ಬೆಂಗಳೂರು: ಸಿಎಂ ಸಿದ್ದರಾಮಯ್ಯ ಜೊತೆ ಆಗಸ್ಟ್ 4 ಸೋಮವಾರದಂದು ಸಂಧಾನ ಸಭೆ ವಿಫಲ ಆದ ಕಾರಣ, ಸಾರಿಗೆ ನೌಕರರು ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ನಾಳೆ ಮುಷ್ಕರ ನಡೆಯಲಿದೆ ಎಂದು ಕಾರ್ಮಿಕ ಸಂಘಟನೆ ಮುಖಂಡ ಅನಂತ ಸುಬ್ಬರಾವ್ ಘೋಷಣೆ ಮಾಡಿದ್ದಾರೆ.
ಹಿಂಬಾಕಿ ಬೇಡಿಕೆ, ಸಂಬಳ ಹೆಚ್ಚಳ ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಆಗಸ್ಟ್ 5 ರಿಂದ ಅನಿರ್ದಿಷ್ಠಾವಧಿ ಮುಷ್ಕರಕ್ಕೆ ಬೇಡಿಕೆ ಇಡಲಾಗಿದೆ. 1800 ಕೋಟಿ ಹಿಂಬಾಕಿ, ಕೋಟ್ಯಾಂತರ ರುಪಾಯಿ ಪಿಎಫ್ ಬಾಕಿ,ವೇತನ ಹೆಚ್ಚಳ ಸೇರಿದಂತೆ ಹತ್ತಾರು ಬೇಡಿಕೆಗಳನ್ನು ಸರ್ಕಾರದ ಮುಂದೆ ಇಡಲಾಗಿದೆ. ಆದರೆ ಹಿಂಬಾಕಿ ಕೊಡಲು ಸರ್ಕಾರ ಒಪ್ಪದಿದ್ದ ಕಾರಣ, ಸಭೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬರಲಾಗಿಲ್ಲ.
ಇದನ್ನೂ ಓದಿ: ಮಹಿಳೆಯರ ಪರಿಸ್ಥಿತಿ ನರಕದಂತಿದೆ: ಎ.ಆರ್. ಸಿಂಧು ವಿಷಾದ
ಸಭೆಯಿಂದ ಹೊರ ನಡೆದ ಕಾರ್ಮಿಕ ಇಲಾಖೆ ಮುಖಂಡರು
ನಾಳೆಯಿಂದ ಅನಿರ್ಧಿಷ್ಟಾವಧಿ ಸಾರಿಗೆ ನೌಕರರ ಮುಷ್ಕರ ಫಿಕ್ಸ್ ಆಗಿದೆ. ಮೂರನೇ ಸಂಧಾನ ಸಭೆ ಖುದ್ದು ಸಿಎಂ ನೇತೃತ್ವದಲ್ಲಿ ನಡೆದರೂ ಸಭೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬರಲಾಗಿಲ್ಲ. 38 ತಿಂಗಳ ಹಿಂಬಾಕಿ 1800 ಕೋಟಿ ಕೊಡಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇದಕ್ಕೆ 800 ಕೋಟಿ ರೂ ಆದರೂ ಈಗ ಪಾವತಿಸಿ, ನಂತರ ಕಂತಿನ ರೂಪದಲ್ಲಿ 1000 ಕೋಟಿ ರೂ ಕೊಡುವಂತೆ ಮನವಿ ಮಾಡಿದಾಗ ಸಿಎಂ ಇದಕ್ಕೆ ಒಪ್ಪಲಿಲ್ಲ ಎನ್ನಲಾಗಿದೆ. ಹೀಗಾಗಿ ಸಭೆಯು ವಿಫಲವಾಗಿದ್ದು, ಕಾರ್ಮಿಕ ಮುಖಂಡ ಮುಷ್ಕರದ ಘೋಷಣೆ ಮಾಡಿದ್ದಾರೆ. ನಾಳೆಯಿಂದಲೇ ಅನಿರ್ದಿಷ್ಟಾವಧಿ ಮುಷ್ಕರ ನಡೆಯಲಿದೆ.
ನೌಕರರು ಕೆಲಸಕ್ಕೆ ಗೈರಾದ್ರೆ ಶಿಸ್ತುಕ್ರಮ
ಈಗಾಗಲೇ ಸಾರಿಗೆನೌಕರರ ರಜೆ ರದ್ದು ಮಾಡಲಾಗಿದೆ. ಕೆಲಸಕ್ಕೆ ಬಾರದಿದ್ದರೆ ಸಂಬಳ ಕಟ್ ಎಂದು ನೌಕರರಿಗೆ ಸಂದೇಶ ರವಾನಿಸಲಾಗಿದೆ. ಮುಷ್ಕರದಲ್ಲಿ ಭಾಗಿಯಾಗದೆ ಕರ್ತವ್ಯಕ್ಕೆ ಹಾಜರಾಗಲು ಸೂಚಿಸಲಾಗಿದೆ. ಅಲ್ಲದೆ ಗಯರಾಗುವವರ ಮೇಲೆ ಶಿಸ್ತುಕ್ರಮ ಜಾರಿ ಮಾಡುವ ಬಗ್ಗೆಯೂ ಎಚ್ಚರಿಕೆ ನೀಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಹಾಗೂ ಒಕ್ಕೂಟದೊಂದಿದೆ ವಿಧಾನದೌಧದ ಸಮಿತಿ ಕೊಠಡಿಯಲ್ಲಿ ಸುದೀರ್ಘ ಸಭೆ ನಡೆಸಿದರು.
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಹಾಗೂ ಇಲಾಖಾ ಅಧಿಕಾರಿಗಳು ಮತ್ತು ಕಾರ್ಮಿಕ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.
ಇದನ್ನೂ ನೋಡಿ: ಧರ್ಮಸ್ಥಳದ ಕೊಲೆ ಪ್ರಕರಣ | ಉಗ್ರಪ್ಪ ಸಮಿತಿಯಲ್ಲಿ ಏನಿತ್ತು? ವಿ.ಎಸ್. ಉಗ್ರಪ್ಪ ಜೊತೆ ಮಾತುಕತೆJanashakthi Media
