ತೀವ್ರ ಜ್ವರದಿಂದ ಸಿಎಂ ಸಿದ್ದರಾಮಯ್ಯ ಪತ್ನಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ತೀವ್ರ ಜ್ವರದಿಂದ ಬಳಲುತ್ತಿರುವ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಅವರನ್ನು ಕಳೆದ ರಾತ್ರಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ತುರ್ತು ನಿಗಾ ಘಟಕದಲ್ಲಿ ಪಾರ್ವತಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು. ಆರೋಗ್ಯ ಸ್ಥಿರವಾಗಿದೆ. ಇಂದು ವೈದ್ಯರು ವಾರ್ಡ್‌ಗೆ ಸ್ಥಳಾಂತರಿಸಲಿದ್ದಾರೆ ಎಂದು ಮುಖ್ಯಮಂತ್ರಿಯ ಕಚೇರಿ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ.

ಇದನ್ನೂ ಓದಿ:ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

ಸಿದ್ಧರಾಮಯ್ಯ ಅವರ ಪುತ್ರ ಯತೀಂದ್ರ ಅವರು ತಾಯಿಯ ಜೊತೆ ಇದ್ದಾರೆ. ಪತ್ನಿಯ ಅನಾರೋಗ್ಯದ ಕಾರಣ  ಸಿಎಂ ದೆಹಲಿ ಪ್ರವಾಸ ಸಮಯ ಬದಲಾವಣೆ ಮಾಡಲಾಗಿದೆ. ಮುಖ್ಯಮಂತ್ರಿಗಳು ಬೆಳಗ್ಗೆ 9.50 ಕ್ಕೆ ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಬೇಕಿತ್ತು. ಈಗ 11.30 ಗೆ ಹೆಚ್ ಎ ಎಲ್ ನಿಂದ ವಿಶೇಷ ವಿಮಾನ ಮೂಲಕ ದೆಹಲಿ ಗೆ ತೆರಳಲಿದ್ದಾರೆ.ದೆಹಲಿಗೆ ತೆರಳುವ ಮುನ್ನ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಪತ್ನಿ ಆರೋಗ್ಯ ವಿಚಾರಿಸಲಿದ್ದಾರೆ. ಆರೋಗ್ಯ ವಿಚಾರಿಸಿದ ಬಳಿಕ ದೆಹಲಿಯತ್ತ ಸಿಎಂ ತೆರಳಲಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *