ಹಾಸನ: ಹೊಳೆನರಸೀಪುರ ತಾಲ್ಲೂಕು, ಹಳ್ಳಿ ಮೈಸೂರಿನಲ್ಲಿ ಇರುವ ಹಾಸನ ವಿಶ್ವ ವಿದ್ಯಾನಿಲಯ ಘಟಕ ಕಾಲೇಜಿನಲ್ಲಿ ಜಾತಿ ತಾರತಮ್ಯ-ಅಸ್ಪೃಶ್ಯತೆ ಆಚರಣೆ ಕಂಡು ಬಂದಿದ್ದು ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಡಿಎಚ್ಎಸ್ ಆಗ್ರಹಿಸಿದೆ. ಮೈಸೂರು
ಪರಿಶಿಷ್ಟ ಜಾತಿ(ಎಸ್.ಸಿ) ಸಮುದಾಯಕ್ಕೆ ಸೇರಿದ ಪರಮೇಶ್ ಜಿ.ಕೆ ಎಂಬುವವರು ಕಳೆದ 4 ವರ್ಷಗಳಿಂದ ಪರಿಚಾರಕರಾಗಿ (ಅಟೆಂಡರ್) ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರ ಮೇಲೆ ಅದೇ ಕಾಲೇಜಿನಲ್ಲಿ ಅಥಿತಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಕವಿತಾ ಬಿ.ಡಿ ಮತ್ತು ಡಾ. ಚಂದ್ರಶೇಖರ್ ಎಚ್.ಆರ್ ಎಂಬುವವರು ಹಲವು ತಿಂಗಳುಗಳಿಂದ ಪರಮೇಶ್ ರವರು ಪರಿಶಿಷ್ಟ ಜಾತಿಯ ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಕಾಲೇಜಿನಲ್ಲಿ ಮಧ್ಯಾನ್ಹದ ಊಟದ ಸಂದರ್ಭಗಳಲ್ಲಿ ಜೊತೆಯಲ್ಲೇ ಒಟ್ಟಿಗೆ ಕೂತು ಊಟ ಮಾಡುವುದನ್ನು ಸಹಿಸದೆ ಕುಯ್ಯುಕ್ತಿಯಿಂದ ಹಲವು ನೆಪಗಳನ್ನೊಡ್ಡಿ ಪರಮೇಶ್ ಊಟ ಮಾಡುವುದನ್ನು ತಪ್ಪಿಸಿರುತ್ತಾರೆ. ಮೈಸೂರು
ನಾಯಿಗೆ ನಿಂದಿಸುವ ನೆಪದಲ್ಲಿ ಮಾರ್ಮಿಕವಾಗಿ ಬಯ್ಯುವುದು ಸೇರಿದಂತೆ, ನಾವು ಒಬ್ಬ ಎಸ್.ಸಿ (ಪರಿಶಿಷ್ಟ ಜಾತಿ) ಯವನ ಜೊತೆ ಕೂರಬೇಕಾ ಎಂದು ಸಾರ್ವಜನಿಕವಾಗಿ ಅವರಿವರ ನೆಪದಲ್ಲಿ ನಿಂದಿಸಿ, ಜಾತಿಯತೆ ಅಸ್ಪೃಶ್ಯತೆ ಆಚರಣೆ ಮಾಡಿದ್ದಾರೆ. ಈ ಬಗ್ಗೆ ದಿನಾಂಕ: 20/03/2025 ರಂದು ಕವಿತ ಮತ್ತು ಚಂದ್ರಶೇಖರ್ ರವರುಗಳು ಪರಮೇಶ್ ರವರ ಮಾನಕ್ಕೆ ಕುಂದುಂಟಾಗುಂತೆ ಮತ್ತೊರ್ವರ ಸಮ್ಮುಖದಲ್ಲಿ ಜಾತಿಯ ಹೆಸರು ಹಿಡಿದು ಅಪಮಾನಿಸಿ ಮಾತನಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಮೈಸೂರು
ಇದನ್ನೂ ಓದಿ: ಕೃಷಿ ಕೋರ್ಸ್ ಸೀಟು ಪಡೆಯಲು ಸಲ್ಲಿಕೆಯಾಗಿದ್ದ 5,288 ಅರ್ಜಿ ತಿರಸ್ಕಾರ
ಕವಿತ ಬಿ.ಡಿ ರವರು ಪರಮೇಶ ನೀನು ಪ್ರಾಂಶುಪಾಲರು ಅಥವಾ ಪೊಲೀಸ್ ಗೆ ದೂರು ನೀಡಲು ಮುಂದಾದರೆ, ನಾನು ಹೇಗಿದ್ದರೂ ಹೆಂಗಸು ಬೇರೆ ಕೇಸನ್ನೇ ಕೊಡುತ್ತೇನೆಂದು ಮತ್ತು ನಿನ್ನನ್ನು ಇಲ್ಲಿ ಇರುಲು ಬಿಡುವುದಿಲ್ಲ. ಬೇರೆ ಕಡೆಗೆ ವರ್ಗಾವಣೆ ಮಾಡಿಸುತ್ತೇನೆಂದು ಬೆದರಿಕೆ ಹಾಕುವುದರ ಜೊತೆಗೆ ನೀನು ನಮ್ಮಂಥವರೊಂದಿಗೆ ಕೆಲಸ ಮಾಡಲು ಅರ್ಹನಲ್ಲ ಎಂದು ಪರಮೇಶ್ ರವರನ್ನು ಜಾತಿ ಹೆಸರಿನಲ್ಲಿ ಕೀಳಾಗಿ ಅಪಮಾನಿಸಿ ತೊಂದರೆ ನೀಡಿದ್ದಾರೆ ಎಂದು ಡಿಎಚ್ಎಸ್ ಆರೋಪಿಸಿದೆ.
ಈ ಎಲ್ಲಾ ಬೆಳವಣಿಗೆಗಳಿಂದ ನೊಂದ ಪರಮೇಶ್ ರವರು ಹಾಸನ ವಿಶ್ವ ವಿದ್ಯಾನಿಲಯದ ಕುಲ ಸಚಿವರಿಗೆ ಪತ್ರ ಬರೆದು, ಕವಿತ.ಬಿ.ಡಿ ಮತ್ತು ಡಾ.ಚಂದ್ರಶೇಖರ್ ಎಚ್. ಆರ್. ಎಂಬುವವರ ಮೇಲೆ ಅದೇದಿನ ಅಂದರೆ 20.03.2025 ರಂದು ಹಳ್ಳಿ ಮೈಸೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದ್ದು, ಎಫ್ಐಆರ್ ಮಾಡಲಾಗಿರುತ್ತದೆ. ನಂತರ ಅರಕಲಗೂಡು ಶಾಸಕ ಎ. ಮಂಜು ರವರು ಕಾಲೇಜಿಗೆ ಬೇಟಿ ನೀಡಿ, ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುವ ಬದಲು ಜಾತಿ ನಿಂದನೆಗೆ ಒಳಗಾಗಿ ನೊಂದ ಪರಮೇಶ್ ಎಂಬುವವರ ಮೇಲೆ ದಬ್ಬಾಳಿಕೆಯ ಮಾತುಗಳನ್ನಾಡಿ, ದೂರನ್ನು ಹಿಂಪಡೆಯುವಂತೆ ಬೆದರಿಕೆ ಒಡ್ಡಿರುವುದು ಅತ್ಯಂತ ಖಂಡನೀಯವಾಗಿದೆ.
ಒಂದು ಶೈಕ್ಷಣಿಕ ಸಂಸ್ಥೆಯಲ್ಲಿ ಜಾತಿಯತೆ, ಅಸ್ಪೃಶ್ಯತಾ ಆಚರಣೆ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ಇಷ್ಟು ದಿನಗಳಾದರೂ ವಿ.ವಿ ಕೇಂದ್ರದಿಂದ ಯಾರಿಗೂ ನೋಟೀಸ್ ನೀಡದೇ, ಯಾವುದೇ ವಿಚಾರಣೆ ನಡೆಸದೆ ಕ್ರಮ ಕೈಗೊಳ್ಳದಿರುವುದು ಹಾಗೂ ಈ ಬಗ್ಗೆ ಸರಿಯಾದ ಪೊಲೀಸ್ ತನಿಕೆ ನಡೆಸದಿರುವುದು ಅತ್ಯಂತ ನಿರ್ಲಕ್ಷ್ಯತನವಾಗಿರುತ್ತದೆ. ಇದು ವಿದ್ಯಾರ್ಥಿಗಳ ನಡುವೆ, ಶೈಕ್ಷಣಿಕ ವಲಯದಲ್ಲಿ ಕೆಟ್ಟ ವ್ಯತಿರಿಕ್ತ ಪರಿಣಾಮ ಬೀರುತ್ತದೆ.
ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪಾಠ ಹೇಳುವ ಉಪನ್ಯಾಸಕರೇ ಈ ರೀತಿಯಲ್ಲಿ ಅನಾಗರೀಕವಾಗಿ ಅಸ್ಪೃಶ್ಯತೆ, ಜಾತಿ ತಾರತಮ್ಯ ಮಾಡಿರುವುದು ಅತ್ಯಂತ ದುರಂತದ ಸಂಗತಿ ಮತ್ತು ನಾಗರೀಕ ಸಮಾಜ ತಲೆ ತಗ್ಗಿಸುವಂತಹದ್ದಾಗಿರುತ್ತದೆ ಎಂದು ಡಿಎಚ್ಎಸ್ ಜಿಲ್ಲಾ ಸಂಚಾಲಕ ಪೃಥ್ವಿ ಎಂಜಿ ತಿಳಿಸಿದ್ದಾರೆ.
ಶಾಸಕರಾದ ಎ. ಮಂಜುರವರು ಹಾಗು ಹಾಸನ ವಿ.ವಿ ಆಡಳಿತ ಮಂಡಳಿ ತಪ್ಪಿತಸ್ಥರ ಪರವಾಗಿರುವುದನ್ನು ಡಿಎಚ್ಎಸ್ ವಿರೋಧಿಸುತ್ತದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಾಸನ ವಿಶ್ವವಿದ್ಯಾನಿಲಯದ ಉಪ ಕುಲಪತಿ, ಕುಸಚಿವರು ಈ ಪ್ರಕರಣವನ್ನು ಬಹಳ ಸೂಕ್ಷ್ಮತೆಯಿಂದ ಗಂಭೀರವಾಗಿ ಪರಿಗಣಿಸಿ ಜಾತಿ ದೌರ್ಜನ್ಯ ಮತ್ತು ಅಸ್ಪೃಶ್ಯತೆ ಆಚರಿಸಿರುವವರ ಕವಿತ ಬಿ.ಡಿ. ಮತ್ತು ಡಾ. ಚಂದ್ರಶೇಖರ್ ಎಚ್. ಆರ್. ಎಂಬುವವರ ಮೇಲೆ ಸೂಕ್ತ ಕ್ರಮ ಜರುಗಿಸಿ, ನೊಂದ ಪರಮೇಶ್ ರವರಿಗೆ ನ್ಯಾಯ ದೊರಕಿಸಬೇಕೆಂದು ಒತ್ತಾಯಿಸುತ್ತದೆ. ಹಾಗೂ ಪೊಲೀಸ್ ಇಲೆಖೆಯ ಯಾವುದೆ ಒತ್ತಡಕ್ಕೆ ಮಣಿಯದೇ ಸೂಕ್ತ ರೀತಿಯಲ್ಲಿ ತನಿಕಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.
ಜಾತಿ ದೌರ್ಜನ್ಯ ಮತ್ತು ಅಸ್ಪೃಶ್ಯತೆ ಆಚರಿಸಿರುವವರ ಮೇಲೆ ಕ್ರಮ ಕೈಗೊಳ್ಳದಿದ್ದರೆ, ಜಾತಿ ದೌರ್ಜನ್ಯ ಕೊಳಗಾದ ಪರಮೇಶ ರವರಿಗೆ ನ್ಯಾಯ ದೊರಕಿಸದಿದ್ದರೆ ತೀವ್ರವಾದ ಹೋರಾಟಕ್ಕೆ ಮುಂದಾಗುತ್ತೇವೆ ಎಂದು ಸಂಘಟನೆ ಎಚ್ಚರಿಸಿದೆ.
ಇದನ್ನೂ ನೋಡಿ: ಚಾಮರಾಜನಗರಕ್ಕೆ ಬರುವುದರಿಂದ ಅಧಿಕಾರ ಮತ್ತಷ್ಟು ಗಟ್ಟಿಯಾಗ್ತಿದೆ – ಸಿಎಂ ಸಿದ್ದರಾಮಯ್ಯ Janashakthi Media