ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ

ಶಿವಮೊಗ್ಗ:  ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿಯ ಸರ್ಕಾರಿ ಅಧಿಕಾರಿಯೊಬ್ಬರು ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆರೋಪವೊಂದು ಕೇಳಿ ಬಂದಿದೆ.

ಬೆಂಗಳೂರಿನಲ್ಲಿರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ (52) ಆತ್ಮಹತ್ಯೆ ಮಾಡಿಕೊಂಡವರು. ಇವರು ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್ ನಲ್ಲಿನ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ. ಹಗರಣ ನಡೆದಿತ್ತು.

ಇದನ್ನು ಓದಿ : ಕಸ ವಿಲೇವಾರಿಗೆ ಹೊಸ ಯೋಜನೆ ರೂಪಿಸಿರುವ ರಾಜ್ಯ ಸರ್ಕಾರ

ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೇ, ಚಂದ್ರಶೇಖರ್ ಡೆತ್ ನೋಟ್ ಬರೆದಿಟ್ಟಿದ್ದಾರೆ ಎನ್ನಲಾಗಿದ್ದು, ಪದ್ಮಾನಾಭ, ಪರಶುರಾಮ್, ಶುಚಿಸ್ವತ ಅಧಿಕಾರಿಗಳೇ ನನ್ನ ಸಾವಿಗೆ ಕಾರಣ ಎಂದು ಬರೆದಿದ್ದಾರೆ ಎನ್ನಲಾಗಿದೆ.

ಈ ಕುರಿತು ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮೇಲಾಧಿಕಾರಿ

ಇದನ್ನು ನೋಡಿ : ಐದು ಹಂತದ ಮತದಾನ ಮುಗಿದರೂ ವಿವರ ನೀಡದ ಚುನಾವಣಾ ಆಯೋಗ : ಆಯೋಗದ ಸುತ್ತ ಅನುಮಾನದ ಹುತ್ತJanashakthi Media

Donate Janashakthi Media

Leave a Reply

Your email address will not be published. Required fields are marked *