ವಂದೇ  ಭಾರತ್‌ ಎಕ್ಸ್‌ ಪ್ರೆಸ್‌ ರೈಲಿನಲ್ಲಿ ನೀಡಲಾದ ಆಹಾರದಲ್ಲಿ ಜಿರಳೆ ಪತ್ತೆ

ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ನೀಡಿದ ಆಹಾರದಲ್ಲಿ ಜಿರಳೆ ಪತ್ತೆಯಾಗಿದೆ ಎಂದು ಪ್ರಯಾಣಿಕರೊಬ್ಬರು ಟ್ವೀಟ್‌ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.

ಇತ್ತೀಚೆಗೆ ಪ್ರಯಾಣಿಕರೊಬ್ಬರು ಭೋಪಾಲ್‌ನಿಂದ ಗ್ವಾಲಿಯರ್‌ಗೆ ಪ್ರಯಾಣಿಸುವಾಗ ಸಿಬ್ಬಂದಿ ನೀಡಿದ ಪರೋಟದಲ್ಲಿ ಜಿರಳೆ ಪತ್ತೆಯಾಗಿತ್ತು. ಈ ಬಗ್ಗೆ ಪ್ರಯಾಣಿಕರೊಬ್ಬರು ಜಿರಳೆ ಇದ್ದ ಪರೋಟ ಪೋಟೊಗಳನ್ನು ಟ್ವೀಟ್‌ ಮಾಡಿದ್ದರು.

ಇದನ್ನೂ ಓದಿ:ಭೋಪಾಲ್-ದೆಹಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ; ಪ್ರಯಾಣಿಕರು ಸುರಕ್ಷಿತ

ವಂದೇ ಭಾರತ್ ಎಕ್ಸ್​ಪ್ರೆಸ್​ ರೈಲಿನಲ್ಲಿ ನೀಡಲಾದ ಆಹಾರದಲ್ಲಿ ಹುಳು ಪತ್ತೆಯಾಗಿರುವ ಕುರಿತು ಪುಂಡೂಕ್ ಎಂಬ ಟ್ವಿಟ್ಟರ್ ಖಾತೆಯಿಂದ ಫೋಟೊವನ್ನು ಹಂಚಿಕೊಳ್ಳಲಾಗಿದೆ. ಐಆರ್​ಸಿಟಿಸಿಯನ್ನು ಟ್ಯಾಗ್ ಮಾಡಲಾಗಿದೆ. ಪ್ರಯಾಣಿಕರಿಗೆ ಆದ ತೊಂದರೆ ಬಗ್ಗೆ  ಐಆರ್​ಸಿಟಿಸಿ ಕ್ಷಮೆ ಯಾಚಿಸಿದೆ. ಈ ಕೆಟ್ಟ ಅನುಭವದಿಂದ ತೊಂದರೆಗೊಳಗಾದ ಪ್ರಯಾಣಿಕರಿಗೆ ಪರ್ಯಾಯ ಆಹಾರ ವ್ಯವಸ್ಥೆ ಮಾಡಲಾಗಿತ್ತು. ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದ ಎಂದು ಭೋಪಾಲ್‌ನ ವಿಭಾಗೀಯ ರೈಲ್ವೆ ಮಾನ್ಯೇಜರ್‌ ತಿಳಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *