ಪೊಲೀಸ್‌ ಕಸ್ಟಡಿಗೆ ಬಿಜೆಪಿಯ ವಕೀಲ ದೇವರಾಜೇಗೌಡ

ಹಾಸನ: ಹೊಳೆನರಸೀಪುರ ನ್ಯಾಯಾಲಯವು ಮಹಿಳೆಗೆ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಬಂಧಿತರಾಗಿರುವ ಬಿಜೆಪಿ ಮುಖಂಡ ಹಾಗೂ ವಕೀಲ ಡಿ ದೇವರೇಜೇಗೌಡ ಅವರನ್ನು 3 ದಿನ ಪೊಲೀಸ್‌ ಕಸ್ಟಡಿಗೆ ನೀಡಿದೆ. ದೇವರಾಜೇಗೌಡ

10 ದಿನಗಳ ಹಿಂದೆ ಪರಿಚಯವಾಗಿದ್ದ ದೇವರಾಜೇಗೌಡ ಆಗಾಗ ಫೋನ್ ಮಾಡಿ ಹೊಳೆನರಸೀಪುರದಲ್ಲಿ ಮನೆ ಕಟ್ಟಿಸಿಕೊಡುತ್ತೇನ ಎಂದು ನಂಬಿಸಿ ಹಾಸನಕ್ಕೆ ಕರೆದೊಯ್ದು ದೈಹಿಕವಾಗಿ ದುರುಪಯೋಗ ಮಾಡಿಕೊಂಡಿದ್ದಾರೆ. ನಂತರ ಅಶ್ಲೀಲ ವಿಡಿಯೋ ಚಿತ್ರೀಕರಣ ಮಾಡಿಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಹೊಳೆನರಸೀಪುರ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಜ್ವಲ್‌ ರೇವಣ್ಣ ಪ್ರಕರಣದ ಪೆನ್‌ಡ್ರೈವ್‌ ಹಂಚಿಕೆಯ ಹಿಂದೆ ದೇವರಾಜೇಗೌಡ ಪಾತ್ರ ಇದೆ ಎನ್ನುವ ಶಂಕೆ ವ್ಯಕ್ತವಾಗಿದೆ. ಈ ನಿಟ್ಟಿನಲ್ಲೂ ತನಿಖೆ ನಡೆಯುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗಿದೆ.

ಇದನ್ನು ಓದಿ : ತಮ್ಮ‌ಆಸಕ್ತಿ ರಾಜಕಾರಣವಾದರೂ ಆಯ್ಕೆ ಶಿಕ್ಷಣ ಕ್ಷೇತ್ರ ಎಂದ ಡಿಕೆಶಿ

ಮೇ 11ರಂದು ದೇವರಾಜೇಗೌಡ ಬಂಧನವಾಗಿತ್ತು. ಅಂದು ಪ್ರಕರಣದ ಮಾಹಿತಿ ಪಡೆದಿದ್ದ ನ್ಯಾಯಾಲಯವು ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿತ್ತು.

ಹೊಳೆನರಸೀಪುರ ಟೌನ್‌ ಠಾಣೆಯ ಪೊಲೀಸರು ಸೋಮವಾರ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂನ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಎಸ್‌ ಸಿದ್ದರಾಮ ಅವರಿಗೆ ಮನವಿ ಮಾಡಿದರು. ಈ ಮನವಿ ಪುರಸ್ಕರಿಸಿದ ನ್ಯಾಯಾಧೀಶರು ದೇವರೇಜೇಗೌಡರನ್ನು ಮೇ 16ವರೆಗೆ ಪೊಲೀಸ್‌ ಕಸ್ಟಡಿ ನೀಡಿದ್ದಾರೆ.

ಇದನ್ನು ನೋಡಿ : ಎರಡು ಕೋಟಿ ಉದ್ಯೋಗ : ಎಲ್ಲಿ ಹೋದವು? ಮೋದಿ ಸರ್ಕಾರದ ಉತ್ತರವೇನು? Janashakthi Media

Donate Janashakthi Media

Leave a Reply

Your email address will not be published. Required fields are marked *