ನ್ಯಾಯಾಲಯಕ್ಕೆ ಹಾಜರಾದ ಸಂತ್ರಸ್ತ ಯುವತಿ

ಬೆಂಗಳೂರು: ಸಿ.ಡಿ. ಪ್ರಕರಣ ಸಂತ್ರಸ್ತ ಯುವತಿ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ ಎನ್ನಲಾಗಿದ್ದು, ಹೇಳಿಕೆ ದಾಖಲು ಪ್ರಕ್ರಿಯೆ ಆರಂಭವಾಗಿದೆ.

ಒಂದೇ ಕಾರಿನಲ್ಲೇ ಯುವತಿಯನ್ನು ನ್ಯಾಯಾಲಯ ಬಳಿ‌ ಕರೆತರಲಾಗಿದ್ದು, ನಂತರ ನಡೆದುಕೊಂಡು ಯುವತಿ‌ ನ್ಯಾಯಾಲಯದೊಳಗೆ ಹೋಗಿದ್ದಾರೆ. ಸದ್ಯ ಯುವತಿ, ನ್ಯಾಯಾಲಯದೊಳಗೆ ಇದ್ದಾರೆ.

ಈ ಬಗ್ಗೆ ಮಾತನಾಡಿದ ಯುವತಿ‌ ಪರ‌ ವಕೀಲ ಕೆ.ಎನ್. ಜಗದೀಶ್‌ಕುಮಾರ್, ‘ಯುವತಿ ನ್ಯಾಯಾಲಯದಲ್ಲಿ‌ ಇದ್ದಾರೆ. 3ಕ್ಕೆ ಕಲಾಪ‌ ಆರಂಭವಾಗಿದ್ದು, ನ್ಯಾಯಾಧೀಶರೇ ಹೇಳಿಕೆ ದಾಖಲು ಮಾಡಿಕೊಳ್ಳಲಿದ್ದಾರೆ’ ಸಿಆರ್‌ಪಿಸಿ 164ರ ಅಡಿ ಹೇಳಿಕೆ ದಾಖಲಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.  ‘ಯುವತಿ‌ ಮಾನಸಿಕವಾಗಿ ಆರೋಗ್ಯವಾಗಿದ್ದಾರೆ. ತಮಗಾದ ಅನ್ಯಾಯವನ್ನು ನ್ಯಾಯಾಲಯದ ಮುಂದೆ ಹೇಳಲಿದ್ದಾರೆ’ ಎಂದೂ ತಿಳಿಸಿದರು.

ಎಸ್ಐಟಿ ಮುಖ್ಯಸ್ಥ ಸೌಮೇಂದು‌ ಮುಖರ್ಜಿ, ಜಂಟಿ‌ ಕಮಿಷನರ್ ಸಂದೀಪ್ ಪಾಟೀಲ ಹಾಗೂ ಹಲವರೂ ನ್ಯಾಯಾಲಯಕ್ಕೆ‌ ಬಂದಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *