ಕರ್ನಾಟಕದಲ್ಲಿ ಬರ ಪರಿಸ್ಥಿತಿ ಬರಲು ಕಾಂಗ್ರೆಸ್‌ ಕಾರಣ-ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಕರ್ನಾಟಕದಲ್ಲಿ ಬರ ಪರಿಸ್ಥಿತಿ ಬರಲು ಕಾಂಗ್ರೆಸ್‌ ಸರ್ಕಾರವೇ ಕಾರಣ. ಕೇಂದ್ರಕ್ಕೆ ಮನವಿಯನ್ನು ಕಳುಹಿಸುವಾಗ ಕರ್ನಾಟಕದ ವಾಸ್ತವ ಸ್ಥಿತಿಯನ್ನು ಕಳಿಸಿರಲಿಲ್ಲ. ಸದ್ಯಕ್ಕೆ ಸಿಎಂ ಸಿದ್ದರಾಮಯ್ಯ ತಮ್ಮ ಸರ್ಕಾರದ ಬೊಕ್ಕಸದಿಂದ ರಾಜ್ಯದ ರೈತರಿಗೆ ಹಣವನ್ನು ಬಿಡುಗಡೆ ಮಾಡಲಿ ಎಂದು ಮಾಜಿ ಸಿಎಂ ಆಗಿರುವ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜಕೀಯ ಪ್ರೇರಿತ ದೃಷ್ಟಿಯಿಂದ ಸಿದ್ದರಾಮಯ್ಯ ಬರಪರಿಹಾರಕ್ಕಾಗಿ ಸುಪ್ರಿಂಕೋರ್ಟಿಗೆ ಹೋಗಿದ್ದಾರೆ. 15 ನೇ ಹಣಕಾಸು ಕಡಿಮೆ ಆಗಲು ಸಿದ್ದರಾಮಯ್ಯನವರು ಕಾರಣ. ಕೇಂದ್ರಕ್ಕೆ ಅವರು ರಾಜ್ಯದ ನೈಜ್ಯಸ್ಥಿತಿಯನ್ನ ಈಗಿನ ಸರ್ಕಾರ ಹೇಳಿಕೊಳ್ಳಲಿಲ್ಲಾ ಅದಕ್ಕೆ ಈ ಪರಿಸ್ಥಿತಿ ನಿರ್ಮಾಣವಾಗಿದೆ.ಹಿಂದಿನ ಯುಪಿಎ ಸರ್ಕಾರ ಇದ್ದಾಗ 8-10 ತಿಂಗಳ ನಂತರ ಪರಿಹಾರ ನೀಡಿದ ಉದಾಹರಣೆಯಿದೆ. ಇವರಿಗೆ ರೈತರ ಬಗ್ಗೆ ಕಳಕಳಿ ಇಲ್ಲಾ. ರೈತ ವಿರೋಧಿ ಸರ್ಕಾರ ಇದಾಗಿದೆ ಎಂದರು.

ರಾಜ್ಯದ ಬಿಜೆಪಿಯ 25 ಸಂಸದರು ಪುಕ್ಕಲರು ಎನ್ನುವ ಸಿದ್ದರಾಮಯ್ಯರ ಹೇಳಿಕೆಗೆ ತಿರುಗೇಟು ನೀಡಿದ ಬಸವರಾಜ ಬೊಮ್ಮಾಯಿ, ಒಂದು ವ್ಯವಸ್ಥೆಯೊಳಗೆ ಕೆಲಸ ಮಾಡುವಾಗ ವ್ಯಕ್ತಿಗತ ಪ್ರಶ್ನೆ ಎನ್ನುವುದು ಬರುವುದಿಲ್ಲ. ನರೇಂದ್ರ ಮೋದಿಯವರ ಕಾಲದಲ್ಲಿ ಯಾವುದೇ ಕೂಡ ಲಾಭಿ ಮಾಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಅಧಿಕಾರಿಗಳು ಕೆಲಸ ಮಾಡುತ್ತಾರೆ.ಹೀಗಾಗಿ ರಾಜ್ಯಕ್ಕೆ ಕೇಂದ್ರಕ್ಕೆ ಏನು ಸಿಗಬೇಕು ಅದೆಲ್ಲವೂ ಸಿಗುತ್ತದೆ.

ಇದನ್ನೂ ಓದಿ: ಕರ್ನಾಟಕ ರಾಷ್ಟ್ರೀಯ ಅಂತರರಾಷ್ಟ್ರೀಯ ಇತರೆ ವಿದ್ಯಮಾನ ಬೆಂಗಳೂರು : ₹ 30.92 ಕೋಟಿ ಮೌಲ್ಯದ ನಕಲಿ ನೋಟು ವಶ, 5 ಮಂದಿ ಬಂಧನ

ಕಂಗ್ರೆಸ್‌ನವರು ಹೈಕಮಾಂಡ್‌ ಕಡೆ ಹೋಗಿ ಅರ್ಜಿ ಕೊಡಬೇಕು. ಇದು ಕಾಂಗ್ರೆಸ್‌ನವರ ಸ್ಟೈಲ್‌. ಇವರ ರೀತಿ ಬಿಜೆಪಿಯವರಾದ ನಾವು ಮಾಡಲು ಬರುವುದಿಲ್ಲ. ಕಾಂಗ್ರೆಸ್‌ನವರಂತೆ ನಾವು ಮೋದಿಯವರ ಮುಂದೆ ಕೈಕಟ್ಟಿ ನಿಲ್ಲುವ ಪ್ರಶ್ನೆಯೇ ಇಲ್ಲ. ನಾವು ಮೋದಿಯವರ ಜೊತೆಗೆ ನಿಲ್ಲುತ್ತೇವೆ. ಅವರನ್ನು ಬೆಂಬಲಿಸುತ್ತೇವೆ.60 ವರ್ಷದಲ್ಲಿ ಹೈವೇ ಕೆಲಸ ಮಾಡಲು ಕಾಂಗ್ರೆಸ್‌ನವರಿಂದ ಆಗಿಲ್ಲ. ಆದರೆ, ನಾವು ಈಗಾಗಲೇ ನಾವು 3500 ಕಿಮೀ ಹೈವೇ ಕೆಲಸ ಮಾಡಿದ್ದೇವೆ.

ಬರೀ ಐದು ವರ್ಷದಲ್ಲಿ 3500 ಹೈವೇ ಕೆಲಸವನ್ನು ಮಾಡಿದ್ದೇವೆ.ಇನ್ನೂ ಮೂರು ಸಾವಿರ ಹೈವೇ ಕೆಲಸ ಅನುಮೋದನೆ ಆಗಿದೆ.ರೈಲ್ವೆದಲ್ಲಿಯೂ ಕೂಡ ಕಳೆದ ಬಜೆಟ್ ನಲ್ಲಿ 3500-7000 ಕಿಮೀ ವರೆಗೆ ಅನುಮೋದನೆ ಆಗಿದೆ.ಇಂತಹ ಕೆಲಸಗಳನ್ನು ನಾವೇನು ಕೇಂದ್ರಕ್ಕೆ ಅರ್ಜಿ ಕೊಟ್ಟು ಮಾಡಿಸಿಲ್ಲಾ.ಕೇಂದ್ರದ ಬಿಜೆಪಿಯೇ ಅದನ್ನು ಸ್ವಯಂ ಆಗಿ ಮಾಡಿದೆ ಎಂದು ಬಿಜೆಪಿಯ ನಡೆಯನ್ನು ಸಮರ್ಥಿಸಿಕೊಂಡರು.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ 200 ಸ್ಥಾನಕ್ಕೆ ಸ್ಪರ್ಧಿಸಿ 543 ಸ್ಥಾನಗಳನ್ನು ಗೆಲ್ಲುತ್ತೇವೆ ಎನ್ನುತ್ತಿದ್ದಾರೆ. ಲೋಕಸಭೆಯ ಎಲ್ಲಾ ಸ್ಥಾನಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಹಾಕಿ ಸ್ಪರ್ಧಿಸುತ್ತಿಲ್ಲ.ಹೆಚ್ಚಿನ ಸ್ಥಾನಗಳಲ್ಲಿ ಸ್ಪರ್ಧೇ ಮಾಡದೇ ಅವರು ಅಧಿಕಾರಕ್ಕೆ ಹೇಗೆ ಬರುತ್ತಾರೆ? ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಬಸವರಾಜ ಬೊಮ್ಮಾಯಿ ಮರುಪ್ರಶ್ನೆ ಮೂಲಕ ಉತ್ತರಿಸಿದರು. ಇವರು ಅಧಿಕಾರಕ್ಕೆ ಬರಲು ಚಾನ್ಸೇ ಇಲ್ಲ ಎಂದು ಖಡಕ್‌ ಆಗಿ ಹೇಳಿದರು.

ಡಿಎಂಕೆದು ಪ್ರಣಾಳಿಕೆ ಬೇರೆ, ಟಿಎಂಸಿದು ಬೇರೆ, ಇನ್ನು ಆಮ್‌ ಆದ್ಮಿ ಪಕ್ಷದ್ದು ಬೇರೆ. ಕಾಂಗ್ರೆಸ್‌ದು ಮತ್ತೊಂದು. ಜನರು ಯಾವುದನ್ನು ನಂಬಬೇಕು ಹೇಳಿ. ಜನರಿಗೆ ಅಪ್ಪಟ ಸುಳ್ಳು ಹೇಳಿ ಇಂತಹ ಆ‍ಶ್ವಾಸನೆ ಕೊಡಬೇಕು. ಒಂದು ಲಕ್ಷ ಕೊಡುತ್ತೇವೆ, ಎರಡು ಲಕ್ಷ ಕೊಡುತ್ತೇವೆ ಎಂದು ಜನರಿಗೆ ಕಾಂಗ್ರೆಸ್‌, ಸುಳ್ಳು ಹೇಳಿ ಮೋಸ ಮಾಡುವುದನ್ನು ಬಿಡಬೇಕು.ಕೆಲವು ಸ್ಥಾನಗಳಿಗಷ್ಟೇ ಕಾಂಗ್ರೆಸ್‌ ಸ್ಪರ್ಧೆ ಮಾಡುತ್ತಿದೆ. ಮೊದಲು 543 ಸ್ಥಾನಗಳಲ್ಲಿ ಸ್ಪರ್ಧೆ ಮಾಡಿ,ಆಮೇಲೆ ಇಂತಹ ಆಶ್ವಾಸನೆ ಕೊಡಿ ಎಂದು ಬೊಮ್ಮಾಯಿ ಕಾಂಗ್ರೆಸಿಗೆ ಚಾಲೆಂಜ್‌ ಹಾಕಿದರು.

Donate Janashakthi Media

Leave a Reply

Your email address will not be published. Required fields are marked *