವರು ಹೇಳಿದರು.

Donate Janashakthi Media

Leave a Reply

Your email address will not be published. Required fields are marked *