ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ; 11ಮಂದಿ ಸಾವು, 50ಕ್ಕೂ ಹೆಚ್ಚು ಮಂದಿಗೆ ಗಾಯ

ರಾಯಲ್‌ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಜಯೋತ್ಸವದ ವೀಕ್ಷಣೆಗೆ ಬಂದಿದ್ದ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಲ್ಲಿ ಹನ್ನೊಂದು ಮಂದಿ ಮೃತಪಟ್ಟಿದ್ದಾರೆ. ಐವತ್ತಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, ಅವರನ್ನು ಬೌರಿಂಗ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಭಾರಿ ಸಂಖ್ಯೆಯಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳು ಜಮಾಯಿಸಿದ್ದು, ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಮಧ್ಯಾಹ್ನದ 12ರಿಂದಲೇ ವಿಧಾನಸೌಧ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದತ್ತ ಆರ್‌ಸಿಬಿ ಅಭಿಮಾನಿಗಳು ಬರಲು ಆರಂಭಿಸಿದ್ದರು. ಇದರಿಂದ ಗೊಂದಲ ವಾತಾವರಣ ನಿರ್ಮಾಣವಾಗಿದೆ. ಪೋಷಕರ ಜತೆಗೆ ಪುಟ್ಟಮಕ್ಕಳು ಕ್ರೀಡಾಂಗಣದತ್ತ ಬಂದಿದ್ದು, ತೊಂದರೆಗೆ ಸಿಲುಕಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಿಜಯೋತ್ಸವವನ್ನು ದಿಢೀರ್ ನಿರ್ಧಾರ ಮಾಡಿದ್ದರಿಂದ ಭದ್ರತೆಗೆ ಸಿಬ್ಬಂದಿ ನಿಯೋಜನೆಯಲ್ಲಿ ಸಮಸ್ಯೆ ಆಗಿದೆ. ದಿಢೀರ್‌ ಆಗಿ ದೊಡ್ಡಸಂಖ್ಯೆಯಲ್ಲಿ ಅಭಿಮಾನಿಗಳು ಬಂದಿದ್ದರಿಂದ ನಿಯಂತ್ರಣವು ಸಾಧ್ಯವಾಗದೇ ಪೊಲೀಸರು ಪರದಾಡಿದರು. ಕಡಿಮೆ ಸಮಸ್ಯೆಯಿದ್ದ ಕಾರಣಕ್ಕೆ ಬೇರೆ ಬೇರೆ ಭಾಗದ ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜನೆ ಮಾಡುವುದು ಸಾಧ್ಯವಾಗಲಿಲ್ಲ. ಇನ್ನು ನಿಯೋಜನೆ ಮಾಡಿದ್ದ ಸಿಬ್ಬಂದಿಯೂ ತಮ್ಮ ಸ್ಥಳಕ್ಕೆ ತಲುಪುವುದು ಕಷ್ಟವಾಗಿತ್ತು ಎಂದು ವರದಿಯಾಗಿದೆ.

 

Donate Janashakthi Media

Leave a Reply

Your email address will not be published. Required fields are marked *