ಮಸೀದಿಗಳಿಗೆ ನುಗ್ಗಿ ಮುಸ್ಲಿಂರನ್ನು ಹುಡುಕಿ ಹುಡುಕಿ ಕೊಲ್ಲುತ್ತೇವೆ; ಬಿಜೆಪಿ ಶಾಸಕ ನಿತೀಶ್ ರಾಣೆ  ವಿವಾದಾತ್ಮಕ ಹೇಳಿಕೆ

ಮಹಾರಾಷ್ಟ್ರ : ಮಸೀದಿಗಳಿಗೆ ನುಗ್ಗಿ ಮುಸ್ಲಿಂರನ್ನು ಹುಡುಕಿ ಹುಡುಕಿ ಕೊಲ್ಲುತ್ತೇವೆ ಎಂದು ಮಹಾರಾಷ್ಟ್ರದ ಬಿಜೆಪಿ ಶಾಸಕ ನಿತೀಶ್ ರಾಣೆ  ವಿವಾದಾತ್ಮಕ ಹೇಳಿಕೆ ನೀಡಿದ್ದು, ಮಹಂತ್ ರಾಮಗಿರಿ ವಿರುದ್ಧ ಮುಸ್ಲಿಂ ಸಮುದಾಯದ ಪ್ರತಿಭಟನೆ ಕುರಿತಂತೆ ಎಚ್ಚರಿಕೆ ನೀಡಿದರು. ಮಸೀದಿ

ರಾಮಗಿರಿ ಮಹಾರಾಜರ ಬಗ್ಗೆ ಏನಾದರೂ ಹೇಳಿಕೆ ನೀಡಿದರೆ ಮಸೀದಿಗೆ ನುಗ್ಗಿ ಮುಸ್ಲಿಮರನ್ನು ಕೊಲ್ಲುತ್ತೇವೆ ಎಂದು ನಿತೇಶ್ ರಾಣೆ ಹೇಳಿದ್ದಾರೆ. ನಿಮ್ಮ ಸಮುದಾಯದ ಬಗ್ಗೆ ನಿಮಗೆ ಆತಂಕವಿದ್ದರೆ ನಮ್ಮ ರಾಮಗಿರಿ ಮಹಾರಾಜರ ಬಗ್ಗೆ ಏನೂ ಹೇಳಬೇಡಿ ಎಂದು ನಿತೀಶ್ ರಾಣೆ ಹೇಳಿದ್ದಾರೆ. ಈ ಹೇಳಿಕೆ ಪ್ರಚೋದನಕಾರಿ ಎಂದು ಬಣ್ಣಿಸಿದ್ದು, ಇದನ್ನು ಕಾಂಗ್ರೆಸ್ ಮತ್ತು ಆರ್‌ಜೆಡಿ ಸೇರಿದಂತೆ ಹಲವು ಪಕ್ಷಗಳು ತೀವ್ರವಾಗಿ ಖಂಡಿಸಿವೆ.

ಅಹಮದ್‌ನಗರ ಪೊಲೀಸರು ಆತನ ವಿರುದ್ಧ ಎರಡು ಪ್ರಕರಣಗಳನ್ನೂ ದಾಖಲಾಗಿದೆ. ಅಸಾದುದ್ದೀನ್ ಓವೈಸಿ ಪಕ್ಷ ಎಐಎಂಐಎಂ ಕೂಡ ರಾಣೆ ಅವರ ಹೇಳಿಕೆಯನ್ನು ಖಂಡಿಸಿದೆ. ಪಕ್ಷದ ವಕ್ತಾರ ಪಠಾಣ್ ಅವರು ನಿತೀಶ್ ರಾಣೆ ಅವರ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಚುನಾವಣೆಗೆ ಮುನ್ನ ಕೋಮುಗಲಭೆ ಸೃಷ್ಟಿಸಲು ಬಿಜೆಪಿ ಬಯಸಿದೆ ಎಂದು ಆರೋಪಿಸಿದ್ದಾರೆ. ನಿತೀಶ್ ರಾಣೆ ಅವರ ಭಾಷಣ ಉದ್ರೇಕಕಾರಿಯಾಗಿದೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇದನ್ನು ಓದಿ : ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದ ಯತ್ನಾಳ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು

ಇದಲ್ಲದೇ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಕೂಡ ನಿತೇಶ್ ರಾಣಾ ಅವರ ನೆಪದಲ್ಲಿ ಬಿಜೆಪಿಯನ್ನು ಗುರಿಯಾಗಿಸಿದ್ದಾರೆ. ವಾಸ್ತವವಾಗಿ, ಈ ಇಡೀ ವಿಷಯವು ಧಾರ್ಮಿಕ ಮುಖಂಡ ರಾಮಗಿರಿ ಮಹಾರಾಜರ ಹೇಳಿಕೆಯ ನಂತರ ಪ್ರಾರಂಭವಾಯಿತು. ರಾಮಗಿರಿ ಮಹಾರಾಜರು ಪ್ರವಾದಿ ಮೊಹಮ್ಮದ್ ಬಗ್ಗೆ ಹೇಳಿಕೆ ನೀಡಿದ್ದರು. ಇದರಿಂದಾಗಿ ಮುಸ್ಲಿಮರು ಪ್ರತಿಭಟನೆ ನಡೆಸಿದ್ದರು. ಮಹಾರಾಷ್ಟ್ರ, ಉತ್ತರಾಖಂಡ, ಮಧ್ಯಪ್ರದೇಶ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಮುಸ್ಲಿಂ ಸಮುದಾಯದವರು ಆಕ್ರೋಶ ವ್ಯಕ್ತಪಡಿಸಿದ್ದರು.

ಇದೇ ವೇಳೆ, ರಾಮಗಿರಿ ಮಹಾರಾಜರನ್ನು ಬಂಧಿಸುವಂತೆ ಒತ್ತಾಯಿಸಿದ್ದರು. ಒಂದು ವಿಭಾಗ ಅವರ ಬೆಂಬಲಕ್ಕೆ ನಿಂತಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ರಾಮಗಿರಿ ಮಹಾರಾಜರ ಪರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ನಿತೇಶ್ ರಾಣೆ ಬಂದಿದ್ದರು. ನಾಸಿಕ್ ಜಿಲ್ಲೆಯ ಶಾ ಪಾಂಚಲೆ ಗ್ರಾಮದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ನಿತೇಶ್ ರಾಣೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಕಾರ್ಯಕ್ರಮದ ವಿಡಿಯೋ ಕೂಡ ವೈರಲ್ ಆಗಿತ್ತು. ಅವರ ಹೇಳಿಕೆ ಮರಾಠಿಯಲ್ಲಿತ್ತು. ಆದರೆ ಜನರು ಅದನ್ನು ಹಿಂದಿಗೆ ಅನುವಾದಿಸಿದ ನಂತರ ಅದನ್ನು ಹಂಚಿಕೊಳ್ಳುತ್ತಿದ್ದಾರೆ.

ಇದನ್ನು ನೋಡಿ : ಮೋದಿಯಿಂದ ಸಂವಿಧಾನಕ್ಕೆ ಕಂಟಕ ಎಂದು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಕಳವಳ ವ್ಯಕ್ತಪಡಿಸಿದ್ದಾರೆ Janashakthi Media

Donate Janashakthi Media

Leave a Reply

Your email address will not be published. Required fields are marked *