2027ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವ ಸಾಧ್ಯತೆ ಕಡಿಮೆ: ಬಿಜೆಪಿ ಶಾಸಕ ರಮೇಶ್

లಖನೌ: ಬಿಜೆಪಿ ಪಕ್ಷದ ಶಾಸಕ ಮತ್ತು ಹಿರಿಯ ನಾಯಕ ರಮೇಶ್ ಚಂದ್ರ ಮಿಶ್ರಾ, ಉತ್ತರ ಪ್ರದೇಶದಲ್ಲಿ 2027ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವ ಸಾಧ್ಯತೆ ಕಡಿಮೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿಯು ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಅತ್ಯಂತ ಕಳಪೆ ಪ್ರದರ್ಶನ ತೋರಿದ ಬೆನ್ನಲ್ಲೇ ಈ ಹೇಳಿಕೆ ನೀಡಿದ್ದಾರೆ.

‘ರಾಜ್ಯದಲ್ಲಿ ಪಕ್ಷದ ಸ್ಥಿತಿ ಕೆಟ್ಟದಾಗಿದೆ. ಕೇಂದ್ರ ನಾಯಕತ್ವವು ಶೀಘ್ರವೇ ಮಧ್ಯಪುವೇಶಿಸಬೇಕು. ಇಲ್ಲದಿದ್ದಲ್ಲಿ ಪರಿಸ್ಥಿತಿ ಇನ್ನೂ ಹದಗೆಡುತ್ತದೆ’ ಎಂದು ಬದಲಾಪುರ ಕ್ಷೇತ್ರದ ಶಾಸಕ ಮಿಶ್ರಾ ವಿಡಿಯೊ ಹೇಳಿಕೆಯಲ್ಲಿ ಹೇಳಿದ್ದಾರೆ. ವಿಧಾನಸಭಾ

ಇದನ್ನೂ ಓದಿ: ವಾಲ್ಮೀಕಿ ನಿಗಮ ಆಕ್ರಮ ಪ್ರಕರಣ;ನಾಗೇಂದ್ರ ಬಂಧನ ನಂತರ ಬಸವನಗೌಡ ದದ್ದಲ್ ನಾಪತ್ತೆ

‘ತಕ್ಷಣವೇ ಪಕ್ಷದ ಪುನರುಜೀವನಕ್ಕೆ ಅಗತ್ಯ ಕ್ರಮ ಕೈಗೊಳ್ಳದಿದ್ದರೆ 2027ರ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರುವುದು ಅಸಾಧ್ಯ’ ಎಂದು ಅಭಿಪ್ರಾಯಪಟ್ಟಿದ್ದಾರೆ. ಮಿಶ್ರಾ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಹಂಚಿಕೆಯಾಗುತ್ತಿದೆ. ವಿಧಾನಸಭಾ

‘ಸಮಾಜವಾದಿ ಪಕ್ಷವು ಹಿಂದುಳಿದ ವರ್ಗ, ದಲಿತರು ಮತ್ತು ಅಲ್ಪಸಂಖ್ಯಾತರತ್ತ ಗಮನ ಹರಿಸಿತು. ಇದು ಮತದಾರರಲ್ಲಿ ಗೊಂದಲ ಮೂಡಿಸಿತು. ಪರಿಣಾಮವಾಗಿ ಚುನಾವಣೆಯಲ್ಲಿ ಪಕ್ಷಕ್ಕ ಹಿನ್ನಡೆಯಾಯಿತು’ ಎಂದು ಹೇಳಿದ್ದಾರೆ.

‘ಕೇಂದ್ರ ನಾಯಕತ್ವವು ಶೀಘ್ರವೇ ಮಧ್ಯಪ್ರವೇಶಿಸಿ ಅಗತ್ಯ ಕ್ರಮ ಕೈಗೊಂಡಲ್ಲಿ, ಪಕ್ಷದ ಕಾರ್ಯಕರ್ತರು ಮತ್ತು ನಾಯಕರು ತಮ್ಮ ಕೈಲಾಗುವ ಪ್ರಯತ್ನ ಮಾಡಿದಲ್ಲಿ ಪರಿಸ್ಥಿತಿಯನ್ನು ಮತ್ತೆ ಸರಿದಾರಿಗೆ ತರಬಹುದು’ ಎಂದಿದ್ದಾರೆ.

ಲೋಕಸಭಾ ಚುನಾವಣೆ ಫಲಿತಾಂಶ ಮತ್ತು ಸಾಂಖ್ಯಿಕ ಬದಲಾವಣೆ ಉದ್ದೇಶದಿಂದ ರಾಜ್ಯ ಬಿಜೆಪಿ ಘಟಕವು ಭಾನುವಾರ ಸಭೆ ಕರೆದಿತ್ತು. ಇದಕ್ಕೂ ಮೊದಲೇ ಮಿಶ್ರಾ ಅವರ ವಿಡಿಯೊ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 80 ಕ್ಷೇತ್ರಗಳ ಪೈಕಿ 36 ಸ್ಥಾನಗಳಲ್ಲಿ ಮಾತ್ರ ಬಿಜೆಪಿ ಮತ್ತು ಮಿತ್ರ ಪಕ್ಷಗಳು ಗೆಲುವು ಸಾಧಿಸಿವೆ. 2019ರ ಚುನಾವಣೆಯಲ್ಲಿ ಬಿಜೆಪಿ ಮತ್ತು ಮಿತ್ರ ಪಕ್ಷಗಳು 64 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ್ದವು. ಈ ಬಾರಿ ವಿರೋಧ ಪಕ್ಷಗಳ ಒಕ್ಕೂಟ ‘ಇಂಡಿಯಾ’ 43 ಕ್ಷೇತ್ರಗಳಲ್ಲಿ ಮತ್ತು ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಗೆ ಹಿನ್ನಡೆ ಆಗಿದೆ.

ಇದನ್ನೂ ನೋಡಿ: ಕಳೆದ ಹತ್ತು ವರ್ಷಗಳಲ್ಲಿ ಹಂಚಿಕೆಯಾದ 2.5 ಲಕ್ಷ ಕೋಟಿ ಎಸ್ ಸಿಎಸ್ ಪಿ/ ಟಿಎಸ್ ಪಿ ಮೊತ್ತದ ಲೆಕ್ಕ ಕೊಡಬೇಕಲ್ಲವೇ?

Donate Janashakthi Media

Leave a Reply

Your email address will not be published. Required fields are marked *