ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಬದಲಾವಣೆ: ಬಸವರಾಜ ಬೊಮ್ಮಾಯಿ

ದಗ : ರಾತ್ರೋರಾತ್ರಿ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಬದಲಾವಣೆ ಸನ್ನಿಹಿತವಾಗಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ರಾತ್ರೋರಾತ್ರಿ ಎರಡು ಸಿಎಂಗಳು ಬದಲಾದ ಇತಿಹಾಸವಿದೆ. ಈಗ ಕೆಲವರು ಸಿಎಂ ಕುರ್ಚಿಗೆ ಆಸೆ ತೋರಿಸುತ್ತಿರುವುದನ್ನು ನೋಡಿದ್ರೆ ಮತ್ತೊಂದು ರಾತ್ರೋರಾತ್ರಿ ಸಿಎಂ ಬದಲಾವಣೆ ಆಗುವ ಸಾಧ್ಯತೆ ಇದೆ ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಿಳಿಸಿದ್ದಾರೆ.

ಇದನ್ನೂ ಓದಿ: ರೇಣುಕಾ ಸ್ವಾಮಿ ಕೊಲೆ ಪ್ರಕರಣ; ಇನ್ನೆರಡು ದಿನಗಳಲ್ಲಿ ಚಾರ್ಜ್ ಶೀಟ್ ಸಲ್ಲಿಕೆ

ವೀರೇಂದ್ರ ಪಾಟೀಲ್ ಮುಖ್ಯಮಂತ್ರಿ ಆಗಿದ್ದರೂ ರಾತ್ರೋ ರಾತ್ರಿ ಎಲ್ಲ ಶಾಸಕರು ಬದಲಾದರು. ಬಳಿಕ ಆರ್. ಗುಂಡೂರಾವ್ ಸಿಎಂ ಆದರು. ಅರಸು ಎರಡನೇ ಬಾರಿ ಸಿಎಂ ಆಗಿದ್ದರು. ಎಸ್. ಬಂಗಾರಪ್ಪ ಅವರಿಗೆ 183 ಶಾಸಕರ ಬಲವಿತ್ತು. ಆಗಲೂ ಸಿಎಂ ಬದಲಾದರು ಹೀಗೆ ರಾಜಕಾರಣ ನಡಿಯುತ್ತಾ ಇರುತ್ತದೆ ಎಂದರು.

ಇದನ್ನೂ ನೋಡಿ: ಬಾಕಿ ವೇತನ ಕೇಳಿದ ಹಾಸ್ಟೆಲ್ ನೌಕರರ ಬಂಧನ Janashakthi Media

 

Donate Janashakthi Media

Leave a Reply

Your email address will not be published. Required fields are marked *