ಭೂಸುಧಾರಣೆ, ಎಪಿಎಂಸಿ, ಕಾರ್ಮಿಕ ಕಾನೂನುಗಳಿಗೆ ತಿದ್ದುಪಡಿ ವಿರೋಧಿಸಿ ಜೆಡಿಎಸ್ ಪ್ರತಿಭಟನೆ

  • ಮಾಜಿ ಪ್ರಧಾನಿ, ರಾಜ್ಯ ಸಭಾ ಸದಸ್ಯ ಎಚ್.ಡಿ ದೇವೇಗೌಡರ ನೇತೃತ್ವದಲ್ಲಿ  ಧರಣಿ

ಹಾಸನ: ರೈತ ಮತ್ತು ಕಾರ್ಮಿಕರ ಹಿತಕ್ಕೆ ಧಕ್ಕೆ ತರುವ ತಿದ್ದುಪಡಿಗಳನ್ನು ಹಿಂತೆಗೆದುಕೊಳ್ಳಲು ಒತ್ತಾಯಿಸಿ ಜೆಡಿಎಸ್ ವತಿಯಿಂದ ಮಾಜಿ ಪ್ರಧಾನಿ ಹಾಗೂ ರಾಜ್ಯ ಸಭಾ ಸದಸ್ಯ ಎಚ್.ಡಿ ದೇವೇಗೌಡರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಯಿತು.
ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಮೆರವಣಿಗೆಯಲ್ಲಿ ಸಾಗಿದ ಜೆಡಿಎಸ್ ಕಾರ್ಯಕರ್ತರು, ಜೆಡಿಎಸ್ ಬಾವುಟ ಹಿಡಿದು ರಾಜ್ಯ ಸರ್ಕಾರದ ವಿರುದ್ಧ ಘೋಷನೆ ಕೂಗುತ್ತಾ ಬಿ.ಎಂ. ರಸ್ತೆ ಮೂಲಕ ಜಿಲ್ಲಾಧಿಕಾರಿ ಕಚೇರಿ ತಲುಪಿ ಮಳೆಯ ನಡುವೆಯೂ ಧರಣಿ ನಡೆಸಿದರು.

ಜೆಡಿಎಸ್‍  ರಾಜ್ಯಾಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ ಮಾತನಾಡಿ, ಕರ್ನಾಟಕ ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಿಂದ ಉಳ್ಳವರು ಕೃಷಿ ಭೂಮಿ ಖರಿದಿಗೆ ಮುಂದಾಗುತ್ತಾರೆ. ಇದರಿಂದ ಕೃಷಿ ಭೂಮಿ ಹಣವಂತರ ಕೈ ಸೇರಲಿದೆ. ರಾಜ್ಯದಲ್ಲಿ ರೈತರ ಜಮೀನು ಲೂಟಿ ಆಗಲಿದೆ. ಆದ್ದರಿಂದ ಈ ಕಾಯ್ದೆ ತಿದ್ದುಪಡಿಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಮುಖ್ಯ ಮಂತ್ರಿ ಯಡಿಯೂರಪ್ಪ ಹಾಗೂ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.

ಶಾಸಕ ಎಚ್.ಡಿ. ರೇವಣ್ಣ ಮಾತನಾಡಿ, ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ದ್ವೇಷದ ರಾಜಕಾರಣ ಮಾಡಿಕೊಂಡು ಬರಲಾಗುತ್ತಿದೆ. ವಿಧಾನ ಸಭೆ ಅಧಿವೇಶನ ಕರೆಯಲಿ. ರಾಜ್ಯ ಸರ್ಕಾರದ ಭ್ರಷ್ಟಚಾರದ ಕುರಿತು ಎಳೆಎಳೆಯಾಗಿ ಬಿಚ್ಚಿಡಲಾಗುವುದು. ಯಡಿಯೂರಪ್ಪ ಅವರಿಗೆ ಮುಖ್ಯ ಮಂತ್ರಿಯಾಗಿರುವು ಇದೇ ಕೊನೆಯ ಅವಧಿ ಆದ್ದರಿಂದ ಎಷ್ಟು ಬೇಕೋ ಅಷ್ಟು ಭ್ರಷ್ಟಾಚಾರ ಮಾಡಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.
ಸಂಸದ ಪ್ರಜ್ವಲ್ ರೇವಣ್ಣ ಮಾತನಾಡಿ, ರಾಜ್ಯದಲ್ಲಿ ಉದ್ಯೋಗ ಸೃಷ್ಠಿ ಮಾಡಬೇಕು ಎಂದು ಅನೇಕ ಬಾರಿ ಕೇಳಿದ್ದೇವೆ.  ಆದರೆ ರೈತರಿಂದ ಭೂಮಿ ಕಿತ್ತುಕೊಂಡು ಯುವಕರಿಗೆ ಉದ್ಯೋಗ ನೀಡಿ ಎಂದು ನಾವು ಕೇಳಿಲ್ಲ. ಕೈಗಾರಿಕೆಗಳಿಗೆ ಶಕ್ತಿ ನೀಡುವ ಉದ್ದೇಶದಿಂದ ಕಾಯ್ದೆಗೆ ತಿದ್ದುಪಡಿ ತರಲಾಗಿದೆ ಎನ್ನುತ್ತಾರೆ. ಆದರೆ, ಇದರಿಂದ ಸಾಕಷ್ಟು ರೈತರಿಗೆ ಅನನುಕೂಲ ಆಗಲಿದೆ. ಹಾಸನದಲ್ಲಿ ರಾಜ್ಯ ಸರ್ಕಾರದ ಈ ನಡೆಯ ವಿರುದ್ಧ ಹೋರಾಟ ಆರಂಭವಾಗಿದ್ದು, ಪಕ್ಷಭೇದ ಮರೆತು ಎಲ್ಲರೂ ಕೈಜೋಡಿಸಬೇಕು ಎಂದು ಕರೆಕೊಟ್ಟರು.
ಶಾಸಕ ಎ.ಟಿ ರಾಮಸ್ವಾಮಿ ಮಾತನಾಡಿ, ಉಳುವವನೇ ಭೂಮಿಯ ಒಡೆಯ ಎಂಬು ಉದ್ದೇಶ ಹೊಂದಿದ್ದ ಕರ್ನಾಟಕ ಭೂ ಸುಧಾರಣಾ ಕಾಯ್ದೆ ಇಡೀ ದೇಶಕ್ಕೆ ಮಾದರಿಯಾಗಿತ್ತು. ಆದರೆ ರಾಜ್ಯ ಬಿಜೆಪಿ ಸರ್ಕಾರ ತಿದ್ದುಪಡಿ ತರುವ ಮೂಲಕ ಉಳ್ಳವನೇ ಭೂಮಿಯ ಒಡೆಯ ಎಂದು ಅರ್ಥ ನೀಡಿದೆ. ಹಣವಂತರು ಈಗಾಗಲೇ ಕೃಷಿ ಭೂಮಿ ಖರೀದಿ ಮಾಡುವ ಪ್ರಕ್ರಿಯೇ ನಡೆಯುತ್ತಿದೆ. ಆದ್ದರಿಂದ ರೈತರ ಹಿತದೃಷ್ಠಿಯಿಂದ ಎಪಿಎಂಸಿ ಕಾಯ್ದೆ, ಕಾರ್ಮಿಕ ಕಾಯ್ದೆ ಮನ್ನು ಕರ್ನಾಟಕ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ ಮಾತನಾಡಿ, ಕೇಂದ್ರ ಸರ್ಕಾರ ಜನ ವಿರೋಧಿ ಕಾನೂನುಗಳನ್ನ ಜಾರಿ ಮಾಡಿದೆ, ಕೊರೊನಾ ಇಲ್ಲದೆ ಹೋಗಿದ್ರೆ ರಕ್ತ ಪಾತ ಆಗೋಕೆ ನಾವು ಬಿಡುತ್ತಿರಲಿಲ್ಲ. ಆದ್ರೆ ಏನ್ಮಾಡೋದು ಕೊರೊನಾದಿಂದ ನೀವು ಬಚಾವಾಗಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ-ಟೆಂಡರ್ ಅಂತೀರಾ, ಇದ್ರಿಂದ ಯಾರಿಗಾದ್ರು ಉಪಯೋಗ ಆಗಿದ್ಯಾ? ಪ್ರಧಾನಿ ಮೋದಿಯವರೇ ನೀವು ಹೇಳುತ್ತಿರೊ ಯೋಜನೆಗಳಿಂದ ಯಾರಿಗಾದ್ರು ಉಪಯೋಗ ಆಗಿದ್ಯಾ, ಸುಮ್ಮನೇ ಬೋಗಸ್ ಯೋಜನೆ ತಂದು ಜನರನ್ನ ದಿಕ್ಕೆಡಿಸುತ್ತಿದ್ದೀರಾ, ನಿಮಗೆ ಒಳ್ಳೆಯದಾಗಲ್ಲ, ಭೂ ತಾಯಿ ನಿಮ್ಮನ್ನ ಕ್ಷಮಿಸೋದಿಲ್ಲ ಎಂದು ಕಿಡಿಕಾರಿದರು.
ಪ್ರತಿಭಟನೆಯಲ್ಲಿ ಶಾಸಕ ಸಿ.ಎನ್. ಬಾಲಕೃಷ್ಣ, ಕೆ.ಎಸ್.ಲಿಂಗೇಶ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಎಚ್.ಪಿ.ಸ್ವರೂಪ್, ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.

ಬೆಂಗಳೂರು ಗಲಭೆ ಪ್ರಕರಣ ಉನ್ನತ ತನಿಖೆಯಾಗಲಿ: ಹೆಚ್ಡಿಡಿ

ಕಾಯ್ದೆ ತಿದ್ದುಪಡಿ ವಿರುದ್ಧ ತವರಿಂದಲೇ ಹೋರಾಟ ಆರಂಭ   ಹಾಸನ: ಬೆಂಗಳೂರಿನ ಡಿಜೆಹಳ್ಳಿ ಮತ್ತು ಕೆಜಿಹಳ್ಳಿಯಲ್ಲಿ ನಡೆದಿರುವ ಗಲಭೆ ಪ್ರಕರಣದ ಬಗ್ಗೆ…

ದಲಿತರ ಮೇಲಿನ ದೌರ್ಜನ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ

ಬೆಂಗಳೂರು: ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ ವಿರೋಧಿಸಿ ಹಾಗೂ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ರದ್ದುಪಡಿಸಲು ಒತ್ತಾಯಿಸಿ ದಲಿತ ಹಕ್ಕುಗಳ ಸಮಿತಿಯಿಂದ…

ವಿಶ್ವಾಸ ಗೆದ್ದ ಅಶೋಕ್ ಗೆಹ್ಲೋಟ್ ಸರ್ಕಾರ

ಆಂತರಿಕ ಭಿನ್ನಮತದಿಂದ ಬಂಡಾಯವೆದ್ದಿದ್ದ ಸಚಿನ್ ಪೈಲಟ್ ರಾಹುಲ್, ಪ್ರಿಯಾಂಕ, ಹಿರಿಯ ಕಾಂಗ್ರೆಸ್ಸಿಗರ ಮನವೊಲಿಕೆಯಿಂದ ಮರಳಿದ್ದ ಸಚಿನ್ ಪೈಲಟ್ ವಿಶ್ವಾಸಮತ ಯಾಚನೆ ವೇಳೆ…

ವಿಪಕ್ಷಗಳ ಸಾಲಿನ ಪಕ್ಕದಲ್ಲಿ ಕುಳಿತ ಬಂಡಾಯಗಾರ ಸಚಿನ್ ಪೈಲಟ್

–      ವಿಶ್ವಾಸಮತ ಕೋರಲು ಸಜ್ಜಾಗಿರುವ ಕಾಂಗ್ರೆಸ್ ಸರ್ಕಾರ –      ತಾವು ಕಾಂಗ್ರೆಸ್‌ ಪಕ್ಷದ ಅತ್ಯಂತ ನಿಷ್ಠಾವಂತ ಕಟ್ಟಾಳು ಎಂದ ಪೈಲಟ್ ಜೈಪುರ:…

ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಪ್ರಶಾಂತ್ ಭೂಷಣ್ ದೋಷಿ: ಸುಪ್ರೀಂ ಕೋರ್ಟ್

ಕಳೆದ ಆರು ವರ್ಷಗಳಲ್ಲಿ ‘ಭಾರತದ ಪ್ರಜಾಪ್ರಭುತ್ವದ ನಾಶ’ದಲ್ಲಿ ಸುಪ್ರೀಂ ಕೋರ್ಟ್ ಪಾತ್ರ ವಹಿಸಿದೆ ಎಂದು ಟ್ವೀಟ್‌ ಮಾಡಿದ್ದ ಪ್ರಶಾಂತ್ ಭೂಷಣ್  …

ಅಂಡಮಾನ್ -ನಿಕೋಬಾರ್ ನಲ್ಲಿ ಕೊರೊನಾ ಗಂಭೀರ: ತುರ್ತು ಕ್ರಮಕ್ಕೆ ಯೆಚೂರಿ ಆಗ್ರಹ

  • ಯುದ್ಧೋಪಾದಿಯಲ್ಲಿ ಕ್ರಮ ಕೈಗೊಳ್ಳಿ- ಪ್ರಧಾನ ಮಂತ್ರಿಗಳಿಗೆ ಯೆಚುರಿ ಪತ್ರ

ನವದೆಹಲಿ: ಕೊರೊನಾ ಸೋಂಕು ಬಹಳ ಅಪಾಯಕಾರಿಯಾಗಿ ಹರಡುತ್ತಿರುವ ಅಂಡಮಾನ್‌  ಮತ್ತು ನಿಕೋಬಾರ್ ದ್ವೀಪ ಸಮೂಹದಲ್ಲಿ  ತುರ್ತುಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಪ್ರಧಾನ ಮಂತ್ರಿ ನರೇಂದ್ರಮೋದಿಯವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಅಂಡಮಾನ್‌ ಮತ್ತು ನಿಕೋಬಾರ್‌ ಹಲವಾರು ದ್ವೀಪಗಳಿರುವ ಪ್ರದೇಶ. ಒಂದು ದ್ವೀಪದಿಂದ ಇನ್ನೊಂದಕ್ಕೆ ಹೋಗಲು ಬಹಳ ಸಮಯ ತಗಲುತ್ತದೆ. ಈ ದ್ವೀಪಸಮೂಹದ ಜನಸಂಖ್ಯೆಯ ಅರ್ಧದಷ್ಟು ಉತ್ತರ ಅಂಡಮಾನಿನಲ್ಲಿದೆ. ಇಡೀ ದ್ವೀಪ ಪ್ರದೇಶದಲ್ಲಿ ಪೋರ್ಟ್‍ ಬ್ಲೇರ್ ನಲ್ಲಿ ಮಾತ್ರವೇ ಒಂದೇ ಒಂದು ಕೋವಿಡ್‍ ತಪಾಸಣೆ ಕೇಂದ್ರ ಮತ್ತು ಆಸ್ಪತ್ರೆ ಇರುವುದು. ಅಲ್ಲಿಂದ ಪೋರ್ಟ್‍ ಬ್ಲೇರ್ ಗೆ ಬರಲು ಹಲವು ದಿನಗಳೇ ಹಿಡಿಸುತ್ತವೆ.  ಯಾವುದೇ ಕೊವಿಡ್‍ ತಪಾಸಣೆಯ ಫಲಿತಾಂಶ ಬರಲು ಎಂಟು ದಿನಗಳಾಗುತ್ತವೆ. ಆ ವೇಳೆಗೆ ರೋಗಿಯ ಸ್ಥಿತಿ ಸಂಪೂರ್ಣ ಹದಗೆಟ್ಟಿರುತ್ತದೆ. ಅಲ್ಲದೆ ಈ ಆಸ್ಪತ್ರೆಯ 18 ಡಾಕ್ಟರುಗಳಿಗೆ ಕೊವಿಡ್‍ ಸೋಂಕು ತಗಲಿದೆ ಎಂದೂ ವರದಿಯಾಗಿದೆ. ಕೋವಿಡ್-19 ಸೋಂಕು ತೀವ್ರವಾಗಿ ಹರಡುತ್ತಿರುವ ಇಂದಿನ ಸನ್ನಿವೇಶದಲ್ಲಿ ಇದು ಇಲ್ಲಿ ಬಹಳ ಸಮಸ್ಯೆಗಳನ್ನು ಉಂಟುಮಾಡುತ್ತಿದೆ.   ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪ ಪ್ರದೇಶವು ಕೇಂದ್ರಾಡಳಿತ ಪ್ರದೇಶವಾಗಿದ್ದು,  ನೇರವಾಗಿ ಕೇಂದ್ರ ಗೃಹ ಮಂತ್ರಾಲಯದ ನಿಯಂತ್ರಣದಲ್ಲಿದೆ.  ಆದ್ದರಿಂದ ಕೋವಿಡ್-19 ಸೋಂಕು  ವೇಗವಾಗಿ ಹರಡುತ್ತಿರುವ ಸಮಯದಲ್ಲಿ ಜನಗಳಿಗೆ ತುರ್ತು ಪರಿಹಾರ ನೀಡಲು ತುರ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಯೆಚೂರಿ ಪ್ರಧಾನ ಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ಆಗ್ರಹಿಸಿದ್ದಾರೆ.

