ಚಾಮರಾಜನಗರ | ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳಿಗೆ ಕಂಪ್ಯೂಟರ್ ಶಿಕ್ಷಣ ಆರಂಭ

ಚಾಮರಾಜನಗರ : ಕೈದಿಗಳಿಗೂ ಕಾಲ ಬದಲಾದಂತೆ ತಾವು ಕೂಡ ಕೆಟ್ಟ ದಾರಿಯನ್ನು ಮರೆತು ಜೀವನದಲ್ಲಿ ಮತ್ತೆ ಏನಾದರೂ ಸಾಧನೆ ಮಾಡಬೇಕೆಂಬ ಆಸೆಯಿರುತ್ತದೆ. ಅದರಂತೆಯೇ ಇದೀಗ ಕಂಪ್ಯೂಟರ್ ಕಲಿಕೆ‌ ಮೂಲಕ ವಿಚಾರಣಾ ಕೈದಿಗಳು, ಕಾರಗೃಹ ಬಂಧಿಗಳು ಭವಿಷ್ಯದಲ್ಲಿ ಬದುಕು ಬದಲಿಸಿಕೊಳ್ಳಬೇಕು ಎಂದು ಚಾಮರಾಜನಗರ ಜಿಲ್ಲಾ ಕಾರಾಗೃಹದಲ್ಲಿ ಕಂಪ್ಯೂಟರ್ ಶಿಕ್ಷಣ ಆರಂಭ ಮಾಡಲಾಗಿದೆ. ಜಿಲ್ಲಾ 

ರಾಜ್ಯದಲ್ಲೇ ಮೊದಲು ಎನ್ನಬಹುದಾದ ಕಾರಾಗೃಹ ಬಂಧಿಗಳಿಗೆ ಕಂಪ್ಯೂಟರ್ ಶಿಕ್ಷಣ ತರಬೇತಿಯನ್ನು ನೀಡುವ ವಿನೂತನ ಕಾರ್ಯಕ್ರಮ ಚಾಮರಾಜನಗರ ಕಾರಾಗೃಹದಲ್ಲಿ ಆರಂಭಗೊಂಡಿದೆ. ಈ ವಿಶೇಷ ಯೋಜನೆ ಇನ್‍ಫೋಸಿಸ್ ರೋಟರಿ ಪಂಚಶೀಲ ಸಹಯೋಗದಿಂದ ಆರಂಭಗೊಂಡಿದೆ. ಕಾರಾಗೃಹ ಬಂಧಿಗಳು ಕಾರಾಗೃಹದಲ್ಲೇ ಕಂಪ್ಯೂಟರ್ ತರಬೇತಿ ಪಡೆಯಲು ಸುಸಜ್ಜಿತ ಕೊಠಡಿಯಲ್ಲಿ 10 ಕಂಪ್ಯೂಟರ್ ಮತ್ತು ಪ್ರಿಂಟರ್‌ಗಳನ್ನು ಇನ್ಫೋಸಿಸ್ ನೀಡಿದೆ. ಜೊತೆಗೆ ತರಬೇತಿದಾರರನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ:ಚಾಮರಾಜನಗರ ಆಸ್ಪತ್ರೆ ದುರಂತ ತನಿಖೆಗೆ ನಿವೃತ್ತ ನ್ಯಾ. ಬಿ.ಎ.ಪಾಟೀಲ್ ನೇಮಕ

ಕಂಪ್ಯೂಟರ್ ಶಿಕ್ಷಣದ ಜೊತೆಗೆ ಕಲಿಕಾರ್ಥಿಗಳಿಗೆ ಸುಲಭವಾಗಿ ಕಂಪ್ಯೂಟರ್ ಅರ್ಥೈಸುವ ಕನ್ನಡ ಕಿರುಪುಸ್ತಕಗಳನ್ನು ಇಡಲಾಗಿದೆ. ಕಂಪ್ಯೂಟರ್ ಕಲಿತ ಬಳಿಕ ಉದ್ಯೋಗ ಪಡೆದು ಬದುಕು ಬದಲಿಸಿಕೊಳ್ಳಲಿ ಎಂಬ ಮಾದರಿ ಉದ್ದೇಶ ಈ ಯೋಜನೆ ಹಿಂದಿದ್ದು, ನವೆಂಬರ್-15 ಬುಧವಾರ ಸಂಜೆ ಈ ಕಲಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.

