ಸಿಎಂ ಸಿದ್ದರಾಮಯ್ಯ ದಾಖಲೆಯ 16ನೇ ರಾಜ್ಯ ಬಜೆಟ್‌ ಮಂಡನೆ

ಬೆಂಗಳೂರು: ನಾಳೆ ಮಾರ್ಚ್‌ 7 ರಂದು, ತಮ್ಮ ದಾಖಲೆಯ 16ನೇ ರಾಜ್ಯ ಬಜೆಟ್‌ ಅನ್ನು ಸಿಎಂ ಸಿದ್ದರಾಮಯ್ಯ ಮಂಡಿಸಲಿದ್ದಾರೆ. ಈ ಸಲದ ಆಯವ್ಯಯ 4 ಲಕ್ಷ ಕೋಟಿ ರೂ.ಗೂ ಮೀರುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಬಾರಿ ಸಿಎಂ ಆದಷ್ಟು ವಾಸ್ತವ ಹಾಗೂ ಸಮತೋಲನದ ಬಜೆಟ್‌ ಮಂಡಿಸುವ ಪ್ರಯತ್ನದಲ್ಲಿದ್ದಾರೆ.

ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳು, ಬೃಹತ್‌ ಯೋಜನೆಗಳಿಗೆ ಅನುದಾನ ಸೇರಿದಂತೆ ಹಲವು ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಬುದ್ಧಿವಂತಿಕೆಯಿಂದ ಬಜೆಟ್‌ಗೆ ತಯಾರಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ಬೈಕ್ ಸವಾರರಿಗೆ ನೋ ಎಂಟ್ರಿ!

ಕಳೆದ ಬಾರಿ ಸಿಎಂ ಸಿದ್ದರಾಮಯ್ಯ 4.71 ಲಕ್ಷ ಕೋಟಿ ರೂ. ಗಾತ್ರದ ಬಜೆಟ್‌ ಮಂಡಿಸಿದ್ದರು. ಕೇಂದ್ರ ಸರ್ಕಾರದಿಂದ ಬರಬೇಕಿದ್ದ ರಾಜ್ಯ ತೆರಿಗೆಯ ಪಾಲು, ಜಿಎಸ್‌ಟಿ ಹಂಚಿಕೆ ಕೊರತೆಯಿಂದಾಗಿ ರಾಜ್ಯದಲ್ಲಿ ಆದಾಯದ ಕೊರತೆಯಿತ್ತು. ಇದರಿಂದ ಗ್ಯಾರಂಟಿಗಳಿಗೆ ಹಾಗೂ ಯೋಜನೆಗಳಿಗೆ ಬಂಡವಾಳ ಹೂಡಿಕೆ ವೆಚ್ಚಗಳು ಕಷ್ಟವಾಗಿತ್ತು.

ಈ ಬಾರಿ ಸಿದ್ದರಾಮಯ್ಯ ಬಜೆಟ್‌ ಗಾತ್ರ ಹೆಚ್ಚಿಸಿ ಅದಕ್ಕೆ ಅನುಗುಣವಾಗಿ ಸಾಲ ಪಡೆಯುವ ಪ್ರಮಾಣವನ್ನು ಏರಿಕೆ ಮಾಡಿ ವಿತ್ತೀಯ ಕೊರತೆಯನ್ನು ಮಿತಿಯಲ್ಲಿ ತೋರಿಸಲು ಪ್ರಯತ್ನ ನಡೆಸುವ ಸಾಧ್ಯತೆ ಇದೆ ಎಂದು ಆರ್ಥಿಕ ತಜ್ಞರು ತಿಳಿಸಿದ್ದಾರೆ.

ಇದನ್ನೂ ನೋಡಿ: ಶ್ರಮಜೀವಿಗಳ ಹೋರಾಟ 3ನೇ ದಿನಕ್ಕೆ | ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಪ್ರತಿಭಟನೆ |CITU

Donate Janashakthi Media

Leave a Reply

Your email address will not be published. Required fields are marked *