ಪ್ರಧಾನಮಂತ್ರಿಗಳು ಈ ದ್ವೀಪಸಮೂಹದಲ್ಲಿನ ತಮ್ಮ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ವೇಳೆ ಈ ದ್ವೀಪಗಳಿಗೆ ಉನ್ನತ ವೇಗದ ಬ್ರಾಡ್‍ ಬ್ಯಾಂಡ್‍ ಸಂಪರ್ಕ ನೀಡುವುದಾಗಿ ಪ್ರಕಟಿಸಿದ್ದಾರೆಂದು ವರದಿಯಾಗಿದೆ. ಇದು ಹೊಸದೇನಲ್ಲ. ಹಲವು ವರ್ಷಗಳ ಹಿಂದೆಯೇ ಭಾರತ ಸರಕಾರ ಜಾರಿಗೊಳಿಸಿರುವ ಯೋಜನೆ.  ಈಗಾಗಲೇ ಚೆನ್ನೈನಿಂದ ನೀರಿನಡಿಯಲ್ಲಿ ಕೇಬಲ್‍ಗಳನ್ನು ಹಾಕುವ ಕೆಲಸವೂ ಆರಂಭವಾಗಿದೆ ಎನ್ನಲಾಗಿದೆ. ಅದೇನೇ ಇರಲಿ, ಈ ದ್ವೀಪಗಳ ಜನಗಳ ಜೀವನ ಪರಿಸ್ಥಿತಿಗಳನ್ನು ಸುಧಾರಿಸುವ ಯಾವುದೇ ಕ್ರಮ ಸ್ವಾಗತಾರ್ಹ.  ಆದರೆ ಈಗ ತುರ್ತಾಗಿ ಕೇಂದ್ರ ಸರಕಾರ ಜನಗಳ ಬದುಕನ್ನು ಕಾಪಾಡಲು ಮತ್ತು ಪರಿಹಾರ ನೀಡಲು ತುರ್ತು ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದು ತಮ್ಮ ಪತ್ರದಲ್ಲಿ ಯೆಚೂರಿ ಒತ್ತಾಯಿಸಿದ್ದಾರೆ.

