ಅಣಬೆ ತಿಂದು ಅಸ್ವಸ್ಥರಾದ ಮಕ್ಕಳು

ಶಿವಮೊಗ್ಗ: ಅಣಬೆ ಸಾರು ಸೇವಿಸಿದ ಐವರು ಮಕ್ಕಳು ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಿಡದಹಳ್ಳಿಯಲ್ಲಿ ಕಳೆದ ಸೋಮವಾರ ನಡೆದಿದೆ.

ಇಲ್ಲಿನ ಕುಟುಂಬವೊಂದು ಸ್ಥಳೀಯವಾಗಿ ಬೆಳೆದಿದ್ದ ಅಣಬೆಗಳನ್ನು ಕಿತ್ತುತಂದು ಸಾರು ಮಾಡಿತ್ತು. ಈ ಸಾರನ್ನು ಮಧ್ಯಾಹ್ನದ ಊಟದೊಂದಿಗೆ ಸೇವಿಸಿದ  ಐವರು ಮಕ್ಕಳು ವಾಂತಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ತಂದೆ ಹಾಗೂ ನನ್ನ ಮಾತಿಗೆ ಬೆಲೆಕೊಟ್ಟು ಪ್ರಜ್ವಲ್‌ ಬರುತ್ತಿದ್ದಾನೆ: ಹೆಚ್‌ಡಿಕೆ

ಅಸ್ವಸ್ಥರಾದ ಮಕ್ಕಳನ್ನು ಶಿಕಾರಿಪುರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಮಕ್ಕಳನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ

ರವಾನೆ ಮಾಡಲಾಗಿತ್ತು. ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ವೈದ್ಯರು ಇವತ್ತು ಡಿಸ್ಚಾರ್ಜ್ ಮಾಡುವುದಾಗಿ ತಿಳಿಸಿದ್ದಾರೆ.

ಅಣಬೆ ಸಾರು  ಸೇವಿಸಿದ ಮನೆಯ ಸದಸ್ಯರಿಗೆ ಯಾವುದೇ ಸಮಸ್ಯೆಯಾಗಿಲ್ಲ. ಮಕ್ಕಳಿಗಷ್ಟೆ ವ್ಯತ್ಯಾಸವಾಗಿದೆ.  ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿಲ್ಲಾ ಆರೋಗ್ಯಾಧಿಕಾರಿ ನಟರಾಜ್ ಪ್ರಸ್ತುತ ಎಲ್ಲಾ ಮಕ್ಕಳು ಆರೋಗ್ಯದಿಂದ ಇದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ನೋಡಿ: “ಸಂವಿಧಾನ ಭಾರತ- ಧರ್ಮಕಾರಣ”ಎಂಬ ಆಶಯವಾಕ್ಯದೊಂದಿಗೆ ಮೇ ಸಹಿತ್ಯ ಮೇಳಕ್ಕೆ ಚಾಲನೆ Janashakthi Media

Donate Janashakthi Media

Leave a Reply

Your email address will not be published. Required fields are marked *