ವಿಮಾನ ನಿಲ್ದಾಣದ ನಿರ್ದೇಶಕರಿಗೆ ಬಾಂಬ್ ಬೆದರಿಕೆ

ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕರಿಗೆ ಬಾಂಬ್ ಬೆದರಿಕೆಯೊಂದು ಬಂದಿದೆ.

ವ್ಯಕ್ತಿಯೊಬ್ಬ ಮೇಲ್ ಮೂಲಕ ಅವರಿಗೆ ಜೀವ ಬೆದರಿಕೆ ಸಂದೇಶ ಕಳುಹಿಸಿದ್ದಾನೆ.

ಇದನ್ನೂ ಓದಿ: ಕುರಿಗಾಹಿಗಳ ರಕ್ಷಣೆಗೆ  ನಮ್ಮ ಸರ್ಕಾರ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ನಿರ್ದೇಶಕ ರೂಪೇಶಕುಮಾರ ಅವರ ಕಚೇರಿ ಮೇಲ್ ಐಡಿಗೆ ಜೂನ್ 25ರಂದು ಸಂಜೆ 6.30ರ ವೇಳೆ ಲಾಂಗ್ ಲಿವ್ ಪ್ಯಾಲೆಸ್ಟೈನ್ ಎಂಬ ಹೆಸರಿನಲ್ಲಿ ಬೆದರಿಕೆ ಸಂದೇಶ ಬಂದಿದೆ. ಈ ಸಂದೇಶದಲ್ಲಿ ನೀವು ಮಾಡಿದ ಎಲ್ಲ ಕೆಟ್ಟ ಕೆಲಸಗಳಿಗೆ ಉತ್ತರವಿಲ್ಲ ಎಂದು ಭಾವಿಸಿದ್ದೀರಾ..? ನಾವು ನಿಮ್ಮನ್ನು ನಾಶ ಮಾಡುತ್ತೇವೆ. ಬೆಂಕಿಯಲ್ಲಿ ಎಸೆಯುತ್ತೇವೆ. ಉಸಿರುಗಟ್ಟಿ ಸಾಯುತ್ತೀರ ಎಂದು ಬೆದರಿಕೆ ಸಂದೇಶ ಕಳುಹಿಸಲಾಗಿದೆ.

ಈ ಬಗ್ಗೆ ನಗರದ ಗೋಕುಲ್ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎರಡು ದಿನಗಳ ಹಿಂದೆ ಕಲಬುರಗಿ ವಿಮಾನ ನಿಲ್ದಾಣದ ಕಟ್ಟಡದಲ್ಲಿ ಬಾಂಬ್ ಇಡಲಾಗಿದೆ ಎಂದು ವಿಮಾನ ನಿಲ್ದಾಣದ ನಿರ್ದೇಶಕ ಚಿಲಕಾ ಮಹೇಶ್ ಅವರಿಗೆ ಇ- ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ತಕ್ಷಣವೇ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ ಸಿಬ್ಬಂದಿ, ಶ್ವಾನದಳ ತಪಾಸಣೆ ನಡೆಸಿ ಯಾವುದೇ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ ಎಂದು ತಿಳಿಸಿದ್ದರು.

ಇದನ್ನೂ ನೋಡಿ: ಸೌಹಾರ್ದತೆಯ ತಾಣ, ಮೊಹಮ್ಮದ್ ಗವಾನ್ ಮದರಸಾ Janashakthi Media

Donate Janashakthi Media

Leave a Reply

Your email address will not be published. Required fields are marked *