ಕೊವಿಡ್‍ ತಪಾಸಣಾ ಕೇಂದ್ರಗಳನ್ನು ಎಷ್ಟು ಸಾಧ್ಯವೋ ಅಷ್ಟು ಹೆಚ್ಚಿಸಬೇಕು, ಕೋವಿಡ್‍ ರೋಗಿಗಳ ಆರೈಕೆಗೆ ಹೆಚ್ಚು ಆರೋಗ್ಯ ಕೇಂದ್ರಗಳನ್ನು ತೆರೆಯಬೇಕು, ಮತ್ತು ಜನಗಳಿಗೆ ಪರಿಹಾರಗಳನ್ನು ಯುದ್ಧೋಪಾದಿಯಲ್ಲಿ ತಲುಪಿಸಬೇಕಾಗಿದೆ. -ಸೀತಾರಾಮ್‍ ಯೆಚುರಿ

ಈ ಕೇಂದ್ರಾಡಳಿತ ಪ್ರದೇಶದಲ್ಲಿ ಬೇರೆ ಚುನಾಯಿತ ಸಂಸ್ಥೆಗಳಿಲ್ಲ. ಆದ್ದರಿಂದ ಜನಗಳು ಕೇಂದ್ರ ಗೃಹ ಮಂತ್ರಾಲಯದತ್ತವೇ ನೋಡಬೇಕಾಗುತ್ತದೆ. ಆದ್ದರಿಂದ “ನಿಮ್ಮ ಸರಕಾರದ ನೇರ ಹತೋಟಿಗೆ ಬರುವ ಇಲ್ಲಿ ತುರ್ತಾಗಿ ಮಧ್ಯಪ್ರವೇಶಿಸಬೇಕು, ಮತ್ತು ಮೇಲೆ ಹೇಳಿದ ಅತ್ಯಗತ್ಯ ಕ್ರಮಗಳನ್ನಾದರೂ ಯುದ್ಧಸ್ತರದಲ್ಲಿ ಕೈಗೊಳ್ಳಬೇಕು” ಎಂದು ಪ್ರಧಾನ ಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ಸೀತಾರಾಮ್‍ ಯೆಚುರಿ ಮನವಿ ಮಾಡಿದ್ದಾರೆ.

ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿಯವರು ಬರೆದಿರುವ ಪತ್ರವನ್ನು ಸಿಪಿಎಂ ವೆಬ್‌ಸೈಟಿನಲ್ಲಿ ಪ್ರಕಟಿಸಲಾಗಿದೆ. https://www.cpim.org/pressbriefs/andaman-grave-health-emergency

ಅಶೋಕ್ ಗೆಹ್ಲೋಟ್ – ಸಚಿನ್ ಪೈಲಟ್ ಭೇಟಿ

–      ಒಂದು ತಿಂಗಳ ಹಿಂದೆ ಅಶೋಕ್ ಗೆಹ್ಲೋಟ್ ವಿರುದ್ಧ  ಬಂಡಾಯವೆದ್ದಿದ್ದ ಸಚಿನ್ ಪೈಲಟ್   ಜೈಪುರ: ರಾಜಸ್ಥಾನ ರಾಜಕಾರಣದಲ್ಲಿ ಗುರುವಾರ ಕ್ಷಿಪ್ರಗತಿಯಲ್ಲಿ…

ರಾಜಸ್ಥಾನ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ: ಬಿಜೆಪಿ ನಿರ್ಧಾರ

ಶುಕ್ರವಾರದಿಂದ ಆರಂಭವಾಗಲಿರುವ ಅಧಿವೇಶನ ಜೈಪುರ: ರಾಜಸ್ಥಾನದಲ್ಲಿ ಕಾಂಗ್ರೆಸ್‍ನ ಆಂತರಿಕ ಭಿನ್ನಮತ ಕೊನೆಗೊಂಡು ಆಡಳಿತ ಪುನರ್ ಸ್ಥಾಪನೆ ಆಯಿತು ಎನ್ನುವಷ್ಟರಲ್ಲಿ ಅಶೋಕ್ ಗೆಹ್ಲೋಟ್…

ಸೆಪ್ಟಂಬರ್‌ನಲ್ಲಿ ಶಾಲಾರಂಭಕ್ಕೆ ಆತುರವಿಲ್ಲ: ಸುರೇಶ್​ ಕುಮಾರ್

ಮಕ್ಕಳ ಆರೋಗ್ಯ, ಸುರಕ್ಷತೆ ಮುಖ್ಯ ಕಲಿಕೆಗೆ ಸಂಬಂಧಿಸಿದಂತೆ ವಿದ್ಯಾಗಮನ ಯೋಜನೆ ಜಾರಿ   ಮಂಡ್ಯ: ಸೆಪ್ಟಂಬರ್‌ನಿಂದ ಶಾಲೆಗಳ ಆರಂಭ ಮಾಡಲು ಆತುರವಿಲ್ಲ…

ಪತ್ರಕರ್ತರ ರಕ್ಷಣೆಗಾಗಿ ಪತ್ರಕರ್ತರಿಂದ ಪತ್ರ ಚಳವಳಿ

ಡಿಜಿ ಹಳ್ಳಿ ಗಲಭೆ ವರದಿ ವೇಳೆ ಮಾಧ್ಯಮದವರಿಗೆ ಹಲ್ಲೆ ಪ್ರಕರಣ   ಕೊಪ್ಪಳ : ಬೆಂಗಳೂರಿನ ಡಿಜೆ ಹಳ್ಳಿ, ಕೆಜಿ ಹಳ್ಳಿ…

ಯಾರು ದೇಶದ್ರೋಹಿಗಳು? ಅನಂತಕುಮಾರ್ ಹೆಗಡೆಯವರೇ ಉತ್ತರಿಸಿ..!

ಸಂಸದ ಅನಂತಕುಮಾರ್‍ ಹೆಗಡೆ ಅವರಿಗೆ ಸಿಐಟಿಯು ರಾಜ್ಯ ಕಾರ್ಯದರ್ಶಿ ಯಮುನಾ ಗಾಂವ್ಕರ್‍ ಪ್ರಶ್ನೆ ‍ಕಾರವಾರ: ಭಾರತ್‍ ಸಂಚಾರ ನಿಗಮ ಲಿಮಿಟೆಡ್‍ (ಬಿಎಸ್‍ಎನ್‍ಎಲ್‍)…

ಸರ್ಕಾರ ಉಳಿಸಿಕೊಂಡ ಜಾದೂಗಾರ ಅಶೋಕ್‌ ಗೆಹ್ಲೋಟ್‌

ಜೈಪುರ:  ಕಳೆದ ಒಂದೂವರೆ ತಿಂಗಳಿನಿಂದ ಪ್ರತಿಷ್ಠೆಗೆ ಕಾರಣದಿಂದ ರಾಷ್ಟ್ರೀಯ ಮಟ್ಟದಲ್ಲಿ ಕಾರಣವಾಗಿದ್ದ ರಾಜಾಸ್ಥಾನದಲ್ಲಿನ ಕಾಂಗ್ರೆಸ್‌ ಸರ್ಕಾರವನ್ನು ಸತತ ಹೋರಾಟಗಳ ಮೂಲಕ ಮುಖ್ಯಮಂತ್ರಿ…

ಹಿರಿಯೂರು ಬಳಿ ಬಸ್‌ಗೆ ಬೆಂಕಿ: 3 ಮಕ್ಕಳು ಸೇರಿ ಐವರು ಸಜೀವ ದಹನ

29 ಪ್ರಯಾಣಿಕರನ್ನು ಬೆಂಗಳೂರಿಗೆ ಕರೆತರುತ್ತಿದ್ದ ಬಸ್‌ ವಿಜಯಪುರ: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನಲ್ಲಿ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ಬೆಂಕಿ ಹೊತ್ತಿ…

ಪೊಲೀಸ್ ನಿಯಂತ್ರಣದಲ್ಲಿ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ

ಪ್ರವಾದಿ ಮಹಮದ್‌ರನ್ನು ಅವಹೇಳನ ಮಾಡಲಾಗಿದೆ ಎಂದು ಆರೋಪಿಸಿ ನಡೆದಿದ್ದ ಪ್ರತಿಭಟನೆ ಪ್ರತಿಭಟನೆ ವೇಳೆ ಕಿಡಿಗೇಡಿಗಳಿಂದ ಗಲಭೆ ಗಲಭೆ ನಿಯಂತ್ರಿಸಲು ಪೊಲೀಸರಿಂದ ಗೋಲಿಬಾರ್‌…

