ಬಾಲಕಿ ಹತ್ಯೆಗೈದ ಆರೋಪಿಯ ‘ಎನ್ ಕೌಂಟರ್’ ಪ್ರಕರಣ ಸಿಐಡಿ ತನಿಖೆಗೆ

ಹುಬ್ಬಳ್ಳಿ: ರಾಜ್ಯ ಸರ್ಕಾರವು ನಗರದಲ್ಲಿ ಬಾಲಕಿ ಹತ್ಯೆಗೈದ ಆರೋಪಿಯ ‘ಎನ್ ಕೌಂಟರ್’ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಿ ಆದೇಶ ಹೊರಡಿಸಿದೆ. ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗಿದ್ದು, ಏಪ್ರಿಲ್‌ 16 ಅಥವಾ ಏಪ್ರಿಲ್‌ 17ರಿಂದ ಅಧಿಕಾರಿಗಳು ಪ್ರಕರಣದ ತನಿಖೆ ಆರಂಭಿಸಲಿದ್ದಾರೆ.

5 ವರ್ಷದ ಬಾಲಕಿಯನ್ನು ಹತ್ಯೆ ಮಾಡಿದ್ದ ಆರೋಪಿ ಪೊಲೀಸರ ಗುಂಡೇಟೆಗೆ ಬಲಿಯಾಗಿದ್ದಾನೆ. ಎದೆಗೆ ಗುಂಡು ತಗುಲಿದ್ದರಿಂದ ಆರೋಪಿ ರಿತೇಶ್ ಕುಮಾರ್ ಮೃತಪಟ್ಟಿದ್ದಾನೆ. ಪೊಲೀಸರ ಗುಂಡೇಟಿಗೆ ಬಿಹಾರ ಮೂಲದ ರಿತೇಶ್ ಕುಮಾರ್ ಬಲಿಯಾಗಿದ್ದಾನೆ.

ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯಲ್ಲಿ ಆಟವಾಡುತ್ತಿದ್ದ ಬಾಲಕಿಯನ್ನು ಚಾಕೊಲೇಟ್ ಕೊಡಿಸುವುದಾಗಿ ಕರೆದೊಯ್ದ ಆರೋಪಿ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಯನ್ನು ನಡೆಸಿದ್ದರು.

ಇದನ್ನೂ ಓದಿ: ಚಿತ್ರದುರ್ಗ| ಉದ್ಯಮಿಗೆ ಜೈಲಲ್ಲಿರುವ ಕೊಲೆ ಆರೋಪಿಯಿಂದ ಜೀವ ಬೆದರಿಕೆ

ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಪರಾರಿಯಾಗಲು ಮುಂದಾಗಿದ್ದ ವೇಳೆ ಫೈರಿಂಗ್ ಮಾಡಲಾಗಿತ್ತು. ಎದೆಗೆ ಗುಂಡು ತಗುಲಿ ರಿತೇಶ್ ಕುಮಾರ್ ಮೃತಪಟ್ಟಿದ್ದಾನೆ.

35 ವರ್ಷದ ರಿತೇಶ್ ಕುಮಾರ್ ಹಲವಾರು ತಿಂಗಳಿನಿಂದ ಹುಬ್ಬಳ್ಳಿಯಲ್ಲಿ ನೆಲೆಸಿದ್ದ. ದೃಶ್ಯಗಳನ್ನು ಆಧರಿಸಿ ತನಿಖೆ ನಡೆಸಲಾಗಿತ್ತು. ಮಾಹಿತಿ ಆಧರಿಸಿ ಆರೋಪಿಯನ್ನು ಬಂಧಿಸಲು ಹೋಗಿದ್ದ ವೇಳೆ ಪೊಲೀಸರ ಮೇಲೆ ಕಲ್ಲು ತೂರಿ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ.

ಈ ವೇಳೆ ಪಿಎಸ್‌ಐ ಅನ್ನಪೂರ್ಣ ಫೈರಿಂಗ್ ಮಾಡಿದ್ದಾರೆ. ಘಟನೆಯಲ್ಲಿ ಪಿಎಸ್‌ಐ ಅನ್ನಪೂರ್ಣ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು.

ಇದನ್ನೂ ನೋಡಿ: ಅಂಬೇಡ್ಕರ್‌ ಸ್ಥಾಪಿಸಿದ “ಅಖಿಲ ಭಾರತ ಪರಿಶಿಷ್ಟ ಜಾತಿಗಳ ಒಕ್ಕೂಟ” AISCF ಪಕ್ಷದ ಪ್ರಣಾಳಿಕೆಯಲ್ಲಿ ಏನಿದೆ?

Donate Janashakthi Media

Leave a Reply

Your email address will not be published. Required fields are marked *