ಜನ ಸಂಪರ್ಕಕ್ಕೆ ವಾಟ್ಸಾಪ್ ಚಾನೆಲ್ ಆರಂಭಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ

ಬೆಂಗಳೂರು: ಸಾಮಾಜಿಕ ಜಾಲತಾಣವಾದ ವಾಟ್ಸಾಪ್ ಹೊಸ ಫೀಚರ್ ವಾಟ್ಸಾಪ್ ಚಾನೆಲ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಆರಂಭಿಸಿದ್ದಾರೆ.

ಇದನ್ನೂ ಓದಿ:ನಾನು ನಾನೇ-ನಾನು ದೇವರಾಜ ಅರಸು ಆಗಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಸಾರ್ವಜನಿಕರು ಈ ವಾಟ್ಸಾಪ್ ಖಾತೆ ಫಾಲೋ ಮಾಡಬಹುದಾಗಿದೆ. ಸರ್ಕಾರವೊಂದರ ಮುಖ್ಯಸ್ಥರಲ್ಲಿ ವಾಟ್ಸಾಪ್ ಚಾನೆಲ್ ಅನ್ನು ಸಿದ್ದರಾಮಯ್ಯ ಆರಂಭಿಸಿದ್ದು,  ಈ ರೀತಿ ಚಾನಲ್‌ ಆರಂಭಿಸಿ ಜನ ಸಂಪರ್ಕ ಸಾಧಿಸುವ ನಿಟ್ಟಿನಲ್ಲಿ ಮುಂದಡಿ ಇಟ್ಟಿರುವ ಸಿದ್ದರಾಮಯ್ಯ ಅವರು ದೇಶದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಪೈಕಿ ವಾಟ್ಸಾಪ್ ಚಾನೆಲ್ ಆರಂಭಿಸಿದವರಲ್ಲಿ ಒಬ್ಬರಾಗಿದ್ದಾರೆ. ಕಳೆದ ವಾರವಷ್ಟೇ ವಾಟ್ಸಾಪ್ ಚಾನೆಲ್ ಹೊಸ ಆವಿಷ್ಕಾರ ಪರಿಚಯಿಸಲಾಗಿದೆ.

ಸೆಪ್ಟೆಂಬರ್ 12ರಂದು ಸಿಎಂ ಚಾನೆಲ್ ಆರಂಭಿಸಿದ್ದು, 50 ಸಾವಿರಕ್ಕೂ ಅಧಿಕ ಫಾಲೋಯರ್ಸ್ ಹೊಂದಿದ್ದಾರೆ. ಜನರಿಗೆ ಬೆರಳ ತುದಿಯಲ್ಲಿಯೇ ಸರ್ಕಾರದ ದೈನಂದಿನ ಮಾಹಿತಿ ಒದಗಿಸಿ ಆಡಳಿತ ಪಾರದರ್ಶಕವಾಗಿಸಲು ಈ ವಾಟ್ಸಾಪ್ ಚಾನೆಲ್ ಕಾರ್ಯಾರಂಭ ಮಾಡಲಾಗಿದೆ. Chief Minister of Karnataka ಎಂದು ಸರ್ಚ್ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಅವರ ಅಧಿಕೃತ ವಾಟ್ಸಾಪ್ ಚಾನಲ್ ಫಾಲೋ ಮಾಡಬಹುದಾಗಿದೆ.

ಈ ಚಾನೆಲ್‌ನಲ್ಲಿ ಸಿಎಂ ದೈನಂದಿನ ಚಟುವಟಿಕೆ, ತೆಗೆದುಕೊಂಡ ಮಹತ್ವದ ನಿರ್ಧಾರಗಳು, ಸಭೆಗಳ ಪ್ರಮುಖ ಅಂಶಗಳು, ಹೊಸ ಯೋಜನೆ ಮಾಹಿತಿ, ಆರೋಪ ಅಥವಾ ಪ್ರಚಲಿತ ಘಟನೆಗಳಿಗೆ ಪ್ರತಿಕ್ರಿಯೆಗಳು ಸೇರಿದಂತೆ ಸಾಕಷ್ಟು ಮಾಹಿತಿಯು ನೇರವಾಗಿ ಸಿಗಲಿದೆ. ಇನ್ನು ಚಾನೆಲ್‌ಗಳಲ್ಲಿ ಬಂದ ಸಂದೇಶಗಳಿಗೆ ತಮ್ಮ ಪ್ರತಿಕ್ರಿಯೆಯನ್ನು ಇಮೋಜಿ ಬಳಸಿ ನೀಡುವ ಅವಕಾಶ ಇದೆ.

ವಾಟ್ಸಾಪ್ 

ವಿಡಿಯೋ ನೋಡಿ:ಪೊಲೀಸ್‌ ಇಲಾಖೆಯ ‘ಲೋಕಸ್ಪಂದನ’ ಬಗ್ಗೆ ನಟ ರಮೇಶ್‌ ಅರವಿಂದ್‌ ಜಾಗೃತಿ Janashakthi Media

Donate Janashakthi Media

Leave a Reply

Your email address will not be published. Required fields are marked *