ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಸಿಕ ಗೌರವಧನ ಮತ್ತು ಅವರ ಕುಟುಂಬ ಸದಸ್ಯರಿಗೆ ಮಾಸಿಕ ಪಿಂಚಣಿ ಪಾವತಿಸದಿರುವ ಬಗ್ಗೆ ಮಾಧ್ಯಮ ವರದಿಯನ್ನು ಗಮನದಲ್ಲಿಟ್ಟುಕೊಂಡು, ರಾಜ್ಯದ 16 ಜಿಲ್ಲೆಗಳ 29 ಸಹಾಯಕ ಆಯುಕ್ತರ ವಿರುದ್ಧ ಸೆಪ್ಟೆಂಬರ್ 19ರಂದು ಉಪ ಲೋಕಾಯುಕ್ತವು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದೆ.
ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬಳ್ಳಾರಿ, ವಿಜಯನಗರ, ಬೀದರ್, ದಕ್ಷಿಣ ಕನ್ನಡ, ದಾವಣಗೆರೆ, ಹಾವೇರಿ, ಕಲಬುರಗಿ, ಕೋಲಾರ, ಕೊಪ್ಪಳ, ಮಂಡ್ಯ, ರಾಯಚೂರು, ತುಮಕೂರು ಮತ್ತು ಉಡುಪಿಯ ಸಹಾಯಕ ಆಯುಕ್ತರ ವಿರುದ್ಧ ಪ್ರಕರಣ ದಾಖಲಾಗಿದೆ.
ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಕಂದಾಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಿಗೆ ಸಹಾಯಕ ಆಯುಕ್ತರು ನವೆಂಬರ್ 26 ರೊಳಗೆ ಈ ಪರಿಸ್ಥಿತಿಯ ಬಗ್ಗೆ ಪೂರಕ ದಾಖಲೆಗಳೊಂದಿಗೆ ವರದಿ ಸಲ್ಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ಪ್ರೀಮಿಯರ್ ಶೋನಲ್ಲೇ ಪ್ರೇಕ್ಷಕರ ಮೆಚ್ಚುಗೆ ಪಡೆದ ಮತ್ತೊಂದು ಕನ್ನಡ ಸಿನಿಮಾ “ಅರಸಯ್ಯನ ಪ್ರೇಮಪ್ರಸಂಗ”
ಶುಕ್ರವಾರ ದಾಖಲಾದ ಸ್ವಯಂ ಪ್ರೇರಿತ ಪ್ರಕರಣದ ಆದೇಶದಲ್ಲಿ ಉಲ್ಲೇಖಿಸಲಾದ ಮಾಹಿತಿ ಪ್ರಕಾರ, ರಾಜ್ಯದಾದ್ಯಂತ 150 ಸ್ವಾತಂತ್ರ್ಯ ಹೋರಾಟಗಾರರಿದ್ದಾರೆ. ಅವರಲ್ಲಿ ಮೂವರು ಮಹಿಳೆಯರು. ಸರ್ಕಾರವು ಅವರಿಗೆ ಗೌರವ ಧನವಾಗಿ ತಲಾ 10,000 ರೂ. ಮತ್ತು ಅವರ ವಿಧವೆ ಪತ್ನಿಯರಿಗೆ ಮಾಸಿಕ ಪಿಂಚಣಿಯಾಗಿ ತಲಾ 4,000 ರೂ.ಗಳನ್ನು 1980ರ ಸ್ವತಂತ್ರ ಸೈನಿಕ ಸಮ್ಮಾನ್ ಪಿಂಚಣಿ ಯೋಜನೆ ಅಡಿಯಲ್ಲಿ ಪಾವತಿಸುತ್ತಿದೆ.
ಆದಾಗ್ಯೂ, 27 ಜಿಲ್ಲೆಗಳಲ್ಲಿ ಕಳೆದ ಕೆಲವು ತಿಂಗಳುಗಳಿಂದ ಈ ಮಾಸಿಕ ಭತ್ಯೆಗಳನ್ನು ತಡೆಹಿಡಿಯಲಾಗಿದೆ ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ ವೀರಪ್ಪ ಅವರ ಗಮನಕ್ಕೆ ಬಂದಿದೆ.
ರಾಷ್ಟ್ರಕ್ಕಾಗಿ ಅವರ ತ್ಯಾಗವನ್ನು ಸ್ಮರಿಸುವಾಗ ಇದು ತುಂಬಾ ನಿರಾಶಾದಾಯಕ ಮತ್ತು ಅವರಿಗೆ ಮಾಡಿದ ಅವಮಾನವಾಗಿದೆ. ಇದು ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ದುರಾಡಳಿತಕ್ಕೆ ಸಮಾನವಾಗಿದೆ ಎಂದು ಗಮನಿಸಿದರು.
ಇದನ್ನೂ ನೋಡಿ: ಬಿಹಾರದಲ್ಲಿ ಸರ್ (SIR) ಸೃಷ್ಟಿಸಿದ ಸುಳ್ಳು ಕಥೆಗಳು – ವಿಶ್ಲೇಷಣೆ : ಗುರುರಾಜ ದೇಸಾಯಿ Janashakthi Media
