ಸುಟ್ಟ ಸ್ಥಿತಿಯಲ್ಲಿ ಮಹಿಳೆ‌ಯ ಶವ ಪತ್ತೆ – ಅತ್ಯಾಚಾರ – ಕೊಲೆ ಶಂಕೆ?

ಬೆಂಗಳೂರು: ಕೆಂಗೇರಿಯ ರಾಮಸಂದ್ರದಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದು ಅತ್ಯಾಚಾರ-ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಮೃತ ಮಹಿಳೆಯ ವಯಸ್ಸು 25-30 ಇರಬಹುದು ಎಂದು ಅಂದಾಜಿಸಲಾಗಿದೆ. ಮೃತದೇಹ ಪತ್ತೆಯಾಗಿರೋ ಜಾಗದಲ್ಲಿ ಮದ್ಯದ ಬಾಟಲಿಗಳು ಹಾಗೂ ಚಪ್ಪಲಿ ಕೂಡ ಪತ್ತೆಯಾಗಿದೆ. ಸದ್ಯ ಪೊಲೀಸರು ಎಲ್ಲ ಸಾಕ್ಷಾಧಾರಗಳನ್ನು ವಶಪಡಿಸಿಕೊಂಡು ಮತಷ್ಟು ಹೆಚ್ಚಿನ ತನಿಖೆ ಮಾಡಲು ಮುಂದಾಗಿದ್ದಾರೆ.

ಘಟನಾ ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಎಸ್‌ಎಫ್‌ಎಲ್ ತಂಡ ಭೇಟಿ ನೀಡಿ ಘಟನಾ ಸ್ಥಳದಲ್ಲಿದ್ದ ಕೆಲ ವಸ್ತುಗಳನ್ನು ಪರೀಕ್ಷೆಗಾಗಿ ಶೇಖರಿಸಿದೆ.

ಮಹಿಳೆಯ ಮೃತದೇಹವನ್ನು ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಮರಣೋತ್ತರ ಪರೀಕ್ಷೆ ನಡೆಯಲಿದೆ. ಬೆಂಗಳೂರು ನಗರದಲ್ಲಿ ದಿನೇ ದಿನೇ ಕ್ರೈಂಗಳ ಸಂಖ್ಯೆ ಹೆಚ್ಚಾಗುತ್ತಿವೆ. ಮಹಿಳೆಯರಿಗೆ ಭದ್ರತೆ ಇಲ್ಲದಂತಾಗಿದೆ. ಪೊಲೀಸ್ ಇಲಾಖೆ ಇನ್ನಷ್ಟು ಚುರುಕಾಗಿ ಕೆಲಸ ಮಾಡಬೇಕಿದೆ. ರಾಜ್ಯ ಸರಕಾರ ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *