• ಮಧ್ಯಮ ವರ್ಗದ ಸಂಖ್ಯೆಯಲ್ಲೂ ಮೂರನೇ ಒಂದು ಭಾಗದಷ್ಟು ಕುಸಿತ!


ಕೊರೋನಾ
ಸಾಂಕ್ರಾಮಿಕ ರೋಗದಿಂದಾಗಿ ಪ್ರಸ್ತುತ ಇಡೀ ವಿಶ್ವದ ಆರ್ಥಿಕತೆ ಕುಸಿತ ಕಂಡಿದೆ. ಅದರಲ್ಲೂ ಅಭಿವೃದ್ಧಿ ಶೀಲ ರಾಷ್ಟ್ರಗಳ ಕಥೆ ಹೇಳ ತೀರದಂತಾಗಿದೆ. ಲಾಕ್ಡೌನ್ ಸಂದರ್ಭದಲ್ಲಿ ಭಾಗಶಃ ಎಲ್ಲಾ ದೇಶಗಳ ಆರ್ಥಿಕತೆ ಪಾತಾಳಕ್ಕೆ ಕುಸಿದಿತ್ತು. ಇದಕ್ಕೆ ಭಾರತವೂ ಹೊರತಾಗಿರಲಿಲ್ಲ. ಪರಿಣಾಮ ಸಾಂಕ್ರಾಮಿಕ ರೋಗ ಕೊರೊನಾ ಕಾರಣದಿಂದ ಉಂಟಾದ ಆರ್ಥಿಕ ಹಿಂಜರಿತದಿಂದಾಗಿ ಭಾರತದ ಮಧ್ಯಮ ವರ್ಗವು 2020 ರಲ್ಲಿ ಮೂರನೇ ಒಂದು ಭಾಗದಷ್ಟು ಕುಗ್ಗಿದೆ. ದೇಶದ ಬಡವರ ಸಂಖ್ಯೆ ದ್ವಿಗುಣಗೊಂಡಿದೆ ಎಂದು ವಾಷಿಂಗ್ಟನ್ ಮೂಲದ ಪ್ಯೂ ರಿಸರ್ಚ್ ಸಂಸ್ಥೆಯ ವರದಿ ತಿಳಿಸಿದೆ ಎಂದು ಟೆಲಿಗ್ರಾಫ್ ವರದಿ ಮಾಡಿದೆ.

ವಾಷಿಂಗ್ಟನ್ ಮೂಲದ ಎನ್‌ಜಿಒ ಪ್ಯೂ ರಿಸರ್ಚ್ ಗುರುವಾರ ಬಿಡುಗಡೆ ಮಾಡಿರುವ ತನ್ನ ವರದಿಯಲ್ಲಿ ಕೊರೊನಾ ಸಾಂಕ್ರಾಮಿಕದಿಂದಾಗಿ ಆರ್ಥಿಕ ಹಿಂಜರಿತ ಹೆಚ್ಚಾಗಿದ್ದು ಬಡವರ ಸಂಖ್ಯೆಗೆ ದುಪ್ಪಟ್ಟುಗೊಳ್ಳಲು ಕಾರಣ ಎಂದು ಉಲ್ಲೇಖಿಸಿದೆ.

ಆರ್ಥಿಕ ಕುಸಿತದ ಪರಿಣಾಮವಾಗಿ, ಭಾರತದ ಮಧ್ಯಮ ವರ್ಗವು ಯಾವುದೇ ಸಾಂಕ್ರಾಮಿಕ ರೋಗಗಳಿಲ್ಲದಿದ್ದರೆ ಅದು ತಲುಪಬಹುದಾದ ಸಂಖ್ಯೆಯಿಂದ 32 ಮಿಲಿಯನ್ಂತಲೂ ಕಡಿಮೆಯಾಗಿದೆ (ದೈನಂದಿನ ಆದಾಯವು 725 ರಿಂದ 1,450 ರೂಪಾಯಿ ಇರುವ ವರ್ಗ). ಸಾಂಕ್ರಾಮಿಕ ರೋಗದ ಮೊದಲು, 2020 ರಲ್ಲಿ ಭಾರತದಲ್ಲಿ 99 ಮಿಲಿಯನ್ ಜನರು ಮಧ್ಯಮ ವರ್ಗಕ್ಕೆ ಸೇರಿದವರು ಎಂದು ಅಂದಾಜಿಸಲಾಗಿದೆ. ಪ್ಯೂ ವರದಿ ಪ್ರಕಾರ, ಈ ಸಂಖ್ಯೆ ಈಗ 66 ಮಿಲಿಯನ್ ಹತ್ತಿರದಲ್ಲಿದೆ ಎಂದು ಅಂದಾಜಿಸಲಾಗಿದೆ. ಕೊರೋನಾ ಪ್ರೇರಿತ ಆರ್ಥಿಕ ಹಿಂಜರಿತದಿಂದಾಗಿ ಭಾರತದಲ್ಲಿ ಬಡವರ ಸಂಖ್ಯೆ (ದೈನಂದಿನ ಆದಾಯ 145 ರೂ. ಅಥವಾ ಅದಕ್ಕಿಂತ ಕಡಿಮೆ) 75 ಮಿಲಿಯನ್‌ಗೆ ಏರಿಕೆಯಾಗಿದೆ ಎಂದು ಅಂದಾಜಿಸಲಾಗಿದೆ. ಇದು ಬಡತನದ ಜಾಗತಿಕ ಹೆಚ್ಚಳದ ಶೇ.60 ರಷ್ಟಿದೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸಕ್ಕೆ ಬೇಡಿಕೆ ಈಗ ಎಂದಿಗಿಂತ ಹೆಚ್ಚಾಗಿದೆ ಎಂದು ವರದಿ ಹೇಳುತ್ತದೆ. ಭಾರತದಲ್ಲಿ ಬಡವರ ಸಂಖ್ಯೆ 134 ಮಿಲಿಯನ್ ತಲುಪುವ ನಿರೀಕ್ಷೆಯಿದೆ. ಇದು ಆರ್ಥಿಕ ಹಿಂಜರಿತದ ಮೊದಲು ಅಂದಾಜು ಮಾಡಲಾದ 59 ದಶಲಕ್ಷಕ್ಕಿಂತ ಎರಡು ಪಟ್ಟು ಹೆಚ್ಚಾಗಿದೆ ಎಂದು ವರದಿ ತಿಳಿಸಿದೆ.

ಭಾರತ ಮತ್ತು ಚೀನಾ ಒಟ್ಟಾಗಿ ವಿಶ್ವದ ಜನಸಂಖ್ಯೆಯ ಮೂರನೇ ಒಂದು ಭಾಗವನ್ನು ಹೊಂದಿರುವುದರಿಂದ, ಪ್ಯೂ ರಿಸರ್ಚ್ ಎರಡೂ ದೇಶಗಳನ್ನು ಒಟ್ಟಿಗೆ ಅಧ್ಯಯನ ಮಾಡಿದೆ. ಭಾರತವು ಆಳವಾದ ಆರ್ಥಿಕ ಹಿಂಜರಿತದಲ್ಲಿ ಮುಳುಗಿತು. ಆದರೆ ಚೀನಾವು ಆರ್ಥಿಕ ಸಂಕುಚಿತತೆಯನ್ನು ತಡೆಯಲು ಸಾಧ್ಯವಾಯಿತು ಎಂದು ವರದಿ ವಿವರಿಸಿದೆ.

ಸಾಂಕ್ರಾಮಿಕ ರೋಗದ ಮೊದಲು, ವಿಶ್ವಬ್ಯಾಂಕ್ 2020 ರಲ್ಲಿ ಭಾರತದಲ್ಲಿ ನೈಜ ಜಿಡಿಪಿಯಲ್ಲಿ (ಶೇ. 5.8) ಮತ್ತು ಚೀನಾದಲ್ಲಿ (ಶೇ. 5.9) ಬಹುತೇಕ ಸಮಾನ ಬೆಳವಣಿಗೆಯನ್ನು ಅಂದಾಜಿಸಿತ್ತು.

ಮುಂಬೈನಲ್ಲಿ ರಾಸಾಯನಿಕ ಕಾರ್ಖಾನೆ ಸ್ಫೋಟ; ನಾಲ್ವರು ಕಾರ್ಮಿಕರ ಸಾವು

ಮಹಾರಾಷ್ಟ್ರ: ಮುಂಬೈನಲ್ಲಿ ರಾಸಾಯನಿಕ ಕಾರ್ಖಾನೆ ಭೀಕರ ಸ್ಪೋಟಗೊಂಡು ನಾಲ್ವರು ಕಾರ್ಮಿಕರು ಸಾವನಪ್ಪಿರುವ ಘಟನೆ ನಡೆದಿದೆ. ರತ್ನಾಗಿರಿ ಜಿಲ್ಲೆಯ ಕೈಗಾರಿಕಾ ಪ್ರದೇಶದಲ್ಲಿನ ಎಂಐಡಿಸಿ…

ಪಶ್ಚಿಮ ಬಂಗಾಳಕ್ಕೆ ದುರ್ಯೋಧನ, ದುಶ್ಶಾಸನ ಬೇಡ : ಬಿಜೆಪಿ ವಿರುದ್ಧ ಮಮತಾ ಕಿಡಿ

ನವ ದೆಹಲಿ: ಪಶ್ಚಿಮ ಬಂಗಾಳ ಚುನಾವಣೆ ದಿನದಿಂದ ದಿನಕ್ಕೆ ಕಾವು ಪಡೆಯುತ್ತಿದ್ದು, ಆರೋಪ, ಪ್ರತ್ಯಾರೋಪಗಳು ತಾರಕ್ಕೇರುತ್ತಿವೆ. ದೀದಿ ನಿಮ್ಮ ಆಟ ಮುಗಿಯಿತು…

ಸರ್ವೋಚ್ಛ ನ್ಯಾಯಾಲದ ತೀರ್ಪಿನ ಬಳಿಕ ಶಬರಿಮಲೆ ವಿಚಾರ ಚರ್ಚೆ: ಪಿಣರಾಯಿ ವಿಜಯನ್‌

ಪಟ್ಟಾಂಬಿ:  ಶಬರಿಮಲೆ ವಿಚಾರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಇರುವುದರಿಂದ ಅದರ ಬಗ್ಗೆ ಏನನ್ನೂ ಹೇಳಲಾಗುವುದಿಲ್ಲ. ನಮ್ಮ ನಿಲುವು ಸ್ಪಷ್ಟವಾಗಿದೆ. ತೀರ್ಪು ಬಂದ ನಂತರ…

ಟಿಆರ್‌ಪಿ ಪ್ರಕರಣ: ರೂ.32 ಕೋಟಿ ಅಕ್ರಮ ಸಂಪಾದನೆ

ನವದೆಹಲಿ:  ಟಿಆರ್‌ಪಿ ಹಗರಣದ ಬಗ್ಗೆ ಮನಿ ಲಾಂಡರಿಂಗ್ ತನಿಖೆ ಕೈಗೊಂಡಿದ್ದು, ಮಹಾರಾಷ್ಟ್ರ ಮೂಲದ ಕೆಲವು ಟಿವಿ ಚಾನೆಲ್‌ಗಳು ಬಳಿ ಇದ್ದ ಸುಮಾರು…

ಪಶ್ಚಿಮ ಬಂಗಾಳ ಚುನಾವಣೆ 2021: ಬಿಜೆಪಿ ಸ್ಪರ್ಧಿಸಲು ಇಬ್ಬರು ನಾಯಕರ ನಿರಾಕರಣೆ

ಕೋಲ್ಕತಾ :  ಪಶ್ಚಿಮ ಬಂಗಾಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಗುರುವಾರ ಸಂಜೆ ಬಿಜೆಪಿ 148 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದರೂ ಇಬ್ಬರು ಅಭ್ಯರ್ಥಿಗಳು…

ಜಿಪಿಎಸ್‌ ಮೂಲಕ ಟೋಲ್‌ ಶುಲ್ಕ ಸಂಗ್ರಹ: ಗಡ್ಕರಿ

ನವದೆಹಲಿ: ಈಗ ಇರುವ ಟೋಲ್ ಬೂತ್‌ಗಳನ್ನು ತೆಗೆದುಹಾಕಲಾಗುವುದು ಮತ್ತು 1 ವರ್ಷದೊಳಗೆ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹವನ್ನು ಜಾರಿಗೊಳಿಸಲಾಗುವುದು ಎಂದು ರಸ್ತೆ…

ಕಳೆದ 24 ಗಂಟೆಗಳಲ್ಲಿ 35,871 ಹೊಸ ಕೊರೊನಾ ವೈರಸ್ ಪ್ರಕರಣ ಪತ್ತೆ

ದೆಹಲಿ: ಕಳೆದ 24 ಗಂಟೆಗಳಲ್ಲಿ 35,871 ಹೊಸ ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ , ಡಿಸೆಂಬರ್ ಆರಂಭದಿಂದೀಚೆಗೆ ಅತಿ ಹೆಚ್ಚು ದೈನಂದಿನ…

ಟ್ರೋಲಿಗೆ ಸಿಲುಕಿ ನಲುಗಿದ ಮೋದಿ ಕುರಿತ ತಮಿಳು ಹಾಡು

ತಮಿಳುನಾಡು ಬಿಜೆಪಿ ತಯಾರಿಸಿರುವ ಹಾಡು ಸರಾಸರಿ ಶೇ. 15 ರಂತೆ ಹೆಚ್ಚುತ್ತಿರುವ ಡಿಸ್ ಲೈಕ್ ಗಳು ಚೆನ್ನೈ: ತಮಿಳುನಾಡಿನ ಮಟ್ಟಿಗೆ ಚುನಾವಣೆ…

ಮಲಗುಂಡಿಯಲ್ಲಿ ಮುಳುಗಿ ಅಪ್ರಾಪ್ತ ಸಹೋದರರು ಸೇರಿ ಐವರ ಸಾವು

ಉತ್ತರಪ್ರದೇಶ: ಐವರು ಮಲದ ಗುಂಡಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಆಗ್ರಾದ ಫತೇಹಾಬಾದ್‌ನಲ್ಲಿ ಮಂಗಳವಾರ ನಡೆದಿದೆ. ಮೂವರು ಅಪ್ರ್ರಾಪ್ತ ಸಹೋದರರು ಹಾಗೂ ನೆರೆಮನೆಯ…

ಪಶ್ಚಿಮ ಬಂಗಾಲ ಬಿಜೆಪಿ ಪಟ್ಟಿ ಪ್ರಕಟವಾಗುತ್ತಿರುವಂತೆ ಆಂತರಿಕ ಆಕ್ರೋಶಗಳ ಭುಗಿಲು

ಪಶ್ಚಿಮ ಬಂಗಾಲ : ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಗಳನ್ನು ಪ್ರಕಟಿಸುತ್ತಿರುವಂತೆ ಆ ಪಕ್ಷದೊಳಗೆ ಎದ್ದಿರುವ ಪ್ರತಿಭಟನೆಗಳು ಮೂರನೆ ದಿನವೂ…

ಮೋದಿ ಪ್ರಧಾನ ಸಲಹೆಗಾರ ಪಿ.ಕೆ.ಸಿನ್ಹಾ ರಾಜಿನಾಮೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಸಲಹೆಗಾರ ಪಿಕೆ ಸಿನ್ಹಾ ಅವರು ತಮ್ಮ ಸ್ಥಾನಕ್ಕೆ ಮಂಗಳವಾರ ರಾಜಿನಾಮೆ ನೀಡಿದ್ದಾರೆ ಎಂದು…

ಲೋಕಸಭೆ, ವಿಧಾನಸಭೆಗೆ ಉಪಚುನಾವಣೆ ಘೋಷಣೆ: ಏಪ್ರಿಲ್‌ 17ರಂದು ಮತದಾನ

ನವದೆಹಲಿ: ರಾಜ್ಯದಲ್ಲಿ ತೆರವಾಗಿದ್ದ ಎರಡು ವಿಧಾನಸಭೆ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣಾ ದಿನಾಂಕ ಘೋಷಣೆಯಾಗಿದೆ. (ಸಿಂಧಗಿ ವಿಧಾನಸಭೆಗೆ ಉಪಚುನಾವಣೆ ಘೋಷಣೆಯಾಗಿಲ್ಲ).…

ಪಂಚರಾಜ್ಯ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿ ಇಲ್ಲ – ಮಾಯಾವತಿ

ಲಖನೌ: ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್ ಪಿ ಸ್ಪರ್ಧಿಸುವುದಾಗಿ ಪಕ್ಷದ ವರಿಷ್ಠೆ ಮಾಯಾವತಿ ತಿಳಿಸಿದ್ದಾರೆ.…

ಜೆಎನ್‌ಯು ಪ್ರಕರಣ : 7 ಆರೋಪಿಗಳಿಗೆ ಜಾಮೀನು

ನವದೆಹಲಿ: ಜವಾಹರಲಾಲ್‌ ನೆಹರು ವಿಶ್ವವಿದ್ಯಾಲಯ(ಜೆಎನ್‌ಯು)ದಲ್ಲಿ 2016ರಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ʻದೇಶದ್ರೋಹʼ ಪ್ರಕರಣ ದಾಖಲಿಸಲಾಗಿತ್ತು. ಇಂದು ಏಳು ಜನ ಆರೋಪಿಗಳಿಗೆ ದೆಹಲಿಯ…

ಮಕ್ಕಳ್ ನೀಧಿ ಮಯ್ಯಂ ಪಕ್ಷದ ಮುಖ್ಯಸ್ಥ ಕಮಲ್ ಹಾಸನ್ ಮೇಲೆ ದಾಳಿ

ಚೆನ್ನೈ: ತಮಿಳು ನಾಡು ವಿಧಾನಸಭಾ ಚುನಾವಣೆಯ ಪ್ರಚಾರ ಮುಗಿಸಿ ಹೋಟೆಲ್ ಗೆ ತೆರಳುತ್ತಿದ್ದ ನಟ, ರಾಜಕಾರಣಿ ಕಮಲ್ ಹಾಸನ್ ಮೇಲೆ ದಾಳಿ…

ನಾಲ್ಕು ಮಹಾನಗರದ ವಿಮಾನ ನಿಲ್ದಾಣಗಳು ಖಾಸಗಿಯವರ ಪಾಲು

ದೇಶದ ರಾಜಧಾನಿ ದೆಹಲಿ, ಸಿಲಿಕಾನ್‌ ಸಿಟಿ ಬೆಂಗಳೂರು, ವಾಣಿಜ್ಯ ನಗರ ಮುಂಬೈ, ಮುತ್ತಿನ ನಗರಿ ಹೈದರಾಬಾದ್‌ ವಿಮಾನ ನಿಲ್ದಾಣಗಳು ಸಂಪೂರ್ಣವಾಗಿ ಖಾಸಗಿಯವರ…

ರಾಷ್ಟ್ರೀಕೃತ ಬ್ಯಾಂಕುಗಳ ಖಾಸಗೀಕರಣ ವಿರೋಧಿಸಿ ಬ್ಯಾಂಕ್‌ ನೌಕರರ ಪ್ರತಿಭಟನೆ

ನವದೆಹಲಿ/ಬೆಂಗಳೂರು: ರಾಷ್ಟ್ರೀಕೃತ ಬ್ಯಾಂಕುಗಳ ಖಾಸಗೀಕರಣ ವಿರೋಧಿಸಿ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್(ಯುಎಫ್ ಬಿಯು) ನಡಿ ಬ್ಯಾಂಕ್ ನೌಕರರು ದೇಶಾದ್ಯಂತ ಮುಷ್ಕರಕ್ಕೆ…

ಆಂದ್ರ ಸ್ಥಳೀಯ ಸಂಸ್ಥೆಗಳ ಚುನಾವಣೆ, ವೈಎಸ್ಆರ್ ಕಾಂಗ್ರೆಸ್ ಭರ್ಜರಿ ಗೆಲುವು

ಅಮರಾವತಿ: ಆಂಧ್ರಪ್ರದೇಶದ ಸ್ಥಳೀಯ ಸಂಸ್ಥೆಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯ ಫ‌ಲಿತಾಂಶ ಭಾನುವಾರ ಹೊರಬಿದ್ದಿದ್ದು ಆಡಳಿತಾರೂಢ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷ ಪ್ರಚಂಡ ಜಯಭೇರಿ…

4 ವರ್ಷಗಳಲ್ಲಿ 405 ಶಾಸಕರ ಪಕ್ಷಾಂತರ : 45% ಬಿಜೆಪಿಗೆ

2016 ರಿಂದ 2020 ರ ನಡುವೆ 405 ಎಂ.ಎಲ್‍.ಎ. ಗಳು ಮತ್ತು  38 ಎಂ.ಪಿ.ಗಳು ಪಕ್ಷಾಂತರ ಮಾಡಿದ್ದಾರೆ. ಇವರಲ್ಲಿ 189 ಶಾಸಕರು,…