ಕೇರಳ ಭಾರಿ ಮಳೆ: ಆಲಪ್ಪುಳ ಜಿಲ್ಲೆಯಲ್ಲಿ ಕುಸಿಯಿತು 151 ವರ್ಷ ಹಳೆಯ ಚರ್ಚ್

ಇಡುಕ್ಕಿ ಭೂಕುಸಿತ: ಸಾವಿನ ಸಂಖ್ಯೆ 52ಕ್ಕೆ ಏರಿಕೆ   ಆಲಪ್ಪುಳ(ಕೇರಳ): ಜಿಲ್ಲೆಯ ಚುಂಗಮ್‌ ಕುರುವೆಲ್ಲೈ ಪದಶೇಖರಂ ಪ್ರದೇಶದಲ್ಲಿದ್ದ 151 ವರ್ಷಗಳಷ್ಟು ಹಳೆಯ…

ಸಂಸದ ಅನಂತಕುಮಾರ್ ತಮ್ಮ ಅಯೋಗ್ಯತನ ತೋರಿದ್ದಾರೆ: ಕಾಂಗ್ರೆಸ್

– ಬಿಎಸ್‍ಎನ್‍ಎಲ್ ಉದ್ಯೋಗಿಗಳನ್ನು ದೇಶದ್ರೋಹಿಗಳು ಎಂದಿದ್ದ ಸಂಸದ ಅನಂತ್ ಕುಮಾರ್   ಬೆಂಗಳೂರು: ಬಿಎಸ್‍ಎನ್‍ಎಲ್ ಉದ್ಯೋಗಿಗಳನ್ನು ದೇಶದ್ರೋಹಿಗಳು ಎಂದ ಸಂಸದ ಅನಂತ್ ಕುಮಾರ್ ಅವರು…

ಹೆಣ್ಣುಮಕ್ಕಳಿಗೆ ಪೋಷಕರ ಆಸ್ತಿಯಲ್ಲಿ ಸಮಾನ ಹಕ್ಕಿದೆ: ಸುಪ್ರೀಂಕೋರ್ಟ್

  ನವದೆಹಲಿ : ಹಿಂದೂ ಉತ್ತರಾಧಿಕಾರ 2005ರ ತಿದ್ದುಪಡಿ ಕಾಯ್ದೆಯಡಿ ಹೆಣ್ಣುಮಕ್ಕಳಿಗೆ ಪೋಷಕರ ಆಸ್ತಿಯಲ್ಲಿ ಸಮಾನ ಪಾಲು ಪಡೆಯುವ ಹಕ್ಕಿದೆ ಎಂದು ಸುಪ್ರೀಂಕೋರ್ಟ್…

ನಾರಾಯಣಾಚಾರ್ ಆಚಾರ್ಯ ಮೃತದೇಹ ಪತ್ತೆ  

ನಾಲ್ಕು ಮೃತದೇಹ ಸಿಗೋವರೆಗೂ ಕಾರ್ಯಾಚರಣೆ ನಿಲ್ಲಿಸಲ್ಲ: ಸಚಿವ ಸೋಮಣ್ಣ ಮಡಿಕೇರಿ: ಸತತ ಆರು ದಿನಗಳ ನಂತರ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದ ಕಾರ್ಯಾಚರಣೆಯಲ್ಲಿ…

ಶ್ರೀಲಂಕಾ ಚುನಾವಣೆ : ರಾಜಪಕ್ಸ ಸಹೋದರರಿಗೆ ಭಾರೀ ಬಹುಮತ

ಅಧ್ಯಕ್ಷ ಗೊಟಬಯ ರಾಜಪಕ್ಸ ಮತ್ತು ಅವರ ಸಹೋದರ ಮಹಿಂದ ರಾಜಪಕ್ಸ ರವರು ಸ್ಥಾಪಿಸಿದ ಹೊಸ ಪಕ್ಷ  ಎಸ್ ಎಲ್ ಪಿ ಪಿ…