ಬಾಂಬ್ ಬೆದರಿಕೆ : ದೆಹಲಿ ವಿಮಾನ ನಿಲ್ದಾಣದಲ್ಲಿ ಓರ್ವ ವ್ಯಕ್ತಿ ಬಂಧನ

ಹೊಸದಿಲ್ಲಿ: ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಬಾಂಬ್ ಬೆದರಿಕೆ’ಯ ಹಿನ್ನೆಲೆಯಲ್ಲಿ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ವಿಸ್ತಾರಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಬಂಧಿತನು ದೂರವಾಣಿ ಸಂಭಾಷಣೆಯ ವೇಳೆ ‘ಬಾಂಬ್’ ಬಗ್ಗೆ ಮಾತನಾಡಿದ್ದು, ಇದನ್ನು ಆತನ ಸಹ ಪ್ರಯಾಣಿಕನು ಕೇಳಿಸಿಕೊಂಡಿದ್ದಾನೆ. ಜೂನ್ 7 ರಂದು (ಬುಧವಾರ) ಈ ಘಟನೆ ನಡೆದಿದೆ.

ಇದನ್ನೂ ಓದಿ:ಸಂಸದನಿಂದ ಆಸಿಡ್‌ ದಾಳಿ ಬೆದರಿಕೆ: ನವನೀತ್‌ ಕೌರ್‌ ರಾಣಾ ಆರೋಪ

ಆರೋಪಿಯನ್ನು ಉತ್ತರ ಪ್ರದೇಶದ ಪಿಲಿಭಿತ್ ನಿವಾಸಿ ಅಜೀಂ ಖಾನ್ ಎಂದು ಗುರುತಿಸಲಾಗಿದೆ. ವಿಸ್ತಾರಾ ವಿಮಾನ ಸಂಖ್ಯೆ ಯುಕೆ-941 ರಲ್ಲಿ ದೆಹಲಿಯಿಂದ ಮುಂಬೈಗೆ ಸಂಪರ್ಕ ವಿಮಾನದಲ್ಲಿ ದುಬೈಗೆ ಪ್ರಯಾಣಿಸುತ್ತಿದ್ದರು. ಆರೋಪಿ ‘ಬಾಂಬ್’ ಬಗ್ಗೆ ಫೋನ್ ಮೂಲಕ ಮಾತನಾಡುವುದನ್ನು ಮಹಿಳೆ ಕೇಳಿಸಿ ಕೊಂಡಿದ್ದಾರೆ. ತಕ್ಷಣ ಅವರು ವಿಮಾನದಲ್ಲಿದ್ದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ಮಹಿಳೆಯ ದೂರಿನ ಆಧಾರದ ಮೇಲೆ, ಸಿಬ್ಬಂದಿಗಳು ಆರೋಪಿಯನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆಗೆ (ಸಿಐಎಸ್ಎಫ್) ಹಸ್ತಾಂತರಿಸಿದರು, ನಂತರ ದೆಹಲಿ ಪೊಲೀಸರು ಆತನನ್ನು ಬಂಧಿಸಿದರು. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *