ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಲು ಕ್ರಮಕೈಗೊಳ್ಳಲು | ಸಚಿವ ಡಾ.ಎಂ.ಸಿ. ಸುಧಾಕರ್ ಸೂಚನೆ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ತ್ವರಿತವಾಗಿ ನೇಮಕಾತಿ ಆದೇಶ ನೀಡಲು ಕ್ರಮಕೈಗೊಳ್ಳುವಂತೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗೆ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಸೂಚಿಸಿದ್ದಾರೆ.

ಅಕ್ಟೋಬರ್- 12 ರಂದು ಪತ್ರ ಬರೆದಿರುವ ಅವರು, ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಬರುವ ಕಾಲೇಜು ಶಿಕ್ಷಣ ಇಲಾಖೆಯಲ್ಲಿ 1242 ಸಹಾಯಕ ಪ್ರಾಧ್ಯಾಪಕರನ್ನು ನೇರ ನೇಮಕಾತಿ ಮಾಡಿಕೊಳ್ಳಲು ಆದೇಶಿಸಲಾಗಿತ್ತು. ಅದರಂತೆ 2021ನೇ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸ್ಪರ್ಧಾತ್ಮಕ ಪರೀಕ್ಷೆ ಮುಖಾಂತರ 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ನಿಯಮಾನುಸಾರ ಆಯ್ಕೆ ಮಾಡಿ ಸರ್ಕಾರಕ್ಕೆ ಸಲ್ಲಿಸಿರುವುದು ಕಂಡುಬಂದಿದೆ.

ಇದನ್ನೂ ಓದಿ:ವಾರದೊಳಗೆ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆ ಆರಂಭ: ಸಚಿವ ಡಾ. ಎಂ.ಸಿ. ಸುಧಾಕರ್

ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಾಲಾದ ಪ್ರಕರಣವು ಬಾಕಿಯಿದ್ದು, ಈಗಾಗಲೇ ದೋಷಿಗಳನ್ನು ಗುರುತಿಸಿ ಅವರ ಮೇಲೆ ಮೊಕದ್ದಮೆ ದಾಖಲಿಸಿ, ದೋಷಾರೋಪಣ ಪಟ್ಟಿ ಸಲ್ಲಿಸಲಾಗಿದ್ದು, ಆರೋಪಿಗಳು ನ್ಯಾಯಾಲಯದಲ್ಲಿ ಜಾಮೀನನ್ನು ಪಡೆದಿದ್ದು ಪ್ರಕರಣವು ವಿಚಾರಣೆಯಲ್ಲಿರುತ್ತದೆ.

ಇದಲ್ಲದೇ ಪ್ರಸಕ್ತ ನೇಮಕಾತಿಗೆ ಸಂಬಂಧಿಸಿದಂತೆ ಬೇರೆ ಯಾವುದೇ ಪ್ರಕರಣಗಳು ತನಿಖಾಧಿಕಾರಿಗಳ ಮುಂದೆ ಇರುವುದಿಲ್ಲವೆಂದು ಹಾಗೂ ಮೀಸಲಾತಿ ಸಂಬಂಧಪಟ್ಟ, ಪ್ರಕರಣವು ನ್ಯಾಯಾಲಯದಲ್ಲಿ ಇತ್ತೀಚೆಗೆ ಇತ್ಯರ್ಥವಾಗಿರುವುದು ತಿಳಿದುಬಂದಿದೆ. ಈ ಸಂಬಂಧ ಆಯ್ಕೆಯಾದ ಅಭ್ಯರ್ಥಿಗಳು ನನಗೆ ಹಾಗೂ ಜನಪ್ರತಿನಿಧಿಗಳಿಗೆ ಅನೇಕ ಮನವಿಗಳನ್ನು ಸಲ್ಲಿಸಿ, ಕೂಡಲೇ ನೇಮಕಾತಿ ಆದೇಶ ಹೊರಡಿಸುವಂತೆ ಕೋರಿರುತ್ತಾರೆ.

ಸದರಿ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿ ಮೂರು ವರ್ಷಗಳು ಸಮೀಪಿಸುತ್ತಿದ್ದು, ಇನ್ನು ವಿಳಂಬಕ್ಕೆ ಅವಕಾಶ ನೀಡದ ಆಯ್ಕೆಯಾದ ಅಭ್ಯರ್ಥಿಗಳಿಗೆ ಆದೇಶ ಹೊರಡಿಸಲು ನಿಯಮಾನುಸಾರ ಕೈಗೊಳ್ಳಬೇಕಾದ ಪೂರ್ವಭಾವಿ ಎಲ್ಲಾ ಅಗತ್ಯ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ವಿಡಿಯೋ ನೋಡಿ:ನಿರುದ್ಯೋಗ । ವಿಶೇಷ ಉಪನ್ಯಾಸ । ಕೃತಿ ಲೋಕಾರ್ಪಣೆ

Donate Janashakthi Media

Leave a Reply

Your email address will not be published. Required fields are marked *