ಸ್ವಂತ ಶಕ್ತಿ ಮೇಲೆ ಜೀವನ ರೂಪಿಸಿಕೊಳ್ಳಿ

ಜಿಲ್ಲಾಧಿಕಾರಿ ಶಿಲ್ಪಾನಾಗ್ ಈ ಸಂಬಂಧ ಮಾತನಾಡಿ, ಕೆಲವು ದಿನಗಳ ಹಿಂದೆ ಸಾಕ್ಷರತಾ ಕಾರ್ಯಕ್ರಮಕ್ಕಾಗಿ ಕಾರಾಗೃಹಕ್ಕೆ ಬಂದ ವೇಳೆ ಕಾರಾಗೃಹ ಬಂಧಿಗಳಿಗೂ ಕಂಪ್ಯೂಟರ್ ಶಿಕ್ಷಣ ನೀಡಬೇಕೆಂಬ ಆಲೋಚನೆ ಬಂತು. ಅಂದೇ ಕಾರ್ಯಕ್ರಮದಲ್ಲಿ ಕಂಪ್ಯೂಟರ್ ಶಿಕ್ಷಣ ತರಬೇತಿಗೆ ಕ್ರಮವಹಿಸುವುದಾಗಿ ಭರವಸೆ ನೀಡಿದ್ದೆ. ಇನ್‍ಫೋಸಿಸ್ ಸೇರಿದಂತೆ ಇತರೆ ಸಂಸ್ಥೆಗಳು ನಮ್ಮ ಮನವಿಗೆ ಸ್ಪಂಧಿಸಿ ಇಲ್ಲಿನ ಬಂಧಿಗಳಿಗೆ ಅತ್ಯಾಧುನಿಕ 10 ಕಂಪ್ಯೂಟರ್, ಪ್ರಿಂಟರ್‌ಗಳನ್ನು ನೀಡಿ ತರಬೇತಿಗೆ ಅಗತ್ಯ ಸಿಬ್ಬಂದಿ ನಿಯೋಜಿಸಿದೆ.

ಕಾರಾಗೃಹದಲ್ಲಿರುವ ಸಮಯ ಸದುಪಯೋಗವಾಗಲಿ. ಇಲ್ಲಿಂದ ಹೊರಹೋದ ಮೇಲೆ ಸ್ವಂತ ಶಕ್ತಿಯ ಮೇಲೆ ಜೀವನ ರೂಪಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ಕಂಪ್ಯೂಟರ್ ತರಬೇತಿಗೆ ವ್ಯವಸ್ಥೆ ಮಾಡಲಾಗಿದೆ. ಹೆಚ್ಚು ಓದಿಲ್ಲದೆ ಇರುವವರಿಗೂ ಸಹ ಕಂಪ್ಯೂಟರ್ ಕಲಿಯಲು ಅವಕಾಶವಿದೆ. ಇಲ್ಲಿ ಅನೇಕ ಬಗೆಯ ಕಂಪ್ಯೂಟರ್ ತರಬೇತಿ ನೀಡಲಾಗುತ್ತದೆ. ಈಗಿರುವ ಗ್ರಂಥಾಲಯದ ಜೊತೆ ಇ ಲೈಬ್ರರಿ ಸಹ ಆರಂಭಿಸಿದರೆ ಬಂಧಿಗಳಿಗೆ ಅವರವರ ಭಾಷೆಯಲ್ಲಿಯೇ ಓದಲು ಅನುಕೂಲ ಮಾಡಿಕೊಡಬಹುದು ಎಂದು ತಿಳಿಸಿದರು.

ವಿಡಿಯೋ ನೋಡಿ:ರಾಜ್ಯ ಮಟ್ಟದ ದಲಿತರ ಬೃಹತ್ ಶೃಂಗಸಭೆ

Donate Janashakthi Media

Leave a Reply

Your email address will not be published. Required fields